‘ಗುಂಟೂರು ಖಾರಂ’, ‘ಹನುಮಾನ್’, ‘ಕ್ಯಾಪ್ಟನ್ ಮಿಲ್ಲರ್’ ಚಿತ್ರಗಳ ಬಾಕ್ಸ್ ಆಫೀಸ್ ಗಳಿಕೆ ವಿವರ ಇಲ್ಲಿದೆ..

‘ಗುಂಟೂರು ಖಾರಂ’, ‘ಹನುಮಾನ್’ ಸಿನಿಮಾಗಳು ಮುಖಾಮುಖಿ ಆಗಿವೆ. ತಮಿಳಿನಲ್ಲಿ ‘ಕ್ಯಾಪ್ಟನ್ ಮಿಲ್ಲರ್’ ತೆರೆಗೆ ಬಂದಿದೆ. ಈ ಸಿನಿಮಾಗಳು ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದವು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಗುಂಟೂರು ಖಾರಂ’, ‘ಹನುಮಾನ್’, ‘ಕ್ಯಾಪ್ಟನ್ ಮಿಲ್ಲರ್’ ಚಿತ್ರಗಳ ಬಾಕ್ಸ್ ಆಫೀಸ್ ಗಳಿಕೆ ವಿವರ ಇಲ್ಲಿದೆ..
‘ಹನುಮಾನ್’, ‘ಗುಂಟೂರು ಖಾರಂ’, ‘ಕ್ಯಾಪ್ಟನ್ ಮಿಲ್ಲರ್
Follow us
|

Updated on:Jan 13, 2024 | 10:28 AM

ಸಂಕ್ರಾಂತಿ ಪ್ರಯುಕ್ತ ಡಿಸೆಂಬರ್ 12ರಂದು ಹಲವು ಸಿನಿಮಾಗಳು ರಿಲೀಸ್ ಆಗಿವೆ. ತೆಲುಗಿನಲ್ಲಿ ಮಹೇಶ್ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ ಹಾಗೂ ತೇಜ ಸಜ್ಜಾ ನಟನೆಯ ‘ಹನುಮಾನ್’ ಸಿನಿಮಾಗಳು ಮುಖಾಮುಖಿ ಆಗಿವೆ. ತಮಿಳಿನಲ್ಲಿ ‘ಕ್ಯಾಪ್ಟನ್ ಮಿಲ್ಲರ್’ ಹಾಗೂ ಹಿಂದಿಯಲ್ಲಿ ‘ಮೆರಿ ಕ್ರಿಸ್​ಮಸ್​’ ತೆರೆಗೆ ಬಂದಿವೆ. ಈ ಸಿನಿಮಾಗಳು ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದವು ಎನ್ನುವ ಬಗ್ಗೆ ಇಲ್ಲಿದೆ ವಿವರ. ಇಂದು (ಜನವರಿ 13) ಹಾಗೂ ನಾಳೆ (ಜನವರಿ 14) ಮತ್ತಷ್ಟು ಚಿತ್ರಗಳು ಬಿಡುಗಡೆ ಆಗಲಿವೆ.

‘ಗುಂಟೂರು ಖಾರಂ’

ಮಹೇಶ್ ಬಾಬು ನಟನೆಯ, ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ‘ಗುಂಟೂರು ಖಾರಂ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದಾಗ್ಯೂ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮೊದಲದಿನ ಉತ್ತಮ ಗಳಿಕೆ ಮಾಡಿದೆ. ಈ ಸಿನಿಮಾ ಮೊದಲ ದಿನ 50 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಆಂಧ್ರ, ತೆಲಂಗಾಣದಲ್ಲಿ 44.50 ಕೋಟಿ ರೂಪಾಯಿ, ಕರ್ನಾಟಕದಲ್ಲಿ 4.5 ಕೋಟಿ ರೂಪಾಯಿ, ತಮಿಳುನಾಡಿನಲ್ಲಿ 50 ಲಕ್ಷ ರೂಪಾಯಿ, ಉಳಿದ ಭಾಗಗಳಿಂದ ಸಿನಿಮಾ 50 ಲಕ್ಷ ರೂಪಾಯಿ ಬಾಚಿದೆ. ಮುಂದಿನ ದಿನಗಳಲ್ಲಿ ಗಳಿಕೆ ಕಡಿಮೆ ಆಗಲಿದೆ.

ಹನುಮಾನ್

ಹನುಮಾನ್ ಸಿನಿಮಾದಲ್ಲಿ ತೇಜ ಸಜ್ಜಾ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾದ ಮೊದಲ ದಿನದ ಗಳಿಕೆ 12.87 ಕೋಟಿ ರೂಪಾಯಿ ಆಗಿದೆ. ಈ ಚಿತ್ರಕ್ಕೆ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಕಲೆಕ್ಷನ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ

ಕ್ಯಾಪ್ಟನ್ ಮಿಲ್ಲರ್

ಧನುಷ್, ಶಿವರಾಜ್​ಕುಮಾರ್ ಮೊದಲಾದವರು ನಟಿಸಿರುವ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಬಗ್ಗೆ ನಿರೀಕ್ಷೆ ಇತ್ತು. ಆದರೆ, ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಈ ಚಿತ್ರ ಮೊದಲ ದಿನ 9.03 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಪಾತ್ರಕ್ಕೆ ಪ್ರಾಮುಖ್ಯತೆ ನೀಡಿಲ್ಲ. ಒಂದೊಮ್ಮೆ ಈ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಸಿಕ್ಕಿದ್ದರೆ ಸಿನಿಮಾ ಕರ್ನಾಟಕದಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Sat, 13 January 24

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು