AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಟ್​ಫ್ರೆಂಡ್ ಪತಿಯನ್ನೇ ಮದುವೆ ಆಗಿದ್ದ ಹನ್ಸಿಕಾ; ನಟಿಯ ಸ್ಪಷ್ಟನೆ ಏನಾಗಿತ್ತು?

ನಟಿ ಹನ್ಸಿಕಾ ಮೋಟ್ವಾನಿ ಉದ್ಯಮಿ ಸೊಹೈಲ್ ಕತುರಿಯಾ ಜೊತೆ ವಿಚ್ಛೇದನ ಪಡೆದಿದ್ದಾರೆ. 2022ರಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದ ಈ ಜೋಡಿ ಈಗ ಬೇರೆಯಾಗಿದೆ. ಸೊಹೈಲ್ ಮಾಜಿ ಪತ್ನಿ ರಿಂಕಿ ಹಾಗೂ ಹನ್ಸಿಕಾ ಸ್ನೇಹದ ವಿಚಾರದಲ್ಲಿ ಚರ್ಚೆ ಆಯಿತು. ಈ ಬಗ್ಗೆ ಹನ್ಸಿಕಾ ಹಾಗೂ ಸೊಹೈಲ್ ಇಬ್ಬರೂ ಸ್ಪಷ್ಟನೆ ನೀಡಿದ್ದಾರೆ.

ಬೆಸ್ಟ್​ಫ್ರೆಂಡ್ ಪತಿಯನ್ನೇ ಮದುವೆ ಆಗಿದ್ದ ಹನ್ಸಿಕಾ; ನಟಿಯ ಸ್ಪಷ್ಟನೆ ಏನಾಗಿತ್ತು?
ಹನ್ಸಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 12, 2026 | 8:12 AM

Share

ಪುನೀತ್ ರಾಜ್ಕುಮಾರ್ ನಟನೆಯ ‘ಬಿಂದಾಸ್’ ಚಿತ್ರದಲ್ಲಿ ನಟಿಸಿದ್ದ ಹನ್ಸಿಕಾ ಮೋಟ್ವಾನಿ (Hansika) ಈಗ ಸುದ್ದಿಯಲ್ಲಿದ್ದಾರೆ. ಅವರು ಉದ್ಯಮಿ ಸೊಹೈಲ್ ಕತುರಿಯಾ ಜತೆ ಡಿವೋರ್ಸ್ ಪಡೆದಿದ್ದಾರೆ. ಕೋರ್ಟ್ ಅವರಿಗೆ ಡಿವೋರ್ಸ್ ನೀಡಲು ಒಪ್ಪಿಗೆ ಕೊಟ್ಟಿದೆ 2022ರಲ್ಲಿ ಸಾಕಷ್ಟು ಅದ್ದೂರಿಯಾಗಿ ಈ ಮದುವೆ ಕಾರ್ಯ ನಡೆದಿತ್ತು.

ಸೋಹೈಲ್ ಈ ಮೊದಲು ಮದುವೆ ಆಗಿದ್ದರು. ಅವರ ಮಾಜಿ ಪತ್ನಿಯ ಹೆಸರು ರಿಂಕಿ. ರಿಂಕಿ ಮತ್ತು ಹನ್ಸಿಕಾ ಫ್ರೆಂಡ್ಸ್ ಆಗಿದ್ದರು. ಸೋಹೈಲ್ ಹಾಗೂ ರಿಂಕಿ ಮದುವೆಯಲ್ಲಿ ಹನ್ಸಿಕಾ ಕೂಡ ಭಾಗಿ ಆಗಿದ್ದರು. ಸೋಹೈಲ್ ಜತೆ ಹನ್ಸಿಕಾ ಮದುವೆ ಘೋಷಣೆ ಮಾಡಿಕೊಳ್ಳುತ್ತಿದ್ದಂತೆಯೇ ಒಂದಷ್ಟು ಮಂದಿ ಹನ್ಸಿಕಾ ಟೀಕೆ ಮಾಡಿದರು. ‘ಲವ್ ಶಾದಿ ಡ್ರಾಮಾ’ದಲ್ಲಿ ಹನ್ಸಿಕಾ ಈ ಬಗ್ಗೆ ಮಾತನಾಡಿದ್ದರು.

‘ಆ ಸಮಯದಲ್ಲಿ ಈ ವ್ಯಕ್ತಿಯ ಪರಿಚಯ ನನಗಿತ್ತು ಎಂದ ಮಾತ್ರಕ್ಕೆ ತಪ್ಪು ನನ್ನದೇ ಎಂದು ಹೇಳಲು ಸಾಧ್ಯವಿಲ್ಲ. ನನಗೂ ಇದಕ್ಕೂ ಸಂಬಂಧವಿಲ್ಲ. ನಾನು ಸೆಲೆಬ್ರಿಟಿ ಆಗಿರುವುದರಿಂದ ಜನರಿಗೆ ನನ್ನ ಕಡೆ ಬೆರಳು ಮಾಡಿ, ನನ್ನನ್ನು ವಿಲನ್ ಮಾಡೋದು ಸುಲಭ. ಪಬ್ಲಿಕ್ ಫಿಗರ್ ಆಗಿರುವುದರಿಂದ ನಾನು ತೆರುತ್ತಿರುವ ಬೆಲೆ ಇದು’ ಎಂದು ಹನ್ಸಿಕಾ ಹೇಳಿದ್ದಾರೆ.

‘ನಾನು ಈ ಮೊದಲು ಮದುವೆ ಆಗಿದ್ದೆ. ಅದು ಮುರಿದು ಬಿತ್ತು. ಈ ವಿಚಾರ ಹೊರಜಗತ್ತಿಗೆ ಗೊತ್ತಾಯಿತು. ಆದರೆ, ತಪ್ಪಾದ ರೀತಿಯಲ್ಲಿ ಈ ಮಾಹಿತಿ ಹೊರಬಿತ್ತು. ಹನ್ಸಿಕಾ ಅವರಿಂದ ನನ್ನ ಹಾಗೂ ರಿಂಕಿ ಸಂಬಂಧ ಹಾಳಾಯಿತು ಎಂದು ಹೇಳಲಾಯಿತು. ಇದು ಸುಳ್ಳು. ನಾವಿಬ್ಬರೂ ಸ್ನೇಹಿತರು. ಹನ್ಸಿಕಾ ನನ್ನ ಮದುವೆಗೆ ಹಾಜರಾದ ಫೋಟೋ ನೋಡಿದ್ದರಿಂದ ಈ ಊಹಾಪೋಹ ಪ್ರಾರಂಭವಾಯಿತು’ ಎಂದು ಸೋಹೈಲ್ ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ

ಹನ್ಸಿಕಾ ಹಾಗೂ ಸೋಹೈಲ್ ಅವರು ಈ ಮೊದಲು ಅದ್ದೂರಿಯಾಗಿ ವಿವಾಹ ಆದರು. ಇವರ ಮದುವೆಯ ವಿಡಿಯೋ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಮೊದಲು ನಯನತಾರಾ ಹಾಗೂ ವಿಘ್ನೇಶ್ ಶಿವನ್ ಮದುವೆ ವಿಡಿಯೋ ಕೂಡ ರಿಲೀಸ್ ಆಗಲಿದೆ ಎಂದು ನೆಟ್ಫ್ಲಿಕ್ಸ್ ಘೋಷಣೆ ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು