AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆನಿಲಿಯಾ ಡಿಸೋಜಾ ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದು ಯಾವ ನಟನಿಗಾಗಿ?

ಮೂವೀ ಆರ್ಟಿಸ್ಟ್​ ಅಸೋಸಿಯೇಷನ್ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬ ಪ್ರಶ್ನೆಯನ್ನು ಜೆನಿಲಿಯಾ ಡಿಸೋಜಾ ಅವರಿಗೆ ಕೇಳಲಾಯಿತು. ಅದಕ್ಕೆ ಅವರು ಬುದ್ಧಿವಂತಿಕೆಯ ಉತ್ತರ ನೀಡಿದ್ದಾರೆ.

ಜೆನಿಲಿಯಾ ಡಿಸೋಜಾ ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದು ಯಾವ ನಟನಿಗಾಗಿ?
ಜೆನಿಲಿಯಾ ಡಿಸೋಜಾ
Follow us
TV9 Web
| Updated By: ಮದನ್​ ಕುಮಾರ್​

Updated on: Oct 10, 2021 | 3:50 PM

ನಟಿ ಜೆನಿಲಿಯಾ ಡಿಸೋಜಾ ಅವರಿಗೆ ಎಲ್ಲ ಭಾಷೆಯಲ್ಲೂ ಅಭಿಮಾನಿಗಳಿದ್ದಾರೆ. ಅವರ ನಟನೆ ಮತ್ತು ಸೌಂದರ್ಯಕ್ಕೆ ಕೋಟ್ಯಂತರ ಫ್ಯಾನ್ಸ್​ ಫಿದಾ ಆಗಿದ್ದಾರೆ. ಸದ್ಯ ಪತಿ ರಿತೇಶ್​ ದೇಶಮುಖ್​ ಜೊತೆಗೆ ಜೆನಿಲಿಯಾ ಹಾಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಈ ನಡುವೆ ಅವರು ಮುಂಬೈನಿಂದ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದಾರೆ. ತೆಲುಗು ಚಿತ್ರರಂಗದ ಕಲಾವಿದರ ಸಂಘಕ್ಕೆ (ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​) ಚುನಾವಣೆ ನಡೆದಿದೆ. ಈ ಸಂಘದಲ್ಲಿ ಜೆನಿಲಿಯಾ ಕೂಡ ಸದಸ್ಯತ್ವ ಹೊಂದಿದ್ದು, ತಮ್ಮ ಮತ ಚಲಾಯಿಸಲು ಅವರು ಹೈದರಾಬಾದ್​ಗೆ ಬಂದಿಳಿದಿದ್ದಾರೆ. ಬಹುದಿನಗಳ ಬಳಿಕ ಅವರನ್ನು ಕಂಡ ತೆಲುಗು ಫ್ಯಾನ್ಸ್​ ಫುಲ್​ ಖುಷ್​ ಆಗಿದ್ದಾರೆ.

ಮೂವೀ ಆರ್ಟಿಸ್ಟ್​ ಅಸೋಸಿಯೇಷನ್ ಚುನಾವಣೆಯಲ್ಲಿ ಪ್ರಕಾಶ್​ ರಾಜ್​ ಮತ್ತು ವಿಷ್ಣು ಮಂಚು ಅವರು ಮುಖಾಮುಖಿಯಾಗಿ ಸ್ಪರ್ಧಿಸಿದ್ದಾರೆ. ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಇಬ್ಬರೂ ಹಣಾಹಣಿ ನಡೆಸಿದ್ದಾರೆ. ಹಾಗಾದರೆ ಜೆನಿಲಿಯಾ ಅವರು ಇವರಿಬ್ಬರ ಪೈಕಿ ಯಾರಿಗೆ ವೋಟ್​ ಮಾಡಿದ್ದಾರೆ? ಈ ಪ್ರಶ್ನೆ ಎಲ್ಲರ ಮನದಲ್ಲೂ ಕೊರೆಯುತ್ತಿದೆ. ಸದ್ಯಕ್ಕಂತೂ ಟಾಲಿವುಡ್​ನಲ್ಲಿ ಜೆನಿಲಿಯಾ ಸಕ್ರಿಯವಾಗಿಲ್ಲ. ಹಾಗಿದ್ದರೂ ಕೂಡ ಅವರು ಸಮಯ ಮಾಡಿಕೊಂಡು ಮತ ಹಾಕಲು ಬಂದಿದ್ದಾರೆ. ವಿಷ್ಣು ಮಂಚು ಜೊತೆ ಜೆನಿಲಿಯಾ ಅವರು ‘ಧಿ’ ಚಿತ್ರದಲ್ಲಿ ನಟಿಸಿದ್ದರು. ಹಾಗಾಗಿ ವಿಷ್ಣು ಮಂಚುಗೆ ಅವರು ವೋಟ್​ ಹಾಕಿದ್ದಾರೆ ಎಂದು ಅಭಿಮಾನಿಗಳು ಅಂದಾಜಿಸಿದ್ದಾರೆ.

ಈ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬ ಪ್ರಶ್ನೆಯನ್ನು ಜೆನಿಲಿಯಾಗೆ ಕೇಳಲಾಯಿತು. ಅದಕ್ಕೆ ಅವರು ಬುದ್ಧಿವಂತಿಕೆಯ ಉತ್ತರ ನೀಡಿದ್ದಾರೆ. ‘ತೆಲುಗು ಚಿತ್ರರಂಗ ನನಗೆ ಆಪ್ತವಾಗಿದೆ. ಇಲ್ಲಿನ ಜನರು ನನಗೆ ಕುಟುಂಬದ ಸದಸ್ಯರಿದ್ದಂತೆ. ಉತ್ತಮ ವ್ಯಕ್ತಿಯೇ ಈ ಚುನಾವಣೆಯಲ್ಲಿ ಗೆಲ್ಲುತ್ತಾರೆ. ಶೀಘ್ರದಲ್ಲೇ ನಾವೆಲ್ಲರೂ ಅಧ್ಯಕ್ಷರ ಸ್ಥಾನದಲ್ಲಿ ಆಕರ್ಷಕ ವ್ಯಕ್ತಿಯನ್ನು ನೋಡುತ್ತೇವೆ’ ಎಂದು ಹೇಳಿದ್ದಾರೆ. ಅವರು ಯಾರ ಬಗ್ಗೆ ಈ ಮಾತು ಹೇಳಿರಬಹುದು ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.

ಸತ್ಯಂ, ಸೈ, ಹ್ಯಾಪಿ, ಬೊಮ್ಮರಿಲ್ಲು ಸೇರಿದಂತೆ ತೆಲುಗಿನ ಅನೇಕ ಸಿನಿಮಾಗಳಲ್ಲಿ ಜೆನಿಲಿಯಾ ನಟಿಸಿದ್ದಾರೆ. ಕನ್ನಡದ ‘ಸತ್ಯ ಇನ್​ ಲವ್​’ ಚಿತ್ರದಲ್ಲಿ ಶಿವರಾಜ್​ಕುಮಾರ್​ಗೆ ಅವರು ಜೋಡಿ ಆಗಿದ್ದರು. ಹಾಗಾಗಿ ಅವರಿಗೆ ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ಪ್ರೀತಿ ಇದೆ.

ಇದನ್ನೂ ಓದಿ:

ಚುನಾವಣೆಗೆ ನಿಂತ ಪ್ರಕಾಶ್​ ರಾಜ್​; ಮತಗಟ್ಟೆಗೆ ಬಂದು ವೋಟ್​ ಮಾಡಿದ ಪವನ್​ ಕಲ್ಯಾಣ್​, ಚಿರಂಜೀವಿ

ಈ ಅಸಭ್ಯ ಆಂಟಿ ತುಂಬಾನೇ ಓವರ್​ ಆ್ಯಕ್ಟಿಂಗ್​ ಎಂದ ಫ್ಯಾನ್​ಗೆ ಜೆನಿಲಿಯಾ ಡಿಸೋಜಾ ಕೊಟ್ರು ಸೈಲೆಂಟ್​ ಉತ್ತರ

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್