AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಕಳ್ಳಸಾಗಾಣಿಕೆ: ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ ನಟಿ ರನ್ಯಾ ರಾವ್

ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರು ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಗಿತ್ತು. 64 ನೇ ಸಿಸಿಹೆಚ್ ನ್ಯಾಯಾಲಯದಿಂದ ಜಾಮೀನು ನಿರಾಕರಿಸಲ್ಪಟ್ಟ ನಂತರ, ಅವರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಇದೇ ವೇಳೆ, ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಲಾಗಿದೆ.

ಚಿನ್ನ ಕಳ್ಳಸಾಗಾಣಿಕೆ: ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ ನಟಿ ರನ್ಯಾ ರಾವ್
ರನ್ಯಾ ರಾವ್​
ರಮೇಶ್​ ಎಮ್​.
| Edited By: ವಿವೇಕ ಬಿರಾದಾರ|

Updated on: Apr 01, 2025 | 3:46 PM

Share

ಬೆಂಗಳೂರು, ಏಪ್ರಿಲ್​ 01: ಚಿನ್ನ ಕಳ್ಳಸಾಗಾಣಿಕೆ (Gold Smugling) ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ (Ranya Rao) ಜಾಮೀನು ಕೋರಿ ಹೈಕೋರ್ಟ್​ಗೆ (High Court) ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್​ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿದ್ದರು. ಸದ್ಯ, ನಟಿ ರನ್ಯಾ ರಾವ್​ ಪರಪ್ಪನ ಅಗ್ರಹಾದಲ್ಲಿದ್ದಾರೆ.

ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ರನ್ಯಾ ರಾವ್​ ಜಾಮೀನು ಕೋರಿ 64 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಹಲವು ಕಾರಣಗಳನ್ನು ನೀಡಿ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ, ರನ್ಯಾ ರಾವ್ ಪರ ವಕೀಲರು ಹೈಕೋರ್ಟ್​ ಮೆಟ್ಟಿಲು ಏರಿದ್ದಾರೆ. ನಟಿ ರನ್ಯಾ ರಾವ್​ಗೆ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್​ಗೆ ತಾತ್ಕಾಲಿಕ ರಿಲೀಫ್

ನಟಿ ರನ್ಯಾ ರಾವ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ನಟಿ ರನ್ಯಾ ರಾವ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ರನ್ಯಾ ಸಂಬಂಧಿ ಅಕುಲಾ ಅನುರಾಧ ದೂರು, ನೀಡಿದ್ದು ಎಫ್​ಐಆರ್​ ದಾಖಲಿಸಲಾಗಿತ್ತು. ಎಫ್​ಐಆರ್​ ರದ್ದು ಕೋರಿ ಬಸನಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ ಮೆಟ್ಟಿಲು ಏರಿದ್ದರು.

ಇದನ್ನೂ ಓದಿ
Image
ರನ್ಯಾ​​ ಗೋಲ್ಡ್ ಸ್ಮಂಗ್ಲಿಂಗ್​ ಕೇಸ್​: 2ನೇ ಆರೋಪಿ ತರುಣ್​ಗೆ ಬಿಗ್ ಶಾಕ್​!
Image
ಚಿನ್ನ ಕಳ್ಳಸಾಗಾಣಿಕೆ ಕೇಸ್​: ದುಬೈನಲ್ಲಿ ಕಂಪನಿ ತೆರದಿದ್ರು ನಟಿ ರನ್ಯಾ
Image
ರನ್ಯಾ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ
Image
ನಟಿ ರನ್ಯಾ ರಾವ್​ ಕೇಸ್‌: ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ!

ಇದೀಗ, ಹೈಕೋರ್ಟ್​ ಯತ್ನಾಳ್​ ವಿರುದ್ಧದ ಎಫ್​ಐಆರ್​ಗೆ ಏಪ್ರಿಲ್ 28ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿನ್​ಎಸ್​ ಸೆಕ್ಷನ್​ 79 ಅನ್ವಯವಾಗುವುದಿಲ್ಲವೆಂದು ಯತ್ನಾಳ್ ಪರ ವಕೀಲರು ವಾದಿಸಿದ್ದರು.

ಇದನ್ನೂ ಓಸಿ: ರನ್ಯಾ ರಾವ್ ಚಿನ್ನ ಕಳ್ಳ ಸಾಗಣೆ ಪ್ರಕರಣ: ಡಿಆರ್​​​ಐಗೆ ಸಿಕ್ಕ ಡಿಜಿಟಲ್ ಸಾಕ್ಷಿಯಲ್ಲಿ ಸ್ಮಗ್ಲಿಂಗ್ ರಹಸ್ಯ ಬಯಲು

ಪ್ರೋಟೋಕಾಲ್ ದುರುಪಯೋಗ ಆಗಿರುವುದು ದೃಢ

ನಟಿ ರನ್ಯಾ ರಾವ್​ ಅವರು ಪೊಲೀಸ್​ ಪ್ರೋಟೋಕಾಲ್​ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಐಎಎಸ್​ ಅಧಿಕಾರಿ ಗೌರವ್ ಗುಪ್ತಾ ಸಲ್ಲಿಸಿರುವ ವರದಿಯಲ್ಲಿ ದೃಢವಾಗಿದೆ. ಮಲತಂದೆ, ಡಿಜಿಪಿ ರಾಮಚಂದ್ರರಾವ್​ ಅವರು ತನ್ನ ಮಗಳಿಗಾಗಿ ಪೊಲೀಸ್​ ಪ್ರೋಟೋಕಾಲ್​ ದುಪಯೋಗ ಪಡಿಸಿಕೊಂಡಿರುವುದು ಸಾಕ್ಷಿಗಳ ದೃಢವಾಗಿದೆ. ಪ್ರೋಟೋಕಾಲ್ ದುರುಪಯೋಗದ ತನಿಖಾ ವರದಿಯನ್ನು ಐಎಎಸ್​ ಅಧಿಕಾರಿ ಗೌರವ್ ಗುಪ್ತಾ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು