AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​ ಚರಣ್​ ಒಪ್ಪದಿದ್ದರೂ ಲಿಪ್​ ಲಾಕ್ ಮಾಡಿದ್ದ ಸಮಂತಾ? ‘ರಂಗಸ್ಥಲಂ’ ತೆರೆಹಿಂದೆ ಮುತ್ತಿನ ಪ್ರಹಸನ

ಸಮಂತಾ ಜೊತೆ ಲಿಪ್​ ಲಾಕ್​ ದೃಶ್ಯದಲ್ಲಿ ನಟಿಸಲು ರಾಮ್​ ಚರಣ್​ ಹಿಂದೇಟು ಹಾಕಿದ್ದರು. ಒಂದಲ್ಲ, ಎರಡಲ್ಲ, ಮೂರು ಬಾರಿ ತಿಳಿಸಿ ಹೇಳಿದರೂ ಅವರು ಅದಕ್ಕೆ ಒಪ್ಪಲಿಲ್ಲ. ಕಡೆಗೆ ನಿರ್ದೇಶಕರು ಬೇರೆ ಉಪಾಯ ಮಾಡಬೇಕಾಯಿತು.

ರಾಮ್​ ಚರಣ್​ ಒಪ್ಪದಿದ್ದರೂ ಲಿಪ್​ ಲಾಕ್ ಮಾಡಿದ್ದ ಸಮಂತಾ? ‘ರಂಗಸ್ಥಲಂ’ ತೆರೆಹಿಂದೆ ಮುತ್ತಿನ ಪ್ರಹಸನ
ಸಮಂತಾ ಅಕ್ಕಿನೇನಿ, ರಾಮ್​ ಚರಣ್
TV9 Web
| Edited By: |

Updated on: Sep 06, 2021 | 4:39 PM

Share

ನಟಿ ಸಮಂತಾ ಅಕ್ಕಿನೇನಿ ಅವರು ಒಂದಿಲ್ಲೊಂದು ಕಾರಣಕ್ಕೆ ಈಗ ಸುದ್ದಿ ಆಗುತ್ತಿದ್ದಾರೆ. ಸಿನಿಮಾದ ಜೊತೆಜೊತೆಗೆ ಅವರ ವೈಯಕ್ತಿಕ ಜೀವನದ ವಿಚಾರಗಳೆಲ್ಲ ಹೊರಬರುತ್ತಿವೆ. ಪತಿ ನಾಗ ಚೈತನ್ಯ ಜೊತೆ ಅವರಿಗೆ ವೈಮನಸ್ಸು ಉಂಟಾಗಿದೆ ಎಂಬ ಗಾಸಿಪ್​ ಕೂಡ ಹಬ್ಬಿದೆ. ಈ ಸಮಯಕ್ಕೆ ಸರಿಯಾಗಿ ಅವರ ಒಂದು ಮುತ್ತಿನ ಕಥೆ ಬಹಿರಂಗ ಆಗಿದೆ. ಅದು ‘ರಂಗಸ್ಥಲಂ’ ಸಿನಿಮಾದ ಶೂಟಿಂಗ್​ ವೇಳೆ ನಡೆದಿದ್ದು. ಆ ವಿಚಾರ ಟಾಲಿವುಡ್​ ಅಂಗಳದಲ್ಲಿ ಜೀವ ಪಡೆದುಕೊಂಡಿದೆ.

‘ರಂಗಸ್ಥಲಂ’ ಸಿನಿಮಾಗೆ ಸುಕುಮಾರ್​ ನಿರ್ದೇಶನ ಮಾಡಿದ್ದರು. ಸಮಂತಾ ಮತ್ತು ರಾಮ್​ ಚರಣ್​ ವೃತ್ತಿಜೀವನಕ್ಕೆ ಆ ಚಿತ್ರದಿಂದ ದೊಡ್ಡ ಮೈಲೇಜ್​ ಸಿಕ್ಕಿತು. ಅದರಲ್ಲಿನ ಒಂದು ಲಿಪ್​ ಲಾಕ್​ ದೃಶ್ಯ ಸಿಕ್ಕಾಪಟ್ಟೆ ಹೈಲೈಟ್ ಆಗಿತ್ತು. ಆ ದೃಶ್ಯದ ಹಿಂದೆ ಒಂದು ಇಂಟರೆಸ್ಟಿಂಗ್​ ಕಥೆ ಇದೆ. ಚಿತ್ರತಂಡ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಬಾಯಿಬಿಟ್ಟಿಲ್ಲವಾದರೂ ರಸವತ್ತಾದ ವಿವರಗಳು ಹರಿದಾಡುತ್ತಿರುವುದು ನಿಜ.

ನಾಯಕ-ನಾಯಕಿ ನಡುವೆ ಪ್ರೀತಿಯನ್ನು ತೋರಿಸಲು ಆ ಲಿಪ್​ ಲಾಕ್​ ದೃಶ್ಯ ನಿರ್ದೇಶಕರಿಗೆ ಮುಖ್ಯವಾಗಿತ್ತು. ಆದರೆ ರಾಮ್​ ಚರಣ್​ ಅವರು ಆ ದೃಶ್ಯದಲ್ಲಿ ನಟಿಸಲು ಹಿಂದೇಟು ಹಾಕಿದರು. ಒಂದಲ್ಲ, ಎರಡಲ್ಲ, ಮೂರು ಬಾರಿ ತಿಳಿಸಿ ಹೇಳಿದರೂ ಅವರು ಅದಕ್ಕೆ ಒಪ್ಪಲಿಲ್ಲ. ರಾಮ್​ ಚರಣ್​ ಪತ್ನಿ ಉಮಾಸನಾ ಅವರಿಗೆ ಇದೆಲ್ಲ ಇಷ್ಟ ಆಗುವುದಿಲ್ಲ ಎಂಬ ಕಾರಣಕ್ಕೆ ಮುತ್ತಿನ ದೃಶ್ಯಕ್ಕೆ ಅವರು ನೋ ಎಂದಿದ್ದರು.

ಇನ್ನೇನು ಚಿತ್ರೀಕರಣ ಮುಗಿಯುತ್ತಿದೆ ಎಂದಾಗ ನಿರ್ದೇಶಕ ಸುಕುಮಾರ್ ಒಂದು ಪ್ಲ್ಯಾನ್​ ಮಾಡಿದರಂತೆ. ‘ನೀವು ಕಿಸ್​ ಮಾಡುವುದು ಬೇಡ. ಸಮಂತಾ ಮತ್ತು ನೀವು ದೂರದಿಂದಲೇ ಲಿಪ್​ ಲಾಕ್​ ಮಾಡಿದಂತೆ ನಟಿಸಿ. ಗ್ರಾಫಿಕ್ಸ್​ ಮೂಲಕ ಅದನ್ನು ಲಿಪ್​ ಲಾಕ್​ ರೀತಿ ತೋರಿಸುತ್ತೇನೆ’ ಎಂದು ನಿರ್ದೇಶಕರು ಹೇಳಿದ ಬಳಿಕ ರಾಮ್​ ಚರಣ್​ ಒಪ್ಪಿಕೊಂಡರಂತೆ. ಆದರೆ ಅದರ ಚಿತ್ರೀಕರಣ ನಡೆಯುವಾಗ ಸಮಂತಾ ನಿಜವಾಗಿಯೇ ಲಿಪ್ ಲಾಕ್​ ಮಾಡಿಬಿಟ್ಟರು ಎಂಬ ಸುದ್ದಿ ಈಗ ಗಾಸಿಪ್​ ಮಂದಿಯ ಬಾಯಲ್ಲಿ ಹರಿದಾಡುತ್ತಿದೆ. ಚಿತ್ರತಂಡದಿಂದ ಯಾರಾದರೊಬ್ಬರು ಈ ಕುರಿತು ಅಧಿಕೃತ ಸ್ಪಷ್ಟನೆ ನೀಡುವವರೆಗೆ ಇದನ್ನು ನಂಬುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ.

ಇದನ್ನೂ ಓದಿ:

ಮಗ-ಸೊಸೆಯ ಡಿವೋರ್ಸ್​ ವದಂತಿಯಿಂದ ಮುಖ್ಯ ನಿರ್ಧಾರ ತೆಗೆದುಕೊಂಡ ನಾಗಾರ್ಜುನ? ಹೆಚ್ಚಿತು ಸಂಶಯದ ಬೆಂಕಿ

ಅಭಿಮಾನಿಗಳ ಬಳಿ ಬಹಿರಂಗ ಕ್ಷಮೆ ಕೇಳಿ, ನಟನೆಯಿಂದ ಬ್ರೇಕ್​ ಪಡೆದ ಸಮಂತಾ ಅಕ್ಕಿನೇನಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ