AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಬಳಿಕ ‘ಹನುಮಾನ್​’ ಸಿನಿಮಾ ನೋಡಲಿರುವ ಸಂಸದ ತೇಜಸ್ವಿ ಸೂರ್ಯ

ಶಿವರಾಜ್​ಕುಮಾರ್​ ಅವರು ‘ಹನುಮಾನ್​’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಕೂಡ ಈ ಸಿನಿಮಾವನ್ನು ನೋಡುವುದಾಗಿ ಹೇಳಿದ್ದಾರೆ ಎಂದು ಚಿತ್ರತಂಡದವರು ತಿಳಿಸಿದ್ದಾರೆ. ಈ ಚಿತ್ರದಲ್ಲಿ ತೇಜ ಸಜ್ಜಾ, ಅಮೃತಾ ಐಯ್ಯರ್​ ನಟಿಸಿದ್ದಾರೆ. ಪ್ರಶಾಂತ್​ ವರ್ಮಾ ನಿರ್ದೇಶನ ಮಾಡಿದ್ದಾರೆ.

ಶಿವರಾಜ್​ಕುಮಾರ್​ ಬಳಿಕ ‘ಹನುಮಾನ್​’ ಸಿನಿಮಾ ನೋಡಲಿರುವ ಸಂಸದ ತೇಜಸ್ವಿ ಸೂರ್ಯ
ತೇಜ ಸಜ್ಜಾ, ತೇಜಸ್ವಿ ಸೂರ್ಯ, ಗೀತಾ. ಶಿವರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on: Jan 17, 2024 | 12:40 PM

ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರನ್ನು ಟಾಲಿವುಡ್​ ಹೀರೋ ತೇಜ ಸಜ್ಜಾ ಭೇಟಿ ಆಗಿದ್ದಾರೆ. ತೆಲುಗಿನ ‘ಹನುಮಾನ್​’ ಸಿನಿಮಾದಲ್ಲಿ ತೇಜ ಸಜ್ಜಾ ಅವರು ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದ ಗೆಲುವಿನ ಬೆನ್ನಲ್ಲೇ ತೇಜಸ್ವಿ ಸೂರ್ಯ ಅವರನ್ನು ತೇಜ ಸಜ್ಜಾ ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಈ ಭೇಟಿ ನಡೆದಿದೆ. ಹನುಮಾನ್​’ ಸಿನಿಮಾ (Hanuman Movie) ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈಗ ತೇಜಸ್ವಿ ಸೂರ್ಯ ಕೂಡ ಈ ಸಿನಿಮಾವನ್ನು ನೋಡುವುದಾಗಿ ಹೇಳಿದ್ದಾರೆ. ಶೀಘ್ರದಲ್ಲೇ ಅವರು ‘ಹನುಮಾನ್​’ ಚಿತ್ರ ವೀಕ್ಷಿಸಲಿದ್ದಾರೆ. ಅವರ ಜೊತೆ ತೇಜ ಸಜ್ಜಾ (Teja Sajja) ಇರುವ ಫೋಟೋ ವೈರಲ್​ ಆಗಿದೆ.

ಈ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 12ರಂದು ‘ಹನುಮಾನ್​’ ಸಿನಿಮಾ ಬಿಡುಗಡೆ ಆಯಿತು. ಒಂದು ದಿನ ಮುಂಚೆ ಪೇಯ್ಡ್​ ಪ್ರೀಮಿಯರ್​ ಏರ್ಪಡಿಸಲಾಗಿತ್ತು. ಅದಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಮೂಲಗಳ ಪ್ರಕಾರ ಪೇಯ್ಡ್​ ಪ್ರೀಮಿಯರ್​ ಶೋಗಳಿಂದಲೇ ಈ ಸಿನಿಮಾಗೆ 4 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿತ್ತು. ಈಗ ಈ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ.

ಇದನ್ನೂ ಓದಿ: ‘ಹನುಮಾನ್’ ಸಿನಿಮಾ ನೋಡಿ ಶಿವಣ್ಣ ಹೇಳಿದ್ದು ಹೀಗೆ

ಸಂಕ್ರಾಂತಿ ಪ್ರಯುಕ್ತ ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’, ಧನುಷ್​ ಅಭಿನಯದ ‘ಕ್ಯಾಪ್ಟನ್​ ಮಿಲ್ಲರ್​’, ಅಕ್ಕಿನೇನಿ ನಾಗಾರ್ಜುನ ನಟನೆಯ ‘ನಾ ಸಾಮಿ ರಂಗ’ ಮುಂತಾದ ಸಿನಿಮಾಗಳು ಬಿಡುಗಡೆ ಆದವು. ಅವುಗಳ ನಡುವೆ ‘ಹನುಮಾನ್​’ ಸಿನಿಮಾ ಕೂಡ ಪೈಪೋಟಿ ನೀಡಿತು. ಘಟಾನುಘಟಿ ಸ್ಟಾರ್​ ನಟರ ಸಿನಿಮಾಗಳ ಜೊತೆ ಪೈಪೋಟಿ ನೀಡುತ್ತಿರುವ ‘ಹನುಮಾನ್​’ ಉತ್ತಮವಾಗಿ ಕಲೆಕ್ಷನ್​ ಮಾಡುತ್ತಿದೆ. ಈ ಚಿತ್ರಕ್ಕೆ ಪ್ರಶಾಂತ್​ ವರ್ಮಾ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: 2024ರ ಮೊದಲ ಹಿಟ್ ‘ಹನುಮಾನ್’; ಗಳಿಕೆಯಲ್ಲಿ ‘ಕೆಜಿಎಫ್’, ‘ಕಾಂತಾರ’ ಹಿಂದಿಕ್ಕಿದ ಸಿನಿಮಾ..

ನಟ ಶಿವರಾಜ್​ಕುಮಾರ್​ ಇತ್ತೀಚೆಗೆ ‘ಹನುಮಾನ್​’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ಪತ್ನಿ ಗೀತಾ ಜೊತೆ ಶಿವರಾಜ್​ಕುಮಾರ್​ ಅವರು ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಈ ವೇಳೆ ನಟ ತೇಜ ಸಜ್ಜಾ ಹಾಗೂ ನಟಿ ಅಮೃತಾ ಐಯ್ಯರ್​ ಕೂಡ ಜೊತೆಗಿದ್ದರು. ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಶಿವರಾಜ್​ಕುಮಾರ್​ ಅವರು ಭಾರಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾದಲ್ಲಿ ಸೂಪರ್​ ಹೀರೋ ಕಾನ್ಸೆಪ್ಟ್​ ಇದೆ. ವರಲಕ್ಷ್ಮೀ ಶರತ್ ಕುಮಾರ್, ರಾಜ್​ ದೀಪಕ್ ಶೆಟ್ಟಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್