
ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಜುಲೈ 2 ಜನ್ಮದಿನ. ಅವರಿಗೆ 47 ವರ್ಷ ತುಂಬಲಿದೆ. ಪ್ರತಿ ಬಾರಿ ಬರ್ತ್ಡೇ ಬಂದಾಗ ಅಭಿಮಾನಿಗಳು ಅವರ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ನೋಡುತ್ತಾರೆ. ಆ ರೀತಿ ಕಾದು ಕುಳಿತ ಅಭಿಮಾನಿಗಳಿಗೆ ಈ ಬಾರಿ ನಿರಾಸೆ ಆಗಿದೆ. ಈ ವರ್ಷ ಬರ್ತ್ಡೇನ ಫ್ಯಾನ್ಸ್ ಜೊತೆ ಆಚರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗಣೇಶ್ ಹೇಳಿದ್ದಾರೆ. ಇದು ಫ್ಯಾನ್ಸ್ಗೆ ಬೇಸರ ಮೂಡಿದೆ.
ಅಭಿಮಾನಿಗಳಿಗೆ ನೆಚ್ಚಿನ ನಟನ ಬರ್ತ್ಡೇ ಬಂತು ಎಂದರೆ ಅದು ಹಬ್ಬವೇ ಸರಿ. ಆ ಸಂದರ್ಭದಲ್ಲಿ ಅಭಿಮಾನಿಗಳು ಹೀರೋ ಜೊತೆ ಕೇಕ್ ಕಟ್ ಮಾಡಿ, ಫೋಟೋ ಕ್ಲಿಕ್ಕಿಸಿಕೊಳ್ಳಬೇಕು ಎಂದು ಬಯಸುತ್ತಾರೆ. ಈ ಬಾರಿ ಗಣೇಶ್ ಫ್ಯಾನ್ಸ್ ಕೂಡ ಈ ಅವಕಾಶಕ್ಕಾಗಿ ಕಾದಿದ್ದರು. ಆದರೆ, ಅವರಿಗೆ ನಿರಾಸೆ ಆಗಿದೆ. ಈ ಬಗ್ಗೆ ಗಣೇಶ್ ಪೋಸ್ಟ್ ಮಾಡಿದ್ದಾರೆ.
‘ಆತ್ಮೀಯ ಅಭಿಮಾನಿ ಸ್ನೇಹಿತರೆ, ಜುಲೈ 2 ನಾನು ಹುಟ್ಟಿದ ದಿನ. ಸಹಜವಾಗಿ ನನಗದು ನಿಮ್ಮ ಪ್ರೀತಿ ಹಾಗೂ ಅಭಿಮಾನವನ್ನು ಅತ್ಯಂತ ಸಮೀಪದಿಂದ ಕಣ್ಣುಂಬಿಕೊಂಡು ಸಂಭ್ರಮಿಸುವ ದಿನ. ಆದರೆ ಈ ಬಾರಿ ನಾನು ‘ಪಿನಾಕ’ ಹಾಗೂ ‘ಯುವರ್ ಸಿನ್ಸಿಯರ್ಲಿ’ ಚಿತ್ರದ ಹೊರಾಂಗಣ ಚಿತ್ರೀಕರಣಗಳಲ್ಲಿ ಭಾಗವಹಿಸಬೇಕಿದೆ’ ಎಂದು ಗಣೇಶ್ ಪತ್ರ ಆರಂಭಿಸಿದ್ದಾರೆ.
‘ಹೀಗಾಗಿ, ಜುಲೈ2 ರಂದು ನಾನು ನಿಮ್ಮೆಲ್ಲರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮನ್ನು ರಂಜಿಸುವುದಕ್ಕಿಂತ ದೊಡ್ಡ ಹಬ್ಬ ನನಗೆ ಮತ್ತೊಂದಿಲ್ಲ. ಆದ ಕಾರಣ ಯಾರೂ ಮನೆಯ ಬಳಿ ಬರದೆ, ಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ತಾವುಗಳು ಇದ್ದಲ್ಲಿದಂಲೇ ನನಗೆ ಆಶಿಸಿ ಆಶೀರ್ವದಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ’ ಎಂದು ಹೇಳಿದ್ದಾರೆ ಗಣೇಶ್.
ಇದನ್ನೂ ಓದಿ: ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್ ಗಣೇಶ್ಗೆ ಅವಿನಾಭಾವ ಸಂಬಂಧ
ಇತ್ತೀಚೆಗೆ ಆರ್ಸಿಬಿ ಸೆಲೆಬ್ರೇಷನ್ ಘಟನೆ ಸಾಕಷ್ಟು ಶಾಕಿಂಗ್ ಆಗಿತ್ತು. ಈ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟರು. ಈ ಘಟನೆ ಬಳಿಕ ಅಭಿಮಾನಿಗಳನ್ನು ಸೇರಿಸುವಾಗ ಎಲ್ಲರೂ ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದಾರೆ. ಗಣೇಶ್ ಕೂಡ ಈ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಂಡಿರಬಹುದು ಎನ್ನಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.