Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಬಿಐ

ರನ್ಯಾ ರಾವ್ ಅವರನ್ನು 14.2 ಕೆಜಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಡಿಆರ್​ಐ ಅಧಿಕಾರಿಗಳು 17.29 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ. ಸಿಬಿಐ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಗಳೂರು ಮತ್ತು ಮುಂಬೈನಲ್ಲಿ ತನಿಖೆ ನಡೆಯುತ್ತಿದೆ. ರನ್ಯಾ ರಾವ್ ಆಗಾಗ್ಗೆ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದರು ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ.

ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಬಿಐ
ರನ್ಯಾ ರಾವ್​
Follow us
Kiran HV
| Updated By: ವಿವೇಕ ಬಿರಾದಾರ

Updated on:Mar 08, 2025 | 1:47 PM

ಬೆಂಗಳೂರು, ಮಾರ್ಚ್​ 08: ಚಿನ್ನ ಕಳ್ಳಸಾಗಣೆ (Gold Smuggling) ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ (Ranya Rao) ವಿರುದ್ಧ ಡಿಆರ್​ಐ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಕೇಂದ್ರ ತನಿಖಾ ದಳ (CBI) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಪ್ರಕರಣ ಸಂಬಂಧ ಸಿಬಿಐ ಮುಂಬೈ ಹಾಗೂ ಬೆಂಗಳೂರಿನಲ್ಲಿ ತನಿಖೆ ಆರಂಭಿಸಿದೆ. 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ನಟಿಯ ಮೇಲಿದೆ. ನಟಿ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್​ಐ ಅಧಿಕಾರಿಗಳು ಈಗಾಗಲೇ ವಶಪಡಿಸಿಕೊಂಡಿದ್ದಾರೆ.

ಆಗಾಗ ವಿದೇಶಕ್ಕೆ ಹೋಗುತ್ತಿದ್ದ ರನ್ಯಾ ರಾವ್​

ನಟಿ ರನ್ಯಾ ರಾವ್​ ನಿರಂತರವಾಗಿ ವಿದೇಶಕ್ಕೆ ಪ್ರಯಾಣ ಮಾಡುತ್ತಲೇ ಇದ್ದರು. ರನ್ಯಾ ರಾವ್ ಇದನ್ನೇ ಬಂಡವಾಳವಾಗಿ ಕೂಡ ಮಾಡಿಕೊಂಡಿದ್ದರು. ರನ್ಯಾ ರಾವ್ ಡಿಆರ್​ಐ ಅಧಿಕಾರಿಗಳ ಮುಂದೆ ನೀಡಿರುವ ಹೇಳಿಕೆಯ ಪ್ರಕಾರ, ಯೂರೋಪ್, ಅಮೇರಿಕ, ದುಬೈ ದೇಶಗಳನ್ನು ಸುತ್ತಿದ್ದಾರೆ. ಕಳೆದ ವರ್ಷ ಡಿಸೆಂಬರ್ 24 ರಂದು ದುಬೈಗೆ ತೆರಳಿ, ಡಿಸೆಂಬರ್ 27 ಕ್ಕೆ ಭಾರತಕ್ಕೆ ವಾಪಸ್ಸು ಆಗಿದ್ದರು.

ಬಳಿಕ, ಜನವರಿ 18 ರಂದು ಅಮೆರಿಕಾಕ್ಕೆ ತೆರಳಿ ಏಳು ದಿನ ಅಲ್ಲೇ ತಂಗಿದ್ದರು. ಜನವರಿ 25 ರಂದು ಅಮೆರಿಕಾದಿಂದ ಬೆಂಗಳೂರಿಗೆ ವಾಪಸ್ಸು ಆಗಿದ್ದರು. ನಂತರ ಫೆಬ್ರವರಿಯಿಂದ ನಿರಂತರವಾಗಿ ದುಬೈಗೆ ತೆರಳಿದ್ದಾರೆ. ಫೆಬ್ರವರಿ 2 ರಿಂದ ಮಾರ್ಚ್ 3ವರೆಗೂ ಐದು ಬಾರಿ ರನ್ಯಾ ರಾವ್​ ದುಬೈಗೆ ತೆರಳಿದ್ದರು.

ಇದನ್ನೂ ಓದಿ
Image
ರನ್ಯಾ ರಾವ್ ಬೆನ್ನಲ್ಲೇ ಚಿನ್ನ ಸಾಗಾಟ ಮಾಡ್ತಿದ್ದ ಮತ್ತೋರ್ವ ಸಿಕ್ಕಿಬಿದ್ದ
Image
ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ 3 ದಿನ ಡಿಆರ್​ಐ ಕಸ್ಟಡಿಗೆ
Image
ಹೇಗಿದ್ದ ರನ್ಯಾ ಹೇಗಾದ್ರು ನೋಡಿ: ಜೈಲು ಸೇರಿದ ಎರಡೇ ದಿನಕ್ಕೆ ಮಂಕಾದ ನಟಿ
Image
ಚಿನ್ನ ಕಳ್ಳ ಸಾಗಾಣಿಕೆ: 4 ತಿಂಗಳ ಹಿಂದೆ ನಡೆದಿತ್ತು ನಟಿ ರನ್ಯಾ ರಾವ್ ಮದುವೆ

ರನ್ಯಾ ರಾವ್​ ಬಂಧನವಾಗಿದ್ದು ಹೇಗೆ?

ಮಾರ್ಚ್ 3ರ ರಾತ್ರಿ ದುಬೈದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ್ದ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲ ಮಗಳು, ನಟಿ ರನ್ಯಾ ರಾವ್​ರನ್ನು ಡಿಆರ್​ಐ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ರನ್ಯಾ ರಾವ್ ಬಳಿ 14.2 ಕೆಜಿ ಮೌಲ್ಯದ ಚಿನ್ನ ಪತ್ತೆಯಾಗಿದ್ದು, ಅದರ ಮೌಲ್ಯ 12.56 ಕೋಟಿ ರೂಪಾಯಿಯಾಗಿತ್ತು. ಕೂಡಲೆ ಅಧಿಕಾರಿಗಳು ರನ್ಯಾ ರಾವ್​ರನ್ನು ವಶಕ್ಕೆ ಪಡೆದ್ದಿದ್ದರು.

ಬಳಿಕ ಡಿಆರ್​ಐ ಅಧಿಕಾರಿಗಳು ಲ್ಯಾವೆಲ್ಲಿ ರಸ್ತೆಯಲ್ಲಿರುವ ರನ್ಯಾ ರಾವ್ ಅಪಾರ್ಟ್ಮೆಂಟ್​​ನಲ್ಲಿ ತಪಾಸಣೆ ನಡೆಸಿದಾಗ 2.06 ಕೋಟಿ ಮೌಲ್ಯದ ಚಿನ್ನಾಭರಣ, 2.67 ಕೋಟಿ ನಗದು ಸೇರಿ ಒಟ್ಟು 17.29 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿತ್ತು. ರನ್ಯಾ ರಾವ್​ರನ್ನು ಸುದೀರ್ಘ ವಿಚಾರಣೆ ನಡೆಸಿ ಮಾರ್ಚ್​ 5ರ ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.

ಮಾರ್ಚ್​ 7ರ ಮಧ್ಯಾಹ್ನ ರನ್ಯಾ ರಾವ್​ರನ್ನು 3 ದಿನಗಳ ಕಾಲ ಡಿಆರ್​​ಐ ಕಸ್ಟಡಿಗೆ ನೀಡಿ ವಿಶೇಷ ಆರ್ಥಿಕ ಅಪರಾಧ ವಿಭಾಗದ ನ್ಯಾಯಾಧೀಶರು ಆದೇಶ ನೀಡಿದ್ದರು. ಜೊತೆಗೆ ಸಂಜೆ ವೇಳೆ ಓಪನ್ ಕೋರ್ಟ್​ ಮುಂದೆ ಹಾಜರುಪಡಿಸುವಂತೆ ಸೂಚಿಸಿದ್ದರು.  ಹೀಗಾಗಿ ರನ್ಯಾ ರಾವ್​ ಅವರನ್ನು ಸಂಜೆ 5.45 ರ ಸುಮಾರಿಗೆ ಡಿಆರ್​ಐ ಅಧಿಕಾರಿಗಳು ನೃಪತುಂಗ ರಸ್ತೆಯಲ್ಲಿರುವ ಅಪರಾಧ ವಿಭಾಗಗಳ ವಿಶೇಷ ಕೋರ್ಟ್​ ಮುಂದೆ ಹಾಜರುಪಡಿಸಿದ್ದರು.

ಸೋಮವಾರ (ಮಾರ್ಚ್ 10) ರಂದು ಸಂಜೆ 4.30 ರೊಳಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್​ಗೆ ಹಾಜರು ಪಡಿಸಬೇಕು. ವಿಚಾರಣೆಯನ್ನು ಕಚೇರಿ ಅವಧಿ ಒಳಗೆ ಮುಗಿಸಿ, ವಿಚಾರಣೆ ಬಳಿಕ ಡಿಆರ್​ಐ ಅಧಿಕಾರಿ ಸಮ್ಮುಖದಲ್ಲಿ ಆರೋಪಿ ರನ್ಯಾ ರಾವ್​ ಅವರಿಗೆ ಅರ್ಧ ಗಂಟೆ ವಕೀಲರ ಭೇಟಿಗೆ ಅವಕಾಶ ನೀಡಬೇಕು ನ್ಯಾಯಾಧೀಶರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಅಗತ್ಯ ಬಿದ್ದರೆ ತಕ್ಷಣಕ್ಕೆ ಆರೋಪಿಗೆ ಚಿಕಿತ್ಸೆ ಕೊಡಿಸುವುದರ ಜೊತೆಗೆ ವಿಚಾರಣೆ ವೇಳೆ ಒತ್ತಡ ಹೇರಬಾರದು ಅಂತ ಡಿಆರ್​ಐ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.

ಇದನ್ನೂ ಓದಿ: ನಟಿ ರನ್ಯಾ ಮಲತಂದೆ ರಾಮಚಂದ್ರ ರಾವ್ ಹಿನ್ನೆಲೆಯೇನು? ಚಿನ್ನ ಸ್ಮಗ್ಲಿಂಗ್​ನಲ್ಲಿ ಡಿಜಿಪಿ ಕೈವಾಡವೂ ಇತ್ತೇ?

ರನ್ಯಾ ರಾವ್​ ವಿಚಾರಣೆಗೆ ಸಹಕರಿಸಬೇಕು ಇಲ್ಲದಿದ್ದರೇ, ಆದೇಶ ಬರೆಯುವಾಗ ಎಲ್ಲವನ್ನು ಪರಿಗಣಿಸಬೇಕಾಗುತ್ತೆ ಎಂದು ನ್ಯಾಯಾಲಯ ಎಚ್ಚರಿಸಿದೆ. ಸದ್ಯ ರನ್ಯಾ ರಾವ್​ ಅವರನ್ನು ಡಿಆರ್​ಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Sat, 8 March 25

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ