AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

250 ಕೋಟಿ ರೂಪಾಯಿ ಕಲೆಕ್ಷನ್​; ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಾಧನೆ

ಜಾಗತಿಕ ಮಾರುಕಟ್ಟೆಯಲ್ಲಿ ‘ಹನುಮಾನ್​’ ಸಿನಿಮಾಗೆ 250 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂಬ ಮಾಹಿತಿಯನ್ನು ಸ್ವತಃ ಚಿತ್ರತಂಡದವರು ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್​ ಶೇರ್​ ಮಾಡಿಕೊಳ್ಳುವ ಮೂಲಕ ನಟ ತೇಜ ಸಜ್ಜಾ, ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ‘ಹನುಮಾನ್​’ ಸಿನಿಮಾ ಕನ್ನಡಕ್ಕೂ ಡಬ್​ ಆಗಿ ತೆರೆಕಂಡಿದೆ.

250 ಕೋಟಿ ರೂಪಾಯಿ ಕಲೆಕ್ಷನ್​; ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಾಧನೆ
ಹನುಮಾನ್​ ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on: Jan 27, 2024 | 6:11 PM

ಯುವ ನಟ ತೇಜ ಸಜ್ಜಾ (Teja Sajja) ಅಭಿನಯದ ‘ಹನುಮಾನ್​’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಕಳೆದ ವರ್ಷ ಈ ಸಿನಿಮಾದ ಟೀಸರ್​ ಬಿಡುಗಡೆ ಆದಾಗಲೇ ಜನರು ವಾವ್​ ಎಂದಿದ್ದರು. ಈ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾ ತೆರೆಕಂಡಿತು. ಪೇಯ್ಡ್​ ಪ್ರೀಮಿಯರ್​ನಲ್ಲೇ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಭಾರತ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲೂ ಹನುಮಾನ್​’ ಚಿತ್ರ (Hanuman Movie) ಬಿಡುಗಡೆ ಆಯಿತು. ಜನವರಿ 12ರಂದು ರಿಲೀಸ್​ ಆದ ಈ ಸಿನಿಮಾ 14 ದಿನಕ್ಕೆ ವಿಶ್ವ ಬಾಕ್ಸ್​ ಆಫೀಸ್​ನಲ್ಲಿ 250 ಕೋಟಿ ರೂಪಾಯಿ ಕಲೆಕ್ಷನ್​ (Hanuman Collection) ಮಾಡಿದೆ. ಆ ಮೂಲಕ ದೊಡ್ಡ ಸಾಧನೆ ಮಾಡಿದೆ.

ಸೂಪರ್​ ಹೀರೋ ಕಾನ್ಸೆಪ್ಟ್​ ‘ಹನುಮಾನ್​’ ಸಿನಿಮಾದಲ್ಲಿದೆ. ಹನುಮಂತನ ದಯೆಯಿಂದ ಸೂಪರ್​ ಪವರ್​ ಪಡೆಯುವ ಸಾಮಾನ್ಯ ಹಳ್ಳಿ ಹುಡುಗನ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಅಂಜನಾದ್ರಿ ಎಂಬ ಕಾಲ್ಪನಿಕ ಊರಿನಲ್ಲಿ ನಡೆಯುವ ಘಟನೆಗಳನ್ನು ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಕಟ್ಟಿಕೊಟ್ಟ ರೀತಿಗೆ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ. ಹಾಗಾಗಿ ಈ ಸಿನಿಮಾ ಸೂಪರ್​ ಹಿಟ್​ ಆಗಿದೆ.

ಇದನ್ನೂ ಓದಿ: ರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ‘ಶ್ರೀ ರಾಮ್, ಜೈ ಹನುಮಾನ್’ ಸಿನಿಮಾ ಅನೌನ್ಸ್; ಗಮನ ಸೆಳೆದ ಪೋಸ್ಟರ್

ಸಂಕ್ರಾಂತಿ ಹಬ್ಬದಲ್ಲಿ ದೊಡ್ಡ ದೊಡ್ಡ ಹೀರೋಗಳ ಸಿನಿಮಾಗಳು ಬಿಡುಗಡೆ ಆದವು. ‘ಗುಂಟೂರು ಖಾರಂ’, ‘ನಾ ಸಾಮಿ ರಂಗ’, ‘ಕ್ಯಾಪ್ಟನ್​ ಮಿಲ್ಲರ್​’ ಮುಂತಾದ ಚಿತ್ರಗಳು ತೆರೆಕಂಡಿದ್ದವು. ಅವುಗಳ ಜೊತೆ ‘ಹನುಮಾನ್​’ ಸಿನಿಮಾ ಪೈಪೋಟಿಗೆ ಇಳಿಯಿತು. ಸ್ಟಾರ್​ ನಟರ ಸಿನಿಮಾಗಳಿಗಿಂತಲೂ ತೇಜ ಸಜ್ಜಾ ನಟನೆಯ ‘ಹನುಮಾನ್​’ ಸಿನಿಮಾಗೆ ಪ್ರೇಕ್ಷಕರಿಂದ ಹೆಚ್ಚು ಬೆಂಬಲ ಸಿಕ್ಕಿತು. ಅದರ ಪರಿಣಾಮವಾಗಿ ಚಿತ್ರಕ್ಕೆ ಭರ್ಜರಿ ಕಲೆಕ್ಷನ್​ ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ‘ಹನುಮಾನ್​’ ಸಿನಿಮಾಗೆ 250 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂಬ ಮಾಹಿತಿಯನ್ನು ಸ್ವತಃ ಚಿತ್ರತಂಡದವರು ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್​ ಶೇರ್​ ಮಾಡಿಕೊಳ್ಳುವ ಮೂಲಕ ನಟ ತೇಜ ಸಜ್ಜಾ, ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅಮೃತಾ ಅಯ್ಯರ್​ ಅವರು ನಾಯಕಿಯಾಗಿ ನಟಿಸಿದ್ದಾರೆ. ವಿನಯ್​ ರೈ, ವರಲಕ್ಷ್ಮೀ ಶರತ್​ಕುಮಾರ್, ರಾಜ್​ ದೀಪಕ್​ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾದ ಈ ಸಿನಿಮಾ ಕನ್ನಡಕ್ಕೂ ಡಬ್​ ಆಗಿ ತೆರೆಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ