AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾರ್ಜುನಗೆ ಮತ್ತೆ ಶಾಕ್ ಕೊಟ್ಟ ಸರ್ಕಾರ, ಸ್ಟುಡಿಯೋ ವಿರುದ್ಧ ತೆರಿಗೆ ವಂಚನೆ ಆರೋಪ

Akkineni Nagarjuna: ನಟ ನಾಗಾರ್ಜುನಗೆ ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಈಗಾಗಲೇ ನಾಗಾರ್ಜುನಗೆ ಸೇರಿದ ಕಲ್ಯಾಣ ಮಂಟಪವನ್ನು ನೆಲಸಮ ಮಾಡಿದೆ. ಇದೀಗ ನಾಗಾರ್ಜುನ ಒಡೆತನದ ಅನ್ನಪೂರ್ಣ ಸ್ಟುಡಿಯೋಗೆ ನೊಟೀಸ್ ಜಾರಿ ಮಾಡಿದೆ. ಅನ್ನಪೂರ್ಣ ಸ್ಟುಡಿಯೋ ಮಾತ್ರವೇ ಅಲ್ಲದೆ ರಾಮಾನಾಯ್ಡು ಸ್ಟುಡಿಯೋಕ್ಕೂ ಸಹ ನೊಟೀಸ್ ನೀಡಲಾಗಿದೆ.

ನಾಗಾರ್ಜುನಗೆ ಮತ್ತೆ ಶಾಕ್ ಕೊಟ್ಟ ಸರ್ಕಾರ, ಸ್ಟುಡಿಯೋ ವಿರುದ್ಧ ತೆರಿಗೆ ವಂಚನೆ ಆರೋಪ
Annapoorna Studio
ಮಂಜುನಾಥ ಸಿ.
|

Updated on: Nov 21, 2025 | 1:20 PM

Share

ನಟ ನಾಗಾರ್ಜುನಗೆ (Nagarjuna) ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ. ಈ ಹಿಂದೆ ನಾಗಾರ್ಜುನಗೆ ಸೇರಿದ ದೊಡ್ಡ ಕಲ್ಯಾಣ ಮಂಟಪವನ್ನು ನೊಟೀಸ್ ನೀಡಿ ನೆಲಸಮಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ನಾಗಾರ್ಜುನ ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣ ಇನ್ನೂ ಚಾಲ್ತಿಯಲ್ಲಿದೆ. ಇದು ಹೀಗಿರುವಾಗ ಮತ್ತೊಂದು ಶಾಕ್ ಎದುರಾಗಿದೆ. ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಇದೀಗ ನಾಗಾರ್ಜುನ ಒಡೆತನದ ಅನ್ನಪೂರ್ಣ ಸ್ಟುಡಿಯೋಗೆ ನೊಟೀಸ್ ನೀಡಿದೆ. ಅನ್ನಪೂರ್ಣ ಸ್ಟುಡಿಯೋ ಮಾತ್ರವೇ ಅಲ್ಲದೆ ಜನಪ್ರಿಯ ರಾಮಾನಾಯ್ಡು ಸ್ಟುಡಿಯೋಗೂ ನೊಟೀಸ್ ಜಾರಿ ಮಾಡಲಾಗಿದೆ.

ಅನ್ನಪೂರ್ಣ ಸ್ಟುಡಿಯೋಸ್ ಮತ್ತು ರಾಮಾನಾಯ್ಡು ಸ್ಟುಡಿಯೋಸ್​​ಗಳು ತೆರಿಗೆ ವಂಚನೆ ಮಾಡಿರುವ ಆರೋಪವನ್ನು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಮಾಡಿದ್ದು, ಈ ಕುರಿತು ಎರಡೂ ಫಿಲಂಸಿಟಿಗಳಿಗೆ ನೊಟೀಸ್ ಜಾರಿ ಮಾಡಿದೆ. ತಪ್ಪು ಲೆಕ್ಕ ತೋರಿಸಿ ತೆರಿಗೆ ವಂಚನೆ ಮಾಡಿರುವ ಆರೋಪವನ್ನು ಮುನ್ಸಿಪಲ್ ಕಾರ್ಪೊರೇಷನ್ ಮಾಡಿದ್ದು, ನೊಟೀಸ್​​ಗೆ ಉತ್ತರಿಸುವಂತೆ ಸೂಚನೆ ನೀಡಿದೆ.

ನಾಗಾರ್ಜುನ ಒಡೆತನದ ಅನ್ನಪೂರ್ಣ ಸ್ಟುಡಿಯೋ 1.92 ಚದರ ಅಡಿ ವಿಸ್ತೀರ್ಣ ಹೊಂದಿದೆ ಆದರೆ ಕೇವಲ 8100 ಚದರ ಅಡಿಯ ವಿಸ್ತೀರ್ಣವಷ್ಟೆ ಲೆಕ್ಕದಲ್ಲಿ ತೋರಿಸಿ ಅಷ್ಟು ವಿಸ್ತೀರ್ಣಕ್ಕೆ ಮಾತ್ರವೇ ತೆರಿಗೆ ಪಾವತಿ ಮಾಡುತ್ತಿದೆ. ಇನ್ನು ರಾಮಾನಾಯ್ಡು ಸ್ಟುಡಿಯೋ 11.52 ಲಕ್ಷ ಚದರ ಅಡಿಗಳಷ್ಟು ಬೃಹತ್ ವಿಸ್ತೀರ್ಣ ಹೊಂದಿದೆ ಆದರೆ 49 ಸಾವಿರ ಚದರ ಅಡಿಗಳಿಗೆ ಮಾತ್ರವೇ ತೆರಿಗೆ ಪಾವತಿ ಮಾಡುತ್ತಿದೆ ಎಂದು ಮುನ್ಸಿಪಲ್ ಕಾರ್ಪೊರೇಷನ್ ನೊಟೀಸ್​​ನಲ್ಲಿ ಹೇಳಿದೆ.

ಇದನ್ನೂ ಓದಿ:ಪೊಲೀಸ್ ಆಯುಕ್ತರ ಭೇಟಿಯಾಗಿ ಧನ್ಯವಾದ ಹೇಳಿದ ಚಿರಂಜೀವಿ-ನಾಗಾರ್ಜುನ: ಕಾರಣವೇನು?

ರಾಮಾನಾಯ್ಡು ಸ್ಟುಡಿಯೋ 2.73 ಲಕ್ಷ ರೂಪಾಯಿ ತೆರಿಗೆ ಪಾವತಿ ಮಾಡಬೇಕು ಆದರೆ ಈಗ ಕೇವಲ 7600 ರೂಪಾಯಿಗಳ ತೆರಿಗೆಯನ್ನಷ್ಟೆ ಪಾವತಿ ಮಾಡಿದೆ. ಇದೇ ರೀತಿ ಅನ್ನಪೂರ್ಣ ಸ್ಟುಡಿಯೋ ಸಹ ಕಡಿಮೆ ಮೊತ್ತದ ತೆರಿಗೆ ಪಾವತಿ ಮಾಡುತ್ತಿದೆ ಎಂದು ನೊಟೀಸ್​​ನಲ್ಲಿ ಆರೋಪಿಸಲಾಗಿದೆ. ಇದೀಗ ಎರಡೂ ಸ್ಟುಡಿಯೋಗಳಿಗೆ ನೊಟೀಸ್ ನೀಡಿರುವ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್, ಪೂರ್ಣ ವಿಸ್ತೀರ್ಣಕ್ಕೆ ತೆರಿಗೆ ಪಾವತಿಸುವಂತೆ ತಿಳಿಸಿದೆ. ಅಲ್ಲದೆ ಹಿಂದಿನ ವರ್ಷಗಳ ತೆರಿಗೆಯನ್ನು ಸೇರಿಸಿ ದಂಡದ ಸಮೇತ ಪಾವತಿ ಮಾಡುವಂತೆ ಸೂಚನೆ ನೀಡಿದೆ.

ಅನ್ನಪೂರ್ಣ ಸ್ಟುಡಿಯೋಸ್ ನಾಗಾರ್ಜುನ ಅವರ ಒಡೆತನದಲ್ಲಿದ್ದರೆ ರಾಮಾನಾಯ್ಡು ಸ್ಡುಡಿಯೋ ದಗ್ಗುಬಾಟಿ ಕುಟುಂಬದ ಸುರೇಶ್ ಅವರ ಒಡೆತನದಲ್ಲಿದೆ. ಇವರು ಖ್ಯಾತ ನಟ ರಾಣಾ ದಗ್ಗುಬಾಟಿ ಅವರ ತಂದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ