AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guntur Kaaram: ಮಾಹಿತಿ ಲೀಕ್​ ಆಗುವುದಕ್ಕೂ ಮುನ್ನವೇ ಎಚ್ಚರಿಕೆ ವಹಿಸಿದ ನಟಿ ಮೀನಾಕ್ಷಿ ಚೌಧರಿ; ವಿಡಿಯೋ ವೈರಲ್​

Meenakshi Chaudhary: ಜಾಸ್ತಿ ಮಾತನಾಡಿದರೆ ವಿಷಯ ಲೀಕ್​ ಆಗುತ್ತದೆ ಎಂಬುದು ಮೀನಾಕ್ಷಿ ಚೌಧರಿ ಅವರಿಗೆ ಅರ್ಥವಾಯ್ತು. ಹಾಗಾಗಿ ಅವರು ‘ನೋ ಲೀಕ್ಸ್​’ ಎಂದು ಜೋರಾಗಿ ಹೇಳಿದರು.

Guntur Kaaram: ಮಾಹಿತಿ ಲೀಕ್​ ಆಗುವುದಕ್ಕೂ ಮುನ್ನವೇ ಎಚ್ಚರಿಕೆ ವಹಿಸಿದ ನಟಿ ಮೀನಾಕ್ಷಿ ಚೌಧರಿ; ವಿಡಿಯೋ ವೈರಲ್​
ಮೀನಾಕ್ಷಿ ಚೌಧರಿ
ಮದನ್​ ಕುಮಾರ್​
|

Updated on: Jul 17, 2023 | 6:54 PM

Share

ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ (Guntur Kaaram) ಸಿನಿಮಾಗೆ ನಾಯಕಿ ಯಾರು? ಮೊದಲು ಪೂಜಾ ಹೆಗ್ಡೆ ಆಯ್ಕೆ ಆಗಿದ್ದರು. ಆದರೆ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರು ಚಿತ್ರತಂಡದಿಂದ ಹೊರನಡೆದರು. ಕನ್ನಡದ ಹುಡುಗಿ ಶ್ರೀಲೀಲಾ (Sreeleela) ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆದರೆ ಪೂಜಾ ಹೆಗ್ಡೆ ಅವರು ಬಿಟ್ಟುಹೋದ ಸ್ಥಾನಕ್ಕೆ ಮೀನಾಕ್ಷಿ ಚೌಧರಿ (Meenakshi Chaudhary) ಅವರನ್ನು ಕರೆತರಲಾಗಿದೆ ಎಂದು ಸುದ್ದಿ ಹರಡಿತ್ತು. ಅದನ್ನು ಈಗ ಸ್ವತಃ ಮೀನಾಕ್ಷಿ ಚೌಧರಿ ಅವರು ಖಚಿತಪಡಿಸಿದ್ದಾರೆ. ಅದು ಕೂಡ ಓಪನ್​ ವೇದಿಕೆಯಲ್ಲೇ ಅವರು ಒಪ್ಪಿಕೊಂಡಿದ್ದಾರೆ. ಆದರೆ ಹೆಚ್ಚಿನ ಮಾಹಿತಿ ಲೀಕ್​ ಆಗುವುದಕ್ಕೂ ಮುನ್ನವೇ ಅವರು ಬುದ್ಧಿವಂತಿಕೆ ತೋರಿಸಿದ್ದಾರೆ.

ಇತ್ತೀಚೆಗೆ ಮೀನಾಕ್ಷಿ ಚೌಧರಿ ಅವರು ಸಿನಿಮಾವೊಂದರ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದರು. ಈ ವೇಳೆ ವೇದಿಕೆ ಏರಿದ ಅವರಿಗೆ ‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ಕೇಳಲಾಯಿತು. ‘ಆ ಸಿನಿಮಾದಲ್ಲಿ ನಾನು ಇರುವುದು ಖುಷಿಯ ವಿಚಾರ. ನಾನು ಮೊದಲಿನಿಂದಲೂ ಮಹೇಶ್​ ಬಾಬು ಅವರ ಅಭಿಮಾನಿ. ಈಗತಾನೇ ಮೊದಲ ಹಂತದ ಶೂಟಿಂಗ್​ ಮುಗಿಸಿದ್ದೇವೆ. ಮೊದಲ ದಿನ ನನ್ನ ಚಿತ್ರೀಕರಣ ಮಹೇಶ್​ ಬಾಬು ಜೊತೆಗೆ ಇತ್ತು. ಈ ಅವಕಾಶ ನೀಡಿದ್ದಕ್ಕೆ ಮಹೇಶ್​ ಬಾಬು ಮತ್ತು ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್​ ಅವರಿಗೆ ಧನ್ಯವಾದಗಳು. ಅವರಿಬ್ಬರದ್ದು ಹಿಟ್​ ಕಾಂಬಿನೇಷನ್​’ ಎಂದು ಮೀನಾಕ್ಷಿ ಚೌಧರಿ ಹೇಳಿದ್ದಾರೆ.

ವೇದಿಕೆ ಮೇಲೆ ಮೀನಾಕ್ಷಿ ಚೌಧರಿ ಅವರು ಇನ್ನಷ್ಟು ಮಾತನಾಡಲಿ ಎಂಬುದು ಎಲ್ಲರ ಬಯಕೆ ಆಗಿತ್ತು. ಆದರೆ ಜಾಸ್ತಿ ಬಾಯಿ ಬಿಟ್ಟರೆ ವಿಷಯ ಲೀಕ್​ ಆಗುತ್ತದೆ ಎಂಬುದು ಮೀನಾಕ್ಷಿಗೆ ಅರ್ಥವಾಯ್ತು. ಹಾಗಾಗಿ ಅವರು ‘ನೋ ಲೀಕ್ಸ್​’ ಎಂದು ಜೋರಾಗಿ ಹೇಳಿದರು. ಆ ಮೂಲಕ ಸಿನಿಮಾದ ಬಗೆಗಿನ ಯಾವುದೇ ಪ್ರಮುಖ ವಿಷಯಗಳನ್ನು ಅವರು ಬಿಟ್ಟುಕೊಟ್ಟಿಲ್ಲ. ಅಷ್ಟರಮಟ್ಟಿಗೆ ಮೀನಾಕ್ಷಿ ಎಚ್ಚರಿಕೆ ವಹಿಸಿದ್ದಾರೆ. ಅವರು ಮಹೇಶ್​ ಬಾಬು ಬಗ್ಗೆ ಮಾತನಾಡುವಾಗ ಅಭಿಮಾನಿಗಳು ಖುಷಿಯಿಂದ ಜೈಕಾರ ಹಾಕಿದ್ದಾರೆ.

ಮಹೇಶ್​ ಬಾಬು ಪುತ್ರಿ ಸಿತಾರಾ ಚಿತ್ರರಂಗಕ್ಕೆ ಬರೋದು ಯಾವಾಗ? ಮಗಳ ಪರವಾಗಿ ಉತ್ತರಿಸಿದ ನಮ್ರತಾ

ಕೆಲವು ವರದಿಗಳ ಪ್ರಕಾರ, ಪೂಜಾ ಹೆಗ್ಡೆ ಬಿಟ್ಟುಹೋದ ಪಾತ್ರವನ್ನು ಶ್ರೀಲೀಲಾ ಮಾಡುತ್ತಿದ್ದಾರೆ. ಎರಡನೇ ನಾಯಕಿಯ ಪಾತ್ರವನ್ನು ಮೀನಾಕ್ಷಿ ಚೌಧರಿ ಅವರಿಗೆ ನೀಡಲಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಸದ್ಯಕ್ಕಂತೂ ಫಸ್ಟ್​ ಲುಕ್​ ಮತ್ತು ಟೈಟಲ್​ ಮೂಲಕ ‘ಗುಂಟೂರು ಖಾರಂ’ ಸಿನಿಮಾ ಗಮನ ಸೆಳೆಯುತ್ತಿದೆ. ಮಹೇಶ್​ ಬಾಬು ಜೊತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ