AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವರಾಹ ರೂಪಂ..’ ಹಾಡಿನ ವಿವಾದ: ಹೊಂಬಾಳೆ ಫಿಲ್ಮ್ಸ್​ ಎದುರು ತಮ್ಮ ಬೇಡಿಕೆಗಳನ್ನು ಮುಂದಿಟ್ಟ ತೈಕ್ಕುಡಂ ಬ್ರಿಡ್ಜ್

‘ತೈಕ್ಕುಡಂ ಬ್ರಿಡ್ಜ್​​’ ಹಣಕ್ಕಾಗಿ ಇಷ್ಟೆಲ್ಲ ಮಾಡುತ್ತಿದೆ ಎಂಬ ಆರೋಪವನ್ನು ಕೆಲವರು ಮಾಡಿದ್ದರು. ಆದರೆ, ಆ ರೀತಿ ಇಲ್ಲ ಎಂಬುದು ತೈಕ್ಕುಡಂ ಬ್ರಿಡ್ಜ್​ನ ಸ್ಪಷ್ಟನೆ.

‘ವರಾಹ ರೂಪಂ..’ ಹಾಡಿನ ವಿವಾದ: ಹೊಂಬಾಳೆ ಫಿಲ್ಮ್ಸ್​ ಎದುರು ತಮ್ಮ ಬೇಡಿಕೆಗಳನ್ನು ಮುಂದಿಟ್ಟ ತೈಕ್ಕುಡಂ ಬ್ರಿಡ್ಜ್
ಹೊಂಬಾಳೆ ಫಿಲ್ಮ್ಸ್​ ಎದುರು ತಮ್ಮ ಬೇಡಿಕೆಗಳನ್ನು ಮುಂದಿಟ್ಟ ತೈಕ್ಕುಡಂ ಬ್ರಿಡ್ಜ್
TV9 Web
| Edited By: |

Updated on:Oct 31, 2022 | 3:15 PM

Share

‘ಕಾಂತಾರ’  (Kantara Movie) ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದ ಕೇಂದ್ರ ಬಿಂದು ಆಗಿದೆ. ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ‘ನವರಸಂ..’ ಹಾಡಿನ ಟ್ಯೂನ್​ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ‘ತೈಕ್ಕುಡಂ ಬ್ರಿಡ್ಜ್​​’ (Thaikkudam Bridge) ಕೇಸ್ ಕೂಡ ದಾಖಲು ಮಾಡಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ್ದ ಕೇರಳದ ಸ್ಥಳೀಯ ನ್ಯಾಯಾಲಯ ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿದೆ. ಈ ವಿವಾದದ ಬಗ್ಗೆ ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ವಿಯಾನ್ ಫರ್ನಾಂಡಿಸ್ ಪ್ರತಿಕ್ರಿಯೆ ನೀಡಿದ್ದಾರೆ.

‘ತೈಕ್ಕುಡಂ ಬ್ರಿಡ್ಜ್​​’ ಹಣಕ್ಕಾಗಿ ಇಷ್ಟೆಲ್ಲ ಮಾಡುತ್ತಿದೆ ಎಂಬ ಆರೋಪವನ್ನು ಕೆಲವರು ಮಾಡಿದ್ದರು. ಆದರೆ, ಆ ರೀತಿ ಇಲ್ಲ ಎನ್ನುತ್ತಾರೆ ವಿಯಾನ್. ‘ಕೋರ್ಟ್​ನ ಆದೇಶದ ಪ್ರತಿ ಕೈ ಸೇರಿದ ನಂತರದಲ್ಲಿ ಕಾಂತಾರ ತಂಡದವರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ. ನಮಗೆ ಕ್ರೆಡಿಟ್ ಕೊಟ್ಟರೆ ಈ ಹಾಡನ್ನು ಅವರು ಪ್ಲೇ ಮಾಡಿಕೊಳ್ಳುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದು ವಿಯಾನ್ ಹೇಳಿದ್ದಾರೆ. ಈ ಮೂಲಕ ತಮ್ಮ ಬೇಡಿಕೆ ಏನು ಎಂಬುದನ್ನು ತಿಳಿಸಿದ್ದಾರೆ.

‘ದೊಡ್ಡ ನಿರ್ಮಾಣ ಸಂಸ್ಥೆ ವಿರುದ್ಧ ಸ್ವತಂತ್ರ ಬ್ಯಾಂಡ್​ ಹೋರಾಡುತ್ತಿರುವುದು ಇದೇ ಮೊದಲು. ತಮ್ಮಲ್ಲಿರುವ ಹಣ, ಅಧಿಕಾರದಿಂದ ಪಾರಾಗಬಹುದು ಎಂದು ಅವರು ಭಾವಿಸಿರಬಹುದು. ಸಂಗೀತ ಲೋಕಕ್ಕೆ ಮಾದರಿ ಆಗಬೇಕು ಎಂಬುದು ನಮ್ಮ ಉದ್ದೇಶ. ಮುಂದಿನ ದಿನಗಳಲ್ಲಿ ಈ ಪ್ರಕರಣದಲ್ಲಿ ಏನೇ ಆದರೂ ನಮಗೆ ಖುಷಿಯಿದೆ. ನಾವು ಸುಮ್ಮನೆ ಕೂತಿಲ್ಲ, ದಿಟ್ಟ ಹೆಜ್ಜೆ ತೆಗೆದುಕೊಂಡೆವು ಎಂಬ ತೃಪ್ತಿ ನಮ್ಮಲ್ಲಿರುತ್ತದೆ’ ಎಂದಿದ್ದಾರೆ ಅವರು.

‘ಕೆಲವು ಹಾಡುಗಳ ಮಧ್ಯೆ ಹೋಲಿಕೆ ಇರುತ್ತದೆ. ಅದು ಸಾಮಾನ್ಯ. ಹೀಗಾಗಿ, ಆರಂಭದಲ್ಲಿ ಈ ವಿಚಾರದಲ್ಲಿ ಅಷ್ಟಾಗಿ ತಲೆಕೆಡಿಸಿಕೊಳ್ಳಲಿಲ್ಲ. ಆದರೆ, ಕಮೆಂಟ್​ಗಳು, ಮೆಸೇಜ್​ಗಳು, ದೂರವಾಣಿ ಕರೆಗಳು ನಿಲ್ಲಲೇ ಇಲ್ಲ. ಹೀಗಾಗಿ ಕೇಸ್ ಹಾಕಿದೆವು. ಯೂಟ್ಯೂಬ್ ಚಾನೆಲ್​​ನಲ್ಲಿ ‘ವರಾಹ ರೂಪಂ..’ ಹಾಡಿಗೆ ಬಂದ ಅನೇಕ ಕಮೆಂಟ್​ಗಳನ್ನು ಡಿಲೀಟ್ ಮಾಡಲಾಗಿದೆ’ ಎಂಬ ಆರೋಪವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿ: ‘ರಾಮ್​ ಸೇತು’ ಎದುರು ಹೆಚ್ಚಾಯ್ತು ‘ಕಾಂತಾರ’ ಶೋಗಳ ಸಂಖ್ಯೆ; ಮತ್ತೆ ಎಡವಿದ ಅಕ್ಷಯ್ ಕುಮಾರ್

‘ಕಾಂತಾರ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಬಿ. ಅಜನೀಶ್ ಲೋಕನಾಥ್ ಅವರು ನಮ್ಮ ಬ್ಯಾಂಡ್​ನ ಸ್ಥಾಪಕರಲ್ಲೊಬ್ಬರಾದ ಗೋವಿಂದ್ ವಸಂತ್ ಅವರನ್ನು ಸಂಪರ್ಕಿಸಿದ್ದರು. ನಮ್ಮ ಮ್ಯಾನೇಜ್​ಮೆಂಟ್ ಅವರು ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದೆ. ಈ ಚಿತ್ರ ರಿಲೀಸ್​ಗೂ ಮೊದಲು ಅವರು ನಮ್ಮ ಜತೆ ಮಾತನಾಡಿ, ಹಾಡಿನಲ್ಲಿ ನಮ್ಮ ಬ್ಯಾಂಡ್​ನ ಉಲ್ಲೇಖ ಮಾಡಿದ್ದರೆ ಸಾಕಿತ್ತು. ನಾವು ಕೇಸ್ ಹಾಕುತ್ತಿರಲಿಲ್ಲ’ ಎಂದಿದ್ದಾರೆ ವಿಯಾನ್.

Published On - 3:06 pm, Mon, 31 October 22

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ