ಬ್ರಾಹ್ಮಣ ಸಮುದಾಯಕ್ಕೆ ಅವಮಾನ? ಮನೋಜ್ ಸಿನಿಮಾ ವಿರುದ್ಧ ಆಕ್ರೋಶ

Ghooskhor Pandat movie: ಖ್ಯಾತ ನಟ ಮನೋಜ್ ಬಾಜಪೇಯಿ ನಟನೆಯ ಹೊಸ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಮನೋಜ್ ನಟನೆಯ ಹೊಸ ಸಿನಿಮಾ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹೆಸರಿನ ಬಗ್ಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾದ ಹೆಸರು ಬದಲಾವಣೆ ಮಾಡದಿದ್ದಲ್ಲಿ ಸಿನಿಮಾ ಬಹಿಷ್ಕರಿಸುವುದಾಗಿ ಹಲವರು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದಾರೆ.

ಬ್ರಾಹ್ಮಣ ಸಮುದಾಯಕ್ಕೆ ಅವಮಾನ? ಮನೋಜ್ ಸಿನಿಮಾ ವಿರುದ್ಧ ಆಕ್ರೋಶ
Ghooskor Pandat

Updated on: Feb 04, 2026 | 1:20 PM

ಸಿನಿಮಾಗಳು (Cinema) ವಿವಾದಕ್ಕೆ ಸಿಲುಕುವುದು ತೀರ ಸಾಮಾನ್ಯ ಆಗಿಬಿಟ್ಟಿದೆ. ಸಿನಿಮಾಗಳಲ್ಲಿ ಜಾತಿ, ಧರ್ಮ, ಸಮುದಾಯ, ವೃತ್ತಿಯ ಅಪಮಾನ ಮಾಡಲಾಗಿದೆ ಎಂಬ ದೂರು ಇತ್ತೀಚೆಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಇದೇ ಸಾಲಿಗೆ ಖ್ಯಾತ ನಟ ಮನೋಜ್ ಬಾಜಪೇಯಿ ನಟನೆಯ ಸಿನಿಮಾ ಸಹ ಸೇರಿಕೊಂಡಿದೆ. ಮನೋಜ್ ನಟನೆಯ ಹೊಸ ಸಿನಿಮಾ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹೆಸರಿನ ಬಗ್ಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾದ ಹೆಸರು ಬದಲಾವಣೆ ಮಾಡದಿದ್ದಲ್ಲಿ ಸಿನಿಮಾ ಬಹಿಷ್ಕರಿಸುವುದಾಗಿ ಹಲವರು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದಾರೆ.

ಮನೋಜ್ ಬಾಜಪೇಯಿ ನಾಯಕನಾಗಿ ನಟಿಸಿರುವ ‘ಗುಸ್​​ಕೋರ್ ಪಂಡತ್’ ಹೆಸರಿನ ಸಿನಿಮಾದ ಟ್ರೈಲರ್ ನಿನ್ನೆ (ಫೆಬ್ರವರಿ 03) ಬಿಡುಗಡೆ ಆಗಿದೆ. ಟ್ರೈಲರ್​​ನಲ್ಲಿ ತೋರಿಸಿರುವಂತೆ ಮನೋಜ್ ಬಾಜಪೇಯಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಮನೋಜ್ ಅವರು ಭ್ರಷ್ಟಾಚಾರ, ಸಿಟ್ಟು, ಕ್ರೂರತನದಿಂದ ತುಂಬಿರುವ ಪೊಲೀಸ್ ಪಾತ್ರದಲ್ಲಿ ನಟಿಸಿರುವುದು ಟ್ರೈಲರ್​​ನಿಂದ ತಿಳಿದು ಬರುತ್ತಿದೆ. ಆದರೆ ಪಾತ್ರದ ಬಗ್ಗೆ ಅಲ್ಲದೆ, ಸಿನಿಮಾಕ್ಕೆ ಇಟ್ಟಿರುವ ಹೆಸರು ಇದೀಗ ವಿವಾದಕ್ಕೆ ಕಾರಣವಾಗಿದೆ.

ಸಿನಿಮಾಕ್ಕೆ ‘ಗುಸ್ಕೋರ್ ಪಂಡತ್’ ಎಂದು ಹೆಸರಿಡಲಾಗಿದೆ. ಇದು ಪಂಡಿತರನ್ನು ದೂಷಿಸುತ್ತಿರುವಂತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಗುಸ್ಕೋರ್ ಪಂಡತ್’ ಎಂದರೆ ನುಸುಳುಕೋರ ಪಂಡಿತ್ ಎಂದರ್ಥ. ಅಸಲಿಗೆ ಸಿನಿಮಾದ ಹೆಸರು ‘ಗುಸ್ಕೋರ್ ಪಂಡಿತ್’ ಎಂದೇ ಇತ್ತು ಎನ್ನಾಗಿದೆ ಆದರೆ ಸೆನ್ಸಾರ್​​ನವರಿಗಾಗಿ ‘ಪಂಡಿತ್’ ಅನ್ನು ಬದಲಾಯಿಸಿ ‘ಪಂಡತ್’ ಮಾಡಲಾಗಿದೆ.

ಇದನ್ನೂ ಓದಿ:‘ಜನ ನಾಯಗನ್’ ಸಿನಿಮಾದ 20 ನಿಮಿಷ ದೃಶ್ಯಕ್ಕೆ ಕತ್ತರಿ? ವಿಜಯ್​​​ಗೆ ನಿರಾಸೆ

ಹಲವಾರು ಮಂದಿ ಈ ಬಗ್ಗೆ ಟ್ವೀಟ್​ ಮಾಡಿದ್ದು, ಬ್ರಾಹ್ಮಣರಿಗೆ ಅವಮಾನ ಮಾಡುವ ಉದ್ದೇಶದಿಂದಲೇ ಸಿನಿಮಾಕ್ಕೆ ಈ ರೀತಿಯ ಹೆಸರು ಇಡಲಾಗಿದೆ. ಸಿನಿಮಾದ ಹೆಸರು ಬದಲಾವಣೆ ಮಾಡದಿದ್ದಲ್ಲಿ ಸಿನಿಮಾ ಬಹಿಷ್ಕರಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಗುಸ್​ಕೋರ್ ಮುಸ್ಲಿಂ’, ‘ಗುಸ್​ಕೋರ್ ದಲಿತ್’ ಎಂದು ಹೆಸರಿಡಿ ನೋಡೋಣ ಎಂದು ಸಹ ಕೆಲವರು ಸವಾಲು ಹಾಕಿದ್ದಾರೆ.

ಸಿನಿಮಾನಲ್ಲಿ ಮನೋಜ್ ಬಾಜಪೇಯಿ ಪಾತ್ರದ ಹೆಸರು ಅಜಯ್ ದೀಕ್ಷಿತ್, ಆದರೆ ಅವರ ಪಾತ್ರದ ಅಡ್ಡ ಹೆಸರು ಪಂಡಿತ್ ಎಂದಾಗಿದೆ. ಸಿನಿಮಾನಲ್ಲಿ ಮನೋಜ್ ಜೊತೆಗೆ ನುಸ್ರತ್ ಬರೂಚಾ ಸಹ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ರಿತೇಶ್ ಶಾ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ನೀರಜ್ ಪಾಂಡೆ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ನೇರವಾಗಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us