AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಜಿನಿ 2’ಗೆ ನಿರ್ಮಾಪಕರ ಸಖತ್ ಐಡಿಯಾ, ಸೂರ್ಯ-ಆಮಿರ್ ಖಾನ್ ಒಟ್ಟಿಗೆ ಚಿತ್ರೀಕರಣ

2005 ರಲ್ಲಿ ಬಿಡುಗಡೆ ಆಗಿದ್ದ ಸೂರ್ಯ ನಟನೆಯ ‘ಗಜಿನಿ’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಆ ಸಿನಿಮಾವನ್ನು ಆಮಿರ್ ಖಾನ್ ಹಿಂದಿಯಲ್ಲಿ ರೀಮೇಕ್ ಮಾಡಿದರು ಅಲ್ಲಿಯೂ ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು. ಈಗ ‘ಗಜಿನಿ 2’ ಸಿನಿಮಾ ಬರಲಿದ್ದು, ಸೂರ್ಯ ಹಾಗೂ ಆಮಿರ್ ಒಟ್ಟಿಗೆ ನಟಿಸಲಿದ್ದಾರೆ.

‘ಗಜಿನಿ 2’ಗೆ ನಿರ್ಮಾಪಕರ ಸಖತ್ ಐಡಿಯಾ, ಸೂರ್ಯ-ಆಮಿರ್ ಖಾನ್ ಒಟ್ಟಿಗೆ ಚಿತ್ರೀಕರಣ
ಮಂಜುನಾಥ ಸಿ.
|

Updated on: Oct 24, 2024 | 8:14 AM

Share

‘ಗಜಿನಿ’ ಸಿನಿಮಾ ದಕ್ಷಿಣ ಭಾರತದ ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಒಂದು. ಕ್ರಿಸ್ಟೊಫರ್ ನೋಲನ್ ನಿರ್ದೇಶನದ ‘ಮುಮೆಂಟೊ’ ಸಿನಿಮಾದ ಕತೆ ಎತ್ತಿ, ಅದಕ್ಕೆ ಒಂದೊಳ್ಳೆ ಲವ್ ಸ್ಟೋರಿ ಸೇರಿಸಿ ಮುರುಗದಾಸ್ ಕಟ್ಟಿಕೊಟ್ಟಿದ್ದ ‘ಗಜಿನಿ’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಮೂಲ ಸಿನಿಮಾದಲ್ಲಿ ಸೂರ್ಯ, ಆಸಿನ್ ಹಾಗೂ ನಯನತಾರಾ ನಟಿಸಿದ್ದರು. ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅದೇ ಕತೆಯನ್ನು ಹಿಂದಿಯಲ್ಲಿ ಆಮಿರ್ ಖಾನ್​ಗಾಗಿ ನಿರ್ದೇಶನ ಮಾಡಿದ್ದರು ನಿರ್ದೇಶಕ ಮುರುಗದಾಸ್ ಅಲ್ಲಿಯೂ ಸಹ ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು. ಇದೀಗ ‘ಗಜಿನಿ 2’ ಸಿನಿಮಾ ನಿರ್ಮಾಣವಾಗುವುದು ಖಾತ್ರಿಯಾಗಿದ್ದು, ಈ ಬಾರಿ ಎರಡು ಭಾಷೆಗಳಲ್ಲಿ ಒಟ್ಟಿಗೆ ಚಿತ್ರೀಕರಣ ನಡೆಯಲಿದೆ.

‘ಗಜಿನಿ 2’ ಸಿನಿಮಾ ಬಗ್ಗೆ ಸ್ವತಃ ನಟ ಸೂರ್ಯ ಖಾತ್ರಿಪಡಿಸಿದ್ದು, ಪಿಂಕ್​ವಿಲ್ಲಾ ಜೊತೆ ಈ ವಿಷಯ ಹಂಚಿಕೊಂಡಿದ್ದಾರೆ. ನಿರ್ಮಾಪಕ ಅಲ್ಲು ಅರವಿಂದ್, ‘ಗಜಿನಿ 2’ ಸಿನಿಮಾದಲ್ಲಿ ನಟಿಸಲು ಸಾಧ್ಯವೇ ಎಂದು ಕೇಳಿದರು. ನಾನು ಖಂಡಿತ ನಟಿಸುತ್ತೇನೆ ಎಂದು ಹೇಳಿದ್ದೇನೆ. ಮಾತುಕತೆ ಶುರುವಾಗಿದೆ, ‘ಗಜಿನಿ 2’ ಸಿನಿಮಾ ಖಂಡಿತ ಸಾಧ್ಯವಾಗಲಿದೆ’ ಎಂದಿದ್ದಾರೆ.

‘ಗಜಿನಿ’ ತಮಿಳು ಸಿನಿಮಾವನ್ನು ಸಲೀಂ ಚಂದ್ರಶೇಖರ್ ನಿರ್ಮಾಣ ಮಾಡಿದ್ದರು. ಅದೇ ಸಿನಿಮಾದ ಹಿಂದಿ ರೀಮೇಕ್ ಅನ್ನು ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತಮ್ಮ ಗೀತಾ ಆರ್ಟ್ಸ್​ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಿಸಿದ್ದರು. ಈಗ ಮತ್ತೆ ಅಲ್ಲು ಅರವಿಂದ್ ಅವರೇ ‘ಗಜಿನಿ 2’ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಎರಡೂ ಭಾಷೆಗಳಲ್ಲಿ ಅವರೇ ನಿರ್ಮಾಣ ಮಾಡಲಿದ್ದು, ಅವರಿಗೆ ಮಧು ಮಂಟೇನಾ ಸಾಥ್ ನೀಡಲಿದ್ದಾರೆ. ಸಿನಿಮಾ ಕುರಿತು ಆಮಿರ್ ಖಾನ್ ಜೊತೆಗೂ ಸಹ ಚರ್ಚೆ ನಡೆದಿದ್ದು, ಆಮಿರ್ ಖಾನ್ ಸಹ ಓಕೆ ಹೇಳಿದ್ದಾರೆ.

ಇದನ್ನೂ ಓದಿ:‘ರೋಲೆಕ್ಸ್’ ಪಾತ್ರದ ಭವಿಷ್ಯ ಏನು? ಸೂರ್ಯ ಕೊಟ್ಟರು ಉತ್ತರ

ಈ ಬಾರಿ ತಮಿಳು ಹಾಗೂ ಹಿಂದಿ ಎರಡೂ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣ ನಡೆಸುವ ಯೋಜನೆಯನ್ನು ಅಲ್ಲು ಅರವಿಂದ್ ಹಾಕಿಕೊಂಡಿದ್ದಾರೆ. ‘ಗಜಿನಿ’ ಸಿನಿಮಾ ನಿರ್ದೇಶನ ಮಾಡಿದ್ದ ಮುರುಗದಾಸ್ ಅವರೇ ‘ಗಜಿನಿ 2’ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಆಮಿರ್ ಖಾನ್​ಗೆ ಈಗಾಗಲೇ ಕತೆಯ ಎಳೆಯನ್ನು ಹೇಳಿದ್ದು, ಸ್ಟೋರಿ ಬೋರ್ಡ್​ ರೆಡಿ ಮಾಡಿಕೊಂಡು ಬನ್ನಿ ಚರ್ಚಿಸೋಣ ಎಂದಿದ್ದಾರಂತೆ. ಸೂರ್ಯ ಸಹ ಈಗಾಗಲೇ ಸಿನಿಮಾಕ್ಕೆ ಎಸ್ ಹೇಳಿದ್ದು ಮುಂದಿನ ವರ್ಷದ ಅಂತ್ಯದ ವೇಳೆಗೆ ಸಿನಿಮಾ ಪ್ರಾರಂಭ ಆಗುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್