AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆನಿಲಿಯಾ ಡಿಸೋಜಾ ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದು ಯಾವ ನಟನಿಗಾಗಿ?

ಮೂವೀ ಆರ್ಟಿಸ್ಟ್​ ಅಸೋಸಿಯೇಷನ್ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬ ಪ್ರಶ್ನೆಯನ್ನು ಜೆನಿಲಿಯಾ ಡಿಸೋಜಾ ಅವರಿಗೆ ಕೇಳಲಾಯಿತು. ಅದಕ್ಕೆ ಅವರು ಬುದ್ಧಿವಂತಿಕೆಯ ಉತ್ತರ ನೀಡಿದ್ದಾರೆ.

ಜೆನಿಲಿಯಾ ಡಿಸೋಜಾ ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದು ಯಾವ ನಟನಿಗಾಗಿ?
ಜೆನಿಲಿಯಾ ಡಿಸೋಜಾ
TV9 Web
| Edited By: |

Updated on: Oct 10, 2021 | 3:50 PM

Share

ನಟಿ ಜೆನಿಲಿಯಾ ಡಿಸೋಜಾ ಅವರಿಗೆ ಎಲ್ಲ ಭಾಷೆಯಲ್ಲೂ ಅಭಿಮಾನಿಗಳಿದ್ದಾರೆ. ಅವರ ನಟನೆ ಮತ್ತು ಸೌಂದರ್ಯಕ್ಕೆ ಕೋಟ್ಯಂತರ ಫ್ಯಾನ್ಸ್​ ಫಿದಾ ಆಗಿದ್ದಾರೆ. ಸದ್ಯ ಪತಿ ರಿತೇಶ್​ ದೇಶಮುಖ್​ ಜೊತೆಗೆ ಜೆನಿಲಿಯಾ ಹಾಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಈ ನಡುವೆ ಅವರು ಮುಂಬೈನಿಂದ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದಾರೆ. ತೆಲುಗು ಚಿತ್ರರಂಗದ ಕಲಾವಿದರ ಸಂಘಕ್ಕೆ (ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​) ಚುನಾವಣೆ ನಡೆದಿದೆ. ಈ ಸಂಘದಲ್ಲಿ ಜೆನಿಲಿಯಾ ಕೂಡ ಸದಸ್ಯತ್ವ ಹೊಂದಿದ್ದು, ತಮ್ಮ ಮತ ಚಲಾಯಿಸಲು ಅವರು ಹೈದರಾಬಾದ್​ಗೆ ಬಂದಿಳಿದಿದ್ದಾರೆ. ಬಹುದಿನಗಳ ಬಳಿಕ ಅವರನ್ನು ಕಂಡ ತೆಲುಗು ಫ್ಯಾನ್ಸ್​ ಫುಲ್​ ಖುಷ್​ ಆಗಿದ್ದಾರೆ.

ಮೂವೀ ಆರ್ಟಿಸ್ಟ್​ ಅಸೋಸಿಯೇಷನ್ ಚುನಾವಣೆಯಲ್ಲಿ ಪ್ರಕಾಶ್​ ರಾಜ್​ ಮತ್ತು ವಿಷ್ಣು ಮಂಚು ಅವರು ಮುಖಾಮುಖಿಯಾಗಿ ಸ್ಪರ್ಧಿಸಿದ್ದಾರೆ. ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಇಬ್ಬರೂ ಹಣಾಹಣಿ ನಡೆಸಿದ್ದಾರೆ. ಹಾಗಾದರೆ ಜೆನಿಲಿಯಾ ಅವರು ಇವರಿಬ್ಬರ ಪೈಕಿ ಯಾರಿಗೆ ವೋಟ್​ ಮಾಡಿದ್ದಾರೆ? ಈ ಪ್ರಶ್ನೆ ಎಲ್ಲರ ಮನದಲ್ಲೂ ಕೊರೆಯುತ್ತಿದೆ. ಸದ್ಯಕ್ಕಂತೂ ಟಾಲಿವುಡ್​ನಲ್ಲಿ ಜೆನಿಲಿಯಾ ಸಕ್ರಿಯವಾಗಿಲ್ಲ. ಹಾಗಿದ್ದರೂ ಕೂಡ ಅವರು ಸಮಯ ಮಾಡಿಕೊಂಡು ಮತ ಹಾಕಲು ಬಂದಿದ್ದಾರೆ. ವಿಷ್ಣು ಮಂಚು ಜೊತೆ ಜೆನಿಲಿಯಾ ಅವರು ‘ಧಿ’ ಚಿತ್ರದಲ್ಲಿ ನಟಿಸಿದ್ದರು. ಹಾಗಾಗಿ ವಿಷ್ಣು ಮಂಚುಗೆ ಅವರು ವೋಟ್​ ಹಾಕಿದ್ದಾರೆ ಎಂದು ಅಭಿಮಾನಿಗಳು ಅಂದಾಜಿಸಿದ್ದಾರೆ.

ಈ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬ ಪ್ರಶ್ನೆಯನ್ನು ಜೆನಿಲಿಯಾಗೆ ಕೇಳಲಾಯಿತು. ಅದಕ್ಕೆ ಅವರು ಬುದ್ಧಿವಂತಿಕೆಯ ಉತ್ತರ ನೀಡಿದ್ದಾರೆ. ‘ತೆಲುಗು ಚಿತ್ರರಂಗ ನನಗೆ ಆಪ್ತವಾಗಿದೆ. ಇಲ್ಲಿನ ಜನರು ನನಗೆ ಕುಟುಂಬದ ಸದಸ್ಯರಿದ್ದಂತೆ. ಉತ್ತಮ ವ್ಯಕ್ತಿಯೇ ಈ ಚುನಾವಣೆಯಲ್ಲಿ ಗೆಲ್ಲುತ್ತಾರೆ. ಶೀಘ್ರದಲ್ಲೇ ನಾವೆಲ್ಲರೂ ಅಧ್ಯಕ್ಷರ ಸ್ಥಾನದಲ್ಲಿ ಆಕರ್ಷಕ ವ್ಯಕ್ತಿಯನ್ನು ನೋಡುತ್ತೇವೆ’ ಎಂದು ಹೇಳಿದ್ದಾರೆ. ಅವರು ಯಾರ ಬಗ್ಗೆ ಈ ಮಾತು ಹೇಳಿರಬಹುದು ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.

ಸತ್ಯಂ, ಸೈ, ಹ್ಯಾಪಿ, ಬೊಮ್ಮರಿಲ್ಲು ಸೇರಿದಂತೆ ತೆಲುಗಿನ ಅನೇಕ ಸಿನಿಮಾಗಳಲ್ಲಿ ಜೆನಿಲಿಯಾ ನಟಿಸಿದ್ದಾರೆ. ಕನ್ನಡದ ‘ಸತ್ಯ ಇನ್​ ಲವ್​’ ಚಿತ್ರದಲ್ಲಿ ಶಿವರಾಜ್​ಕುಮಾರ್​ಗೆ ಅವರು ಜೋಡಿ ಆಗಿದ್ದರು. ಹಾಗಾಗಿ ಅವರಿಗೆ ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ಪ್ರೀತಿ ಇದೆ.

ಇದನ್ನೂ ಓದಿ:

ಚುನಾವಣೆಗೆ ನಿಂತ ಪ್ರಕಾಶ್​ ರಾಜ್​; ಮತಗಟ್ಟೆಗೆ ಬಂದು ವೋಟ್​ ಮಾಡಿದ ಪವನ್​ ಕಲ್ಯಾಣ್​, ಚಿರಂಜೀವಿ

ಈ ಅಸಭ್ಯ ಆಂಟಿ ತುಂಬಾನೇ ಓವರ್​ ಆ್ಯಕ್ಟಿಂಗ್​ ಎಂದ ಫ್ಯಾನ್​ಗೆ ಜೆನಿಲಿಯಾ ಡಿಸೋಜಾ ಕೊಟ್ರು ಸೈಲೆಂಟ್​ ಉತ್ತರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್