AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಟೂರು ಖಾರಂ’, ‘ಹನುಮಾನ್’, ‘ಕ್ಯಾಪ್ಟನ್ ಮಿಲ್ಲರ್’ ಚಿತ್ರಗಳ ಬಾಕ್ಸ್ ಆಫೀಸ್ ಗಳಿಕೆ ವಿವರ ಇಲ್ಲಿದೆ..

‘ಗುಂಟೂರು ಖಾರಂ’, ‘ಹನುಮಾನ್’ ಸಿನಿಮಾಗಳು ಮುಖಾಮುಖಿ ಆಗಿವೆ. ತಮಿಳಿನಲ್ಲಿ ‘ಕ್ಯಾಪ್ಟನ್ ಮಿಲ್ಲರ್’ ತೆರೆಗೆ ಬಂದಿದೆ. ಈ ಸಿನಿಮಾಗಳು ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದವು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಗುಂಟೂರು ಖಾರಂ’, ‘ಹನುಮಾನ್’, ‘ಕ್ಯಾಪ್ಟನ್ ಮಿಲ್ಲರ್’ ಚಿತ್ರಗಳ ಬಾಕ್ಸ್ ಆಫೀಸ್ ಗಳಿಕೆ ವಿವರ ಇಲ್ಲಿದೆ..
‘ಹನುಮಾನ್’, ‘ಗುಂಟೂರು ಖಾರಂ’, ‘ಕ್ಯಾಪ್ಟನ್ ಮಿಲ್ಲರ್
Follow us
ರಾಜೇಶ್ ದುಗ್ಗುಮನೆ
|

Updated on:Jan 13, 2024 | 10:28 AM

ಸಂಕ್ರಾಂತಿ ಪ್ರಯುಕ್ತ ಡಿಸೆಂಬರ್ 12ರಂದು ಹಲವು ಸಿನಿಮಾಗಳು ರಿಲೀಸ್ ಆಗಿವೆ. ತೆಲುಗಿನಲ್ಲಿ ಮಹೇಶ್ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ ಹಾಗೂ ತೇಜ ಸಜ್ಜಾ ನಟನೆಯ ‘ಹನುಮಾನ್’ ಸಿನಿಮಾಗಳು ಮುಖಾಮುಖಿ ಆಗಿವೆ. ತಮಿಳಿನಲ್ಲಿ ‘ಕ್ಯಾಪ್ಟನ್ ಮಿಲ್ಲರ್’ ಹಾಗೂ ಹಿಂದಿಯಲ್ಲಿ ‘ಮೆರಿ ಕ್ರಿಸ್​ಮಸ್​’ ತೆರೆಗೆ ಬಂದಿವೆ. ಈ ಸಿನಿಮಾಗಳು ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದವು ಎನ್ನುವ ಬಗ್ಗೆ ಇಲ್ಲಿದೆ ವಿವರ. ಇಂದು (ಜನವರಿ 13) ಹಾಗೂ ನಾಳೆ (ಜನವರಿ 14) ಮತ್ತಷ್ಟು ಚಿತ್ರಗಳು ಬಿಡುಗಡೆ ಆಗಲಿವೆ.

‘ಗುಂಟೂರು ಖಾರಂ’

ಮಹೇಶ್ ಬಾಬು ನಟನೆಯ, ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ‘ಗುಂಟೂರು ಖಾರಂ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದಾಗ್ಯೂ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮೊದಲದಿನ ಉತ್ತಮ ಗಳಿಕೆ ಮಾಡಿದೆ. ಈ ಸಿನಿಮಾ ಮೊದಲ ದಿನ 50 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಆಂಧ್ರ, ತೆಲಂಗಾಣದಲ್ಲಿ 44.50 ಕೋಟಿ ರೂಪಾಯಿ, ಕರ್ನಾಟಕದಲ್ಲಿ 4.5 ಕೋಟಿ ರೂಪಾಯಿ, ತಮಿಳುನಾಡಿನಲ್ಲಿ 50 ಲಕ್ಷ ರೂಪಾಯಿ, ಉಳಿದ ಭಾಗಗಳಿಂದ ಸಿನಿಮಾ 50 ಲಕ್ಷ ರೂಪಾಯಿ ಬಾಚಿದೆ. ಮುಂದಿನ ದಿನಗಳಲ್ಲಿ ಗಳಿಕೆ ಕಡಿಮೆ ಆಗಲಿದೆ.

ಹನುಮಾನ್

ಹನುಮಾನ್ ಸಿನಿಮಾದಲ್ಲಿ ತೇಜ ಸಜ್ಜಾ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾದ ಮೊದಲ ದಿನದ ಗಳಿಕೆ 12.87 ಕೋಟಿ ರೂಪಾಯಿ ಆಗಿದೆ. ಈ ಚಿತ್ರಕ್ಕೆ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಕಲೆಕ್ಷನ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ

ಕ್ಯಾಪ್ಟನ್ ಮಿಲ್ಲರ್

ಧನುಷ್, ಶಿವರಾಜ್​ಕುಮಾರ್ ಮೊದಲಾದವರು ನಟಿಸಿರುವ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಬಗ್ಗೆ ನಿರೀಕ್ಷೆ ಇತ್ತು. ಆದರೆ, ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಈ ಚಿತ್ರ ಮೊದಲ ದಿನ 9.03 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಪಾತ್ರಕ್ಕೆ ಪ್ರಾಮುಖ್ಯತೆ ನೀಡಿಲ್ಲ. ಒಂದೊಮ್ಮೆ ಈ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಸಿಕ್ಕಿದ್ದರೆ ಸಿನಿಮಾ ಕರ್ನಾಟಕದಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Sat, 13 January 24

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ