AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್ ಸೂಚನೆ ಕೊಟ್ಟ ‘ಘಜಿನಿ’ ನಟಿ ಆಸಿನ್; ಉದ್ಯಮಿ ಜೊತೆಗಿನ ದಾಂಪತ್ಯ ಅಂತ್ಯ?

Asin Thottumkal: ಆಸಿನ್ ಅವರು ಮೈಕ್ರೋಮ್ಯಾಕ್ಸ್ ಫೌಂಡರ್ ರಾಹುಲ್ ಶರ್ಮಾ ಅವರನ್ನು 2016ರಲ್ಲಿ ಮದುವೆ ಆದರು. ನಂತರ ಅವರು ಚಿತ್ರರಂಗಕ್ಕೆ ಗುಡ್​ಬೈ ಹೇಳಿದರು. ಈಗ ಇವರು ಬೇರೆ ಆಗುತ್ತಿದ್ದಾರೆ ಎನ್ನಲಾಗಿದೆ.

ಡಿವೋರ್ಸ್ ಸೂಚನೆ ಕೊಟ್ಟ ‘ಘಜಿನಿ’ ನಟಿ ಆಸಿನ್; ಉದ್ಯಮಿ ಜೊತೆಗಿನ ದಾಂಪತ್ಯ ಅಂತ್ಯ?
ಆಸಿನ್-ರಾಹುಲ್ ಶರ್ಮಾ
ರಾಜೇಶ್ ದುಗ್ಗುಮನೆ
|

Updated on:Jun 28, 2023 | 10:48 AM

Share

ಸೆಲೆಬ್ರಿಟಿಗಳ ವಲಯದಲ್ಲಿ ವಿಚ್ಛೇದನ ಅನ್ನೋದು ಸರ್ವೇ ಸಾಮಾನ್ಯ ಆಗಿದೆ. ಇತ್ತೀಚೆಗಂತೂ ಹಲವು ಸೆಲೆಬ್ರಿಟಿ ಜೋಡಿಗಳು ದಾಂಪತ್ಯ ಕೊನೆಗೊಳಿಸಿಕೊಂಡಿದ್ದಾರೆ. ಸಾಲಿಗೆ ಈ ನಟಿ ಆಸಿನ್ ಕೂಡ ಸೇರ್ಪಡೆ ಆಗುತ್ತಾರೆ ಎನ್ನುವ ಮಾತು ಜೋರಾಗಿದೆ. ಆಸಿನ್ (Asin) ಅವರು ತಮಿಳು ಹಾಗೂ ಹಿಂದಿ  ‘ಘಜಿನಿ’ (Ghajini) ಸಿನಿಮಾ ಮೂಲಕ ಜನಪ್ರಿಯತೆ ಪಡೆದರು. ಮದುವೆ ಬಳಿಕ ಸಂಪೂರ್ಣವಾಗಿ ಚಿತ್ರರಂಗದಿಂದ ದೂರವೇ ಇದ್ದ ಅವರು ಈಗ ಫ್ಯಾನ್ಸ್​ಗೆ ಬೇಸರದ ಸುದ್ದಿ ನೀಡುವ ಸನಿಹದಲ್ಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಆಸಿನ್ ಅವರು ಮೈಕ್ರೋಮ್ಯಾಕ್ಸ್ ಫೌಂಡರ್ ರಾಹುಲ್ ಶರ್ಮಾ ಅವರನ್ನು 2016ರಲ್ಲಿ ಮದುವೆ ಆದರು. ನಂತರ ಅವರು ಚಿತ್ರರಂಗಕ್ಕೆ ಗುಡ್​ಬೈ ಹೇಳಿದರು. 2015ರಲ್ಲಿ ರಿಲೀಸ್ ಆದ ‘ಆಲ್ ಈಸ್ ವೆಲ್’ ಚಿತ್ರದ ಬಳಿಕ ಅವರು ನಟನೆಯತ್ತ ಮುಖ ಮಾಡಿಲ್ಲ. ಈಗ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ರಾಹುಲ್ ಶರ್ಮಾ ಜೊತೆಗಿನ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನಕ್ಕೂ ಮೊದಲು ಇದೇ ರೀತಿಯ ಬೆಳವಣಿಗೆ ನಡೆದಿತ್ತು. ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಸರು ಬದಲಿಸಿಕೊಂಡಿದ್ದರು. ‘ಸಮಂತಾ ಅಕ್ಕಿನೇನಿ’ ಎಂಬ ಹೆಸರನ್ನು ‘ಸಮಂತಾ ರುತ್ ಪ್ರಭು’ ಎಂದು ಬದಲಾಯಿಸಿಕೊಂಡಿದ್ದರು. ಆ ಬಳಿಕ ಪತಿ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದರು. ಚಿರಂಜೀವಿ ಕುಟುಂಬದ ಮಗಳು ನಿಹಾರಿಕಾ ನಡೆ ಕೂಡ ಇದೇ ರೀತಿ ಇದೆ. ಈ ಸಾಲಿಗೆ ಆಸಿನ್ ಕೂಡ ಸೇರುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ: ರಶ್ಮಿಕಾ, ಸಮಂತಾ ಅಲ್ಲ.. ದಕ್ಷಿಣದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ..

ಮದುವೆಯ ಫೋಟೋಗಳನ್ನು ಆಸಿನ್ ಹಂಚಿಕೊಂಡಿದ್ದರು. ಅದನ್ನೂ ಡಿಲೀಟ್ ಮಾಡಿದ್ದಾರೆ. ಈ ಕಾರಣಕ್ಕೆ ಇಬ್ಬರೂ ಬೇರೆ ಆಗುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.  ಆಸಿನ್ ಹಾಗೂ ರಾಹುಲ್ ಬೇರೆ ಆಗುವ ವಿಚಾರವನ್ನು ಫ್ಯಾನ್​ ಪೇಜ್​ಗಳಲ್ಲಿ ಚರ್ಚೆ ಮಾಡಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.  ಇವರು ಬೇರೆ ಆಗುತ್ತಿರುವುದಕ್ಕೆ ಕಾರಣ ಏನು ಎಂಬುದನ್ನು ತಿಳಿಯುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Wed, 28 June 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ