AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಾನ್​’ ಸಿನಿಮಾದ ಹೀರೋ ತೇಜ ಸಜ್ಜಾ ಸಂಭಾವನೆಯಲ್ಲಿ ಏರಿಕೆ

ಸೂಪರ್ ಹೀರೋ ಕಥಾಹಂದರದ ‘ಹನುಮಾನ್​’ ಸಿನಿಮಾ ಭರ್ಜರಿ ಹಿಟ್​ ಆಗಿರುವುದರಿಂದ ನಟ ತೇಜ ಸಜ್ಜಾ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ಆದ್ದರಿಂದ ಅವರು ನಟಿಸಲಿರುವ ಹೊಸ ಸಿನಿಮಾಗಳು ಸಹ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ಸಿದ್ಧಗೊಳ್ಳಲಿವೆ. ಅದಕ್ಕೆ ತಕ್ಕಂತೆಯೇ ಅವರು ಸಂಭಾವನೆ ಕೇಳುವುದರಲ್ಲಿ ತಪ್ಪೇನೂ ಇಲ್ಲ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

‘ಹನುಮಾನ್​’ ಸಿನಿಮಾದ ಹೀರೋ ತೇಜ ಸಜ್ಜಾ ಸಂಭಾವನೆಯಲ್ಲಿ ಏರಿಕೆ
ತೇಜ ಸಜ್ಜಾ
ಮದನ್​ ಕುಮಾರ್​
|

Updated on: Feb 09, 2024 | 4:54 PM

Share

ಈಗ ಪ್ಯಾನ್​ ಇಂಡಿಯಾ ಸಿನಿಮಾಗಳ ಟ್ರೆಂಡ್​ ಚಾಲ್ತಿಯಲ್ಲಿದೆ. ಈಗಾಗಲೇ ಸ್ಟಾರ್ ಪಟ್ಟ ಪಡೆದಿರುವ ಕಲಾವಿದರು ಇಂಥ ಪ್ರಯತ್ನಕ್ಕೆ ಕೈ ಹಾಕುತ್ತಾರೆ. ಆದರೆ ಹೊಸ ನಟರು ಸ್ವಲ್ಪ ಹಿಂದೇಟು ಹಾಕುತ್ತಾರೆ. ಯಾಕೆಂದರೆ, ಹೊಸಬರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಗೆಲುವು ಸಿಗುವುದು ಅಷ್ಟು ಸುಲಭವಲ್ಲ. ಟಾಲಿವುಡ್​ನ ಯುವ ನಟ ತೇಜ ಸಜ್ಜಾ (Teja Sajja) ಅವರು ಅಂಥ ಅಸಾಧಾರಣ ಗೆಲುವು ದಾಖಲಿಸಿದ್ದಾರೆ. ಅವರು ನಟಿಸಿದ ‘ಹನುಮಾನ್​’ ಸಿನಿಮಾ (Hanuman Movie) ಬ್ಲಾಕ್​ ಬಸ್ಟರ್​ ಹಿಟ್​ ಆಗಿದೆ. ಪ್ರಶಾಂತ್​ ವರ್ಮಾ ನಿರ್ದೇಶನ ಮಾಡಿರುವ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ಆ ಬಳಿಕ ತೇಜ ಸಜ್ಜಾ ಅವರ ಸಂಭಾವನೆಯಲ್ಲೂ (Teja Sajja Remuneration) ಏರಿಕೆ ಆಗಿದೆ ಎಂಬ ಸುದ್ದಿ ಕೇಳಿಬಂದಿದೆ.

ತೆಲುಗಿನ ‘ಹನುಮಾನ್​’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಯಿತು. ಈ ವರ್ಷ ಸಂಕ್ರಾಂತಿ ಸಂದರ್ಭದಲ್ಲಿ ತೆರೆಕಂಡ ಈ ಸಿನಿಮಾ ಕನ್ನಡ, ತಮಿಳು, ಹಿಂದಿ, ಮಲಯಾಳಂ ಭಾಷೆಗೂ ಡಬ್​ ಆಗಿದೆ. ಎಲ್ಲ ರಾಜ್ಯಗಳಲ್ಲೂ ಈ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ವಿದೇಶದಲ್ಲೂ ‘ಹನುಮಾನ್​’ ಸಿನಿಮಾ ಅಬ್ಬರಿಸಿದೆ. ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರದ ಒಟ್ಟು ಗಳಿಕೆ 300 ಕೋಟಿ ರೂಪಾಯಿ ಮುಟ್ಟಿದೆ.

ಇಷ್ಟು ದೊಡ್ಡ ಗೆಲುವು ಸಿಕ್ಕರೆ ಹೀರೋಗಳು ಸಂಭಾವನೆ ಹೆಚ್ಚಿಸಿಕೊಳ್ಳುವುದು ಸಹಜ. ‘ಹನುಮಾನ್’ ಸಿನಿಮಾಗೆ ತೇಜ ಸಜ್ಜಾ ಅವರು ಒಂದು ಕೋಟಿ ರೂಪಾಯಿಗಿಂತಲೂ ಕಡಿಮೆ ಸಂಭಾವನೆ ಪಡೆದಿದ್ದರು. ಆದರೆ ಈಗ ಈ ಸಿನಿಮಾ ಮುನ್ನೂರು ಕೋಟಿ ರೂಪಾಯಿ ಕ್ಲಬ್​ ಸೇರಿರುವುದರಿಂದ ಸಹಜವಾಗಿಯೇ ತೇಜ ಸಜ್ಜಾ ಅವರಿಗೆ ಇರುವ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ಜೊತೆ ಸಿನಿಮಾ ಮಾಡಲು ಅನೇಕ ನಿರ್ಮಾಪಕರು ಮುಂದೆಬರುತ್ತಿದ್ದಾರೆ.

ಇದನ್ನೂ ಓದಿ: ‘ಹನುಮಾನ್​’ ಚಿತ್ರಕ್ಕಾಗಿ 75 ಸಿನಿಮಾಗಳ ಅವಕಾಶ ಕೈಚೆಲ್ಲಿದ್ದ ನಟ ತೇಜ ಸಜ್ಜಾ

ವರದಿಗಳ ಪ್ರಕಾರ, ತೇಜ ಸಜ್ಜಾ ಅವರು ಪ್ರತಿ ಸಿನಿಮಾಗೆ 5ರಿಂದ 10 ಕೋಟಿ ರೂಪಾಯಿ ಸಂಭಾವನೆ ಕೇಳಲು ನಿರ್ಧರಿಸಿದ್ದಾರೆ. ಆದರೆ ಈ ಬಗ್ಗೆ ಯಾರಿಂದಲೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸದ್ಯಕ್ಕಂತೂ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ಹಾಗಾಗಿ ಅವರು ಮಾಡಲಿರುವ ಹೊಸ ಸಿನಿಮಾಗಳು ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ಸಿದ್ಧಗೊಳ್ಳಲಿವೆ. ಹೀಗಿರುವಾಗ ಅವರು ಇಷ್ಟು ಸಂಭಾವನೆ ಕೇಳುವುದರಲ್ಲಿ ತಪ್ಪೇನೂ ಇಲ್ಲ ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: 25 ದಿನಗಳಲ್ಲಿ 300 ಕೋಟಿ ರೂಪಾಯಿ ಗಳಿಸಿದ ‘ಹನುಮಾನ್​’ ಸಿನಿಮಾ

ಸೂಪರ್​ ಹೀರೋ ಕಾನ್ಸೆಪ್ಟ್​ ಇರುವ ‘ಹನುಮಾನ್​’ ಗೆದ್ದಿದ್ದರಿಂದ ಆ ಚಿತ್ರಕ್ಕೆ ‘ಜೈ ಹನುಮಾನ್​’ ಶೀರ್ಷಿಕೆಯಲ್ಲಿ ಸೀಕ್ವೆಲ್​ ಸಿದ್ಧವಾಗುತ್ತಿದೆ. ಇದರಲ್ಲೂ ತೇಜ ಸಜ್ಜಾ ಅವರೇ ಪ್ರಮುಖ ಪಾತ್ರ ಮಾಡಲಿದ್ದಾರೆ. ಹನುಮಂತನ ಆಶೀರ್ವಾದದಿಂದ ಸೂಪರ್​ ಪವರ್​ ಪಡೆದುಕೊಳ್ಳುವ ಸಾಮಾನ್ಯ ಹುಡುಗನ ಕಥೆಯನ್ನು ಈ ಸಿನಿಮಾ ಹೊಂದಿದೆ. ಈ ಬಾರಿ ಸೀಕ್ವೆಲ್​ನಲ್ಲಿ ಪಾತ್ರವರ್ಗ ದೊಡ್ಡದಾಗಲಿದೆ. ಪಾತ್ರವರ್ಗಕ್ಕೆ ಸ್ಟಾರ್​ ಕಲಾವಿದರು ಎಂಟ್ರಿ ನೀಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?