AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಟೂರು ಖಾರಂ’, ‘ಹನುಮಾನ್’, ‘ಕ್ಯಾಪ್ಟನ್ ಮಿಲ್ಲರ್’ ಚಿತ್ರಗಳ ಬಾಕ್ಸ್ ಆಫೀಸ್ ಗಳಿಕೆ ವಿವರ ಇಲ್ಲಿದೆ..

‘ಗುಂಟೂರು ಖಾರಂ’, ‘ಹನುಮಾನ್’ ಸಿನಿಮಾಗಳು ಮುಖಾಮುಖಿ ಆಗಿವೆ. ತಮಿಳಿನಲ್ಲಿ ‘ಕ್ಯಾಪ್ಟನ್ ಮಿಲ್ಲರ್’ ತೆರೆಗೆ ಬಂದಿದೆ. ಈ ಸಿನಿಮಾಗಳು ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದವು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಗುಂಟೂರು ಖಾರಂ’, ‘ಹನುಮಾನ್’, ‘ಕ್ಯಾಪ್ಟನ್ ಮಿಲ್ಲರ್’ ಚಿತ್ರಗಳ ಬಾಕ್ಸ್ ಆಫೀಸ್ ಗಳಿಕೆ ವಿವರ ಇಲ್ಲಿದೆ..
‘ಹನುಮಾನ್’, ‘ಗುಂಟೂರು ಖಾರಂ’, ‘ಕ್ಯಾಪ್ಟನ್ ಮಿಲ್ಲರ್
ರಾಜೇಶ್ ದುಗ್ಗುಮನೆ
|

Updated on:Jan 13, 2024 | 10:28 AM

Share

ಸಂಕ್ರಾಂತಿ ಪ್ರಯುಕ್ತ ಡಿಸೆಂಬರ್ 12ರಂದು ಹಲವು ಸಿನಿಮಾಗಳು ರಿಲೀಸ್ ಆಗಿವೆ. ತೆಲುಗಿನಲ್ಲಿ ಮಹೇಶ್ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ ಹಾಗೂ ತೇಜ ಸಜ್ಜಾ ನಟನೆಯ ‘ಹನುಮಾನ್’ ಸಿನಿಮಾಗಳು ಮುಖಾಮುಖಿ ಆಗಿವೆ. ತಮಿಳಿನಲ್ಲಿ ‘ಕ್ಯಾಪ್ಟನ್ ಮಿಲ್ಲರ್’ ಹಾಗೂ ಹಿಂದಿಯಲ್ಲಿ ‘ಮೆರಿ ಕ್ರಿಸ್​ಮಸ್​’ ತೆರೆಗೆ ಬಂದಿವೆ. ಈ ಸಿನಿಮಾಗಳು ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದವು ಎನ್ನುವ ಬಗ್ಗೆ ಇಲ್ಲಿದೆ ವಿವರ. ಇಂದು (ಜನವರಿ 13) ಹಾಗೂ ನಾಳೆ (ಜನವರಿ 14) ಮತ್ತಷ್ಟು ಚಿತ್ರಗಳು ಬಿಡುಗಡೆ ಆಗಲಿವೆ.

‘ಗುಂಟೂರು ಖಾರಂ’

ಮಹೇಶ್ ಬಾಬು ನಟನೆಯ, ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ‘ಗುಂಟೂರು ಖಾರಂ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದಾಗ್ಯೂ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮೊದಲದಿನ ಉತ್ತಮ ಗಳಿಕೆ ಮಾಡಿದೆ. ಈ ಸಿನಿಮಾ ಮೊದಲ ದಿನ 50 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಆಂಧ್ರ, ತೆಲಂಗಾಣದಲ್ಲಿ 44.50 ಕೋಟಿ ರೂಪಾಯಿ, ಕರ್ನಾಟಕದಲ್ಲಿ 4.5 ಕೋಟಿ ರೂಪಾಯಿ, ತಮಿಳುನಾಡಿನಲ್ಲಿ 50 ಲಕ್ಷ ರೂಪಾಯಿ, ಉಳಿದ ಭಾಗಗಳಿಂದ ಸಿನಿಮಾ 50 ಲಕ್ಷ ರೂಪಾಯಿ ಬಾಚಿದೆ. ಮುಂದಿನ ದಿನಗಳಲ್ಲಿ ಗಳಿಕೆ ಕಡಿಮೆ ಆಗಲಿದೆ.

ಹನುಮಾನ್

ಹನುಮಾನ್ ಸಿನಿಮಾದಲ್ಲಿ ತೇಜ ಸಜ್ಜಾ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾದ ಮೊದಲ ದಿನದ ಗಳಿಕೆ 12.87 ಕೋಟಿ ರೂಪಾಯಿ ಆಗಿದೆ. ಈ ಚಿತ್ರಕ್ಕೆ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಕಲೆಕ್ಷನ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ

ಕ್ಯಾಪ್ಟನ್ ಮಿಲ್ಲರ್

ಧನುಷ್, ಶಿವರಾಜ್​ಕುಮಾರ್ ಮೊದಲಾದವರು ನಟಿಸಿರುವ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಬಗ್ಗೆ ನಿರೀಕ್ಷೆ ಇತ್ತು. ಆದರೆ, ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಈ ಚಿತ್ರ ಮೊದಲ ದಿನ 9.03 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಪಾತ್ರಕ್ಕೆ ಪ್ರಾಮುಖ್ಯತೆ ನೀಡಿಲ್ಲ. ಒಂದೊಮ್ಮೆ ಈ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಸಿಕ್ಕಿದ್ದರೆ ಸಿನಿಮಾ ಕರ್ನಾಟಕದಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Sat, 13 January 24

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ