AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ವಿಮಾನದಲ್ಲಿ ಎಂಟ್ರಿ ಕೊಟ್ಟ ‘ಗುಂಟೂರು ಖಾರಂ’ ತಂಡ; ಹೈಲೈಟ್ ಆದ ಶ್ರೀಲೀಲಾ

‘ಗುಂಟೂರು ಖಾರಂ’ ಚಿತ್ರಕ್ಕೆ ಈ ಮೊದಲು ಪೂಜಾ ಹೆಗ್ಡೆ ನಾಯಕಿ ಆಗಿದ್ದರು. ಆದರೆ, ಅವರು ಚಿತ್ರದಿಂದ ಹೊರ ನಡೆದರು. ಅತಿಥಿ ಪಾತ್ರದಲ್ಲಿದ್ದ ಶ್ರೀಲೀಲಾ ನಾಯಕಿ ಆದರು. ಈಗ ಸಿನಿಮಾದಲ್ಲಿ ಮೀನಾಕ್ಷಿ ಅವರದ್ದು ಕೇವಲ ಅತಿಥಿ ಪಾತ್ರ ಎನ್ನಲಾಗುತ್ತಿದೆ.

ಖಾಸಗಿ ವಿಮಾನದಲ್ಲಿ ಎಂಟ್ರಿ ಕೊಟ್ಟ ‘ಗುಂಟೂರು ಖಾರಂ’ ತಂಡ; ಹೈಲೈಟ್ ಆದ ಶ್ರೀಲೀಲಾ
ಗುಂಟೂರು ಖಾರಂ ಟೀಂ
ರಾಜೇಶ್ ದುಗ್ಗುಮನೆ
|

Updated on: Jan 10, 2024 | 7:03 AM

Share

‘ಗುಂಟೂರು ಖಾರಂ’ ಸಿನಿಮಾ (Guntur Kaaram Movie) ರಿಲೀಸ್​ಗೆ ಇನ್ನು ಬಾಕಿ ಇರೋದು ಎರಡು ದಿನ ಮಾತ್ರ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್ ಆಗಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಸಿನಿಮಾ ಕೆಲಸಗಳು ವಿಳಂಬ ಆಗಿದ್ದರಿಂದ ಸಿನಿಮಾ ಟ್ರೇಲರ್ ಹಾಗೂ ಇವೆಂಟ್ ಕೂಡ ವಿಳಂಬ ಆಯಿತು. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿತ್ತು. ಮಂಗಳವಾರ (ಜನವರಿ 9) ಸಿನಿಮಾದ ಪ್ರೀರಿಲೀಸ್ ಇವೆಂಟ್ ಗುಂಟೂರಿನಲ್ಲಿ ನಡೆದಿದೆ. ಇದಕ್ಕೆ ಇಡೀ ತಂಡ ಹೈದರಾಬಾದ್​ನಿಂದ ಖಾಸಗಿ ವಿಮಾನದಲ್ಲಿ ಆಗಮಿಸಿದೆ. ಇವೆಂಟ್​ನಲ್ಲಿ ಕನ್ನಡದ ನಟಿ ಶ್ರೀಲೀಲಾ ಹೈಲೈಟ್ ಆಗಿದ್ದಾರೆ.

ಪ್ರೈವೆಟ್​ ಜೆಟ್​ನಲ್ಲಿ ತಂಡ ಪೋಸ್ ಕೊಟ್ಟಿದೆ. ಮಹೇಶ್ ಬಾಬು ಅವರು ಹಿಂಭಾಗದಲ್ಲಿ ನಿಂತಿದ್ದಾರೆ. ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್, ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ನಿರ್ಮಾಪಕ ಎಸ್​. ರಾಧಾಕೃಷ್ಣ, ನಾಗ ವಂಶಿ, ಸಂಗೀತ ನಿರ್ದೇಶಕ ಎಸ್​ಎಸ್ ತಮನ್ ಹಾಗೂ ‘ಗುಂಟೂರು ಖಾರಂ’ ಚಿತ್ರದ ನಿಜಾಮ್ ಹಂಚಿಕೆದಾರ ದಿಲ್ ರಾಜು ಅವರು ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ಎಲ್ಲರ ಮುಖದಲ್ಲೂ ಮಂದಹಾಸ ಇದೆ.

‘ಗುಂಟೂರು ಖಾರಂ’ ಚಿತ್ರಕ್ಕೆ ಈ ಮೊದಲು ಪೂಜಾ ಹೆಗ್ಡೆ ನಾಯಕಿ ಆಗಿದ್ದರು. ಆದರೆ, ಅವರು ಚಿತ್ರದಿಂದ ಹೊರ ನಡೆದರು. ಅತಿಥಿ ಪಾತ್ರದಲ್ಲಿದ್ದ ಶ್ರೀಲೀಲಾ ನಾಯಕಿ ಆದರು. ಈಗ ಸಿನಿಮಾದಲ್ಲಿ ಮೀನಾಕ್ಷಿ ಅವರದ್ದು ಕೇವಲ ಅತಿಥಿ ಪಾತ್ರ ಎನ್ನಲಾಗುತ್ತಿದೆ. ಈ ಮೂಲಕ ಮುಖ್ಯಭೂಮಿಕೆಯಲ್ಲಿ ಮಿಂಚಲು ಶ್ರೀಲೀಲಾ ರೆಡಿ ಆಗಿದ್ದಾರೆ.

ಇದನ್ನೂ ಓದಿ: ಥಿಯೇಟರ್​ನಲ್ಲಿ ಓಡುತ್ತಿರುವಾಗಲೇ ಒಟಿಟಿಗೆ ಬಂತು ‘ಸರ್ಕಾರು ವಾರಿ ಪಾಟ’; ಮಹೇಶ್ ಬಾಬು ಫ್ಯಾನ್ಸ್ ಆಕ್ರೋಶ

‘ಸರ್ಕಾರು ವಾರಿ ಪಾಟ’ ಸಿನಿಮಾ ಬಳಿಕ ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ರಿಲೀಸ್ ಆಗುತ್ತಿದೆ. ಟ್ರೇಲರ್​ ಮಾಸ್ ಆಗಿ ಮೂಡಿ ಬಂದಿದೆ. ಮಹೇಶ್ ಬಾಬು ಅವರ ಗೆಟಪ್ ಜನರಿಗೆ ಇಷ್ಟ ಆಗಿದೆ. ಸಂಕ್ರಾಂತಿ ಸಂದರ್ಭದಲ್ಲಿ ಹಲವು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಅವುಗಳ ಜೊತೆ ಈ ಚಿತ್ರ ಸ್ಪರ್ಧೆ ಮಾಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು