AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Godzilla vs. Kong: Tamilrockersನಲ್ಲಿ ಲೀಕ್​ ಆಯ್ತು ಗಾಡ್ಜಿಲಾ vs ಕಾಂಗ್​ ಸಿನಿಮಾ

ಪೈರಸಿಯಲ್ಲಿ ಮುಂದಿರುವ Tamilrockers ಈ ಸಿನಿಮಾವನ್ನು ಲೀಕ್​ ಮಾಡಿದೆ. ಇಂಗ್ಲಿಷ್​ ವರ್ಷನ್​ ಬದಲು ಹಿಂದಿಗೆ ಡಬ್​ ಆದ ವರ್ಷನ್​ಅನ್ನು ಈ ಸೈಟ್​ನಲ್ಲಿ ಲೀಕ್​ ಮಾಡಲಾಗಿದೆ.

Godzilla vs. Kong: Tamilrockersನಲ್ಲಿ ಲೀಕ್​ ಆಯ್ತು ಗಾಡ್ಜಿಲಾ vs ಕಾಂಗ್​ ಸಿನಿಮಾ
ಗಾಡ್ಜಿಲ್ಲಾ vs ಕಾಂಗ್​ ಸಿನಿಮಾದ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: Mar 24, 2021 | 8:27 PM

Share

ಪೈರಸಿ ಅನ್ನೋದು ಚಿತ್ರರಂಗಕ್ಕೆ ತಟ್ಟಿರುವ ದೊಡ್ಡ ಶಾಪ. ಕೋಟ್ಯಾಂತರ ರೂಪಾಯಿ ಸುರಿದು, ವರ್ಷಾನುಗಟ್ಟಲೆ ಕಷ್ಟಪಟ್ಟು ಮಾಡುವ ಸಿನಿಮಾ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಪೈರಸಿಗೆ ತುತ್ತಾಗುತ್ತದೆ. ಈಗ ಹಾಲಿವುಡ್​ನ ಗಾಡ್ಜಿಲಾ vs ಕಾಂಗ್​ ಸಿನಿಮಾಗೂ ಪೈರಿಸಿ ಬಿಸಿ ತಟ್ಟಿದೆ. ಸಿನಿಮಾ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಈ ಚಿತ್ರದ ಹಿಂದಿ ವರ್ಷನ್​ ಆನ್​ಲೈನ್​ನಲ್ಲಿ ಲೀಕ್​ ಆಗಿದೆ. ಪೈರಸಿಯಲ್ಲಿ ಮುಂದಿರುವ Tamilrockers ಈ ಸಿನಿಮಾವನ್ನು ಲೀಕ್​ ಮಾಡಿದೆ. ಇಂಗ್ಲಿಷ್​ ವರ್ಷನ್​ ಬದಲು ಹಿಂದಿಗೆ ಡಬ್​ ಆದ ವರ್ಷನ್​ಅನ್ನು ಈ ಸೈಟ್​ನಲ್ಲಿ ಲೀಕ್​ ಮಾಡಲಾಗಿದೆ. ಹಿಂದಿ ಅವತರಣಿಕೆಗೆ ಬೇಡಿಕೆ ಹೆಚ್ಚಿರುವ ಕಾರಣಕ್ಕೆ ತಮಿಳ್​ ರಾಕರ್ಸ್​ ಈ ರೀತಿ ಮಾಡಿದೆ ಎನ್ನಲಾಗುತ್ತಿದೆ. ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಚಿತ್ರ ಲೀಕ್​ ಆಗಿರುವುದು ಭಾರತದಲ್ಲಿನ ಬಾಕ್ಸ್​ ಆಫೀಸ್​ ಕಲೆಕ್ಷನ್​ಗೆ ಹೊಡೆತ ನೀಡಿದೆ.

ತಮಿಳ್​ರಾಕರ್ಸ್ ವೆಬ್​ಸೈಟ್​ ಅನ್ನು ಯಾರು ನಿರ್ವಹಣೆ ಮಾಡುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದು ಅಸಾಧ್ಯ ಎಂಬಂತಾಗಿದೆ. ದೇಶದಲ್ಲಿ ರಿಲೀಸ್​ ಆಗುವ ಬಹುತೇಕ ಚಿತ್ರಗಳನ್ನು ಇವರು ನಕಲು ಮಾಡಿ ಬಿಡುತ್ತಾರೆ. ಇವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ಲಾಕ್‌ಡೌನ್ ಸಮಯದಲ್ಲಿ ಒಟಿಟಿಯಲ್ಲಿ ರಿಲೀಸ್​ ಆದ ಸಾಕಷ್ಟು ಸಿನಿಮಾಗಳನ್ನು ಇವರು ಲೀಕ್​ ಮಾಡಿದ್ದಾರೆ. ಲಾಕ್‌ಡೌನ್​ ನಂತರ ಮತ್ತೆ ತಮ್ಮ ಕೆಲಸವನ್ನು ಇವರು ಮುಂದುವರಿಸಿದ್ದಾರೆ.

ಅಂದಹಾಗೆ, ಗಾಡ್ಜಿಲಾ vs ಕಾಂಗ್​ ಸಿನಿಮಾಗೆ ಮೆಚ್ಚುಗೆಯ ಮಾತು ಕೇಳಿ ಬಂದಿದೆ. ಅನೇಕ ಆಂಗ್ಲ ವೆಬ್​ಸೈಟ್​ಗಳು ಸಿನಿಮಾವನ್ನು ಹೊಗಳಿ ಬರೆದಿದ್ದಾರೆ. ಪ್ರೇಕ್ಷಕರು ಕೂಡ ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: KGF Chapter 2: ಹಾಲಿವುಡ್​ ಸಿನಿಮಾದಲ್ಲಿ ಕೆಜಿಎಫ್​-2 ಡೈಲಾಗ್? ಏನಿದರ ಹಿಂದಿನ ರಹಸ್ಯ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ