AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಕಳ್ಳಸಾಗಾಣಿಕೆ ಕೇಸ್​: ದುಬೈನಲ್ಲಿ ಕಂಪನಿ ತೆರದಿದ್ರು ನಟಿ ರನ್ಯಾ ರಾವ್

ಭಾರೀ ಪ್ರಮಾಣದ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಡಿಆರ್​​ಐ ಬಂಧಿಸಿದೆ. ಈ ಪ್ರಕರಣಕ್ಕೆ ಉದ್ಯಮಿ ಪುತ್ರ ತರುಣ್ ಸಂಬಂಧ ಹೊಂದಿದ್ದು, ಅವರ ವಿಚಾರಣೆಯಿಂದ ಹೊಸ ಮಾಹಿತಿ ಬಹಿರಂಗವಾಗಿದೆ. ನಟಿ ರನ್ಯಾ ರಾವ್ ಮತ್ತು ತರುಣ್​ ದುಬೈನಲ್ಲಿ ವೈರಾ ಡೈಮಂಡ್ಸ್ ಟ್ರೇಡಿಂಗ್ ಎಂಬ ಹೆಸರಿನ ಕಂಪನಿಯನ್ನು ತೆರೆದಿದ್ದರು. ಸಿಬಿಐ ಕೂಡ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ.

ಚಿನ್ನ ಕಳ್ಳಸಾಗಾಣಿಕೆ ಕೇಸ್​: ದುಬೈನಲ್ಲಿ ಕಂಪನಿ ತೆರದಿದ್ರು ನಟಿ ರನ್ಯಾ ರಾವ್
ನಟಿ ರನ್ಯಾ ರಾವ್​
ವಿವೇಕ ಬಿರಾದಾರ
|

Updated on:Mar 17, 2025 | 2:34 PM

Share

ಬೆಂಗಳೂರು, ಮಾರ್ಚ್​ 17: ಚಿನ್ನ ಕಳ್ಳಸಾಗಾಣಿಕೆಯಲ್ಲಿ (Gold Smuggling) ನಟಿ ರನ್ಯಾ ರಾವ್​ (Ranya Rao) ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್​ಐ) ಅಧಿಕಾರಿಗಳು ಬಂಧಿಸಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್​​ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಅವರ ಹೆಸರೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಡಿಆರ್​ಐ ಅಧಿಕಾರಿಗಳು ತರುಣ್​ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ತರುಣ್ ವಿಚಾರಣೆಯಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗಗೊಂಡಿವೆ.

ನಟಿ ರನ್ಯಾ ರಾವ್ ಮತ್ತು ನಾನು (ತರುಣ್​) ಕಾಲೇಜು ದಿನಗಳಿಂದಲೇ ಸ್ನೇಹಿತರಾಗಿದ್ವಿ. ಬಳಿಕ ಇಬ್ಬರೂ ಸೇರಿ 2023ರಲ್ಲಿ ದುಬೈನಲ್ಲಿ 50:50 ಪಾಲುದಾರಿಕೆಯಲ್ಲಿ ವೀರಾ ಡೈಮಂಡ್ಸ್ ಟ್ರೇಡಿಂಗ್ LLC ಎಂಬ ಹೆಸರಿನ ಕಂಪನಿ ಪ್ರಾರಂಭಿಸಿದೇವು. ವ್ಯವಹಾರದ ಉದ್ದೇಶ, ದುಬೈಗೆ ಚಿನ್ನವನ್ನು ಆಮದು ಮಾಡಿಕೊಳ್ಳುವುದು ಮತ್ತು ಚಿನ್ನವನ್ನು ಮಾರಾಟ ಮಾಡುವುದಾಗಿತ್ತು. ದುಬೈ ವ್ಯವಹಾರದಲ್ಲಿ ರನ್ಯಾ ಏಕೈಕ ಹೂಡಿಕೆದಾರರಾಗಿದ್ದರು. ನಾನು ಕಾರ್ಯನಿರತ ಪಾಲುದಾರರಾಗಿದ್ದೆ. ದುಬೈನಲ್ಲಿ ಡೀಲರ್​ಗಳಿಗೆ ವಿದೇಶಿ ಕರೆನ್ಸಿಯಲ್ಲಿ ಹಣ ಪಾವತಿ ಮಾಡಲಾಗಿತ್ತು.

ಓರ್ವ ಡೀಲರ್ ಒಮ್ಮೆ ದುಬೈನಲ್ಲಿ ಚಿನ್ನವನ್ನು ಪೂರೈಸದಿದ್ದರಿಂದ 1.7 ಕೋಟಿ ರೂ. ಮೋಸ ಹೋಗಿದ್ವಿ. 1.7 ಕೋಟಿ ಹಣವನ್ನು ರನ್ಯಾ ರಾವ್ ಭಾರತದಿಂದ ದುಬೈಗೆ ಹವಾಲಾ ಮೂಲಕ ತರಿಸಿದ್ದರು. ರನ್ಯಾ ರಾವ್​ಗೆ ತನ್ನ ಕುಟುಂಬದ ಸಂಪರ್ಕದ ಮೂಲಕ ಜಿನೇವಾ ಮತ್ತು ಬ್ಯಾಂಕಾಕ್‌ನಲ್ಲಿ ಡೀಲರ್​ಗಳ ಪರಿಚಯ ಇದೆ. ರನ್ಯಾ ರಾವ್ ಚಿನ್ನವನ್ನು ಖರೀದಿಸುತ್ತಿದ್ದಳು, ಕಸ್ಟಮ್ಸ್ ಅಧಿಕಾರಿಗಳ ಬಳಿ ಜಿನೇವಾಗೆ ತೆಗೆದುಕೊಂಡು ಹೋಗುತ್ತೇನೆ ಅಂತ ನನ್ನ ಹೆಸರಲ್ಲಿ ಡಿಕ್ಲರೇಷನ್ ಕೊಡುತ್ತಿದ್ದಳು. ಏಪ್ರಿಲ್ 2024 ರಿಂದ ಜಿನೇವಾ ಅಥವಾ ಬ್ಯಾಂಕಾಕ್‌ನಿಂದ ಚಿನ್ನವನ್ನು ಖರೀದಿಸಲಾಗಿದೆ. ರನ್ಯಾ ತನ್ನ HDFC ಬ್ಯಾಂಕ್ ಮೂಲಕ VIRA DIAMONDS ಕಂಪನಿ ರಚನೆಗಾಗಿ 8-10 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾಳೆ ಎಂದು ತರುಣ್ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ.

ಇದನ್ನೂ ಓದಿ
Image
ಸ್ವಿಟ್ಜರ್ಲೆಂಡ್​ಗೆ ಹೋಗ್ತೇನೆಂದು ದುಬೈ ಅಧಿಕಾರಿಗಳಿಗೆ ಯಾಮಾರಿಸಿದ್ದ ರನ್ಯಾ
Image
ಬಿಜೆಪಿ ಮುಖಂಡನ ವಿಡಿಯೋ: 20 ಲಕ್ಷಕ್ಕೆ ಡಿಮ್ಯಾಂಡ್‌, ಮಾಯಾಂಗನೆ ಲಾಕ್
Image
ಕಾರವಾರದಲ್ಲಿ SSLC ವಿದ್ಯಾರ್ಥಿ, ತುಮಕೂರಿನಲ್ಲಿ PUC ವಿದ್ಯಾರ್ಥಿನಿ ಸಾವು
Image
ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ಇದನ್ನೂ ಓದಿ: ರನ್ಯಾ ರಾವ್ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ

ರನ್ಯಾಗೆ ಸಿಬಿಐ ಸಂಕಷ್ಟ ಸನ್ನಿಹಿತ

ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ನಟಿ ರನ್ಯಾ ರಾವ್ ಅವರನ್ನು ಸಿಬಿಐ ತನ್ನ ಕಸ್ಡಡಿಗೆ ಪಡೆಯುವ ಸಾಧ್ಯತೆ ಇದೆ. ಸಿಬಿಐ ಈಗಾಗಲೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯ ಪಿಎಸ್ಐ ಹಾಗೂ ಇಬ್ಬರು ಪೊಲೀಸ್ ಕಾನ್ಸಟೇಬಲ್ ಹೇಳಿಕೆ ಪಡೆದಿದೆ. ಹಾಗೇ ವಿಮಾನ ನಿಲ್ದಾಣದಲ್ಲಿ ಮಹಜರು ನಡೆಸಿದೆ. ಇದರ ಮುಂದಿನ ಭಾಗವಾಗಿ ನಟಿ ರನ್ಯಾ ರಾವ್​ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಲು ಸಿದ್ಧತೆ ನಡೆಸಿದೆ. ಆರ್ಥಿಕ‌ ಅಪರಾಧಗಳ ವಿಶೇಷ ನ್ಯಾಯಾಲಯದ ಅನುಮತಿ ಪಡೆದು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ನಟಿ ರನ್ಯಾ ರಾವ್ ಸದ್ಯ ಪರಪ್ಪನ ಅಗ್ರಹಾರ ಜೈಲ್ಲಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 am, Mon, 17 March 25

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ