AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಮೊದಲ ಹಿಟ್ ‘ಹನುಮಾನ್’; ಗಳಿಕೆಯಲ್ಲಿ ‘ಕೆಜಿಎಫ್’, ‘ಕಾಂತಾರ’ ಹಿಂದಿಕ್ಕಿದ ಸಿನಿಮಾ..

ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು ಮೊದಲಾದ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಿದೆ. ಹಿಂದಿಯಲ್ಲೂ ಸಿನಿಮಾ ಉತ್ತಮವಾಗಿ ಗಳಿಕೆ ಮಾಡಿದೆ. ಹಿಂದಿ ವರ್ಷನ್​ನಿಂದ ಚಿತ್ರಕ್ಕೆ 12 ಕೋಟಿ ರೂಪಾಯಿ ಸಿಕ್ಕಿದೆ.

2024ರ ಮೊದಲ ಹಿಟ್ ‘ಹನುಮಾನ್’; ಗಳಿಕೆಯಲ್ಲಿ ‘ಕೆಜಿಎಫ್’, ‘ಕಾಂತಾರ’ ಹಿಂದಿಕ್ಕಿದ ಸಿನಿಮಾ..
ಕಾಂತಾರ-ಹನುಮಾನ್
ರಾಜೇಶ್ ದುಗ್ಗುಮನೆ
|

Updated on:Jan 15, 2024 | 2:30 PM

Share

2024ರ ಆರಂಭದಲ್ಲೇ ಹಲವು ಸಿನಿಮಾಗಳು ರಿಲೀಸ್ ಆಗಿವೆ. ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’, ತೆಜ ಸಜ್ಜಾ ನಟನೆಯ ‘ಹನುಮಾನ್’ (Hanuman Movie), ಅಕ್ಕಿನೇನಿ ನಾಗಾರ್ಜುನ ನಟನೆಯ ‘ನಾ ಸಾಮಿ ರಂಗ’ ಮೊದಲಾದ ಚಿತ್ರಗಳು ಬಿಡುಗಡೆ ಆಗಿವೆ. ಈ ಪೈಕಿ ‘ಹನುಮಾನ್’ ಸಿನಿಮಾ ಗೆದ್ದಿದೆ ಎಂದು ಘೋಷಣೆ ಮಾಡಲಾಗಿದೆ. 2024ರ ಮೊದಲ ಹಿಟ್ ಎನ್ನುವ ಖ್ಯಾತಿ ‘ಹನುಮಾನ್’ ಚಿತ್ರಕ್ಕೆ ಸಿಕ್ಕಿದೆ. ಮೊದಲ ವಾರದ ಗಳಿಕೆಯಲ್ಲಿ ಈ ಚಿತ್ರ ‘ಕಾಂತಾರ’ ಹಾಗೂ ‘ಕೆಜಿಎಫ್ ಚಾಪ್ಟರ್ 1’ ಚಿತ್ರದ (ಹಿಂದಿ ವರ್ಷನ್) ಗಳಿಕೆಯನ್ನು ಹಿಂದಿಕ್ಕಿದೆ.

‘ಹನುಮಾನ್’ ಸಿನಿಮಾಗೆ ಗುರುವಾರ (ಜನವರಿ 11) ಪೇಯ್ಡ್​ ಪ್ರೀಮಿಯರ್ ಇಡಲಾಗಿತ್ತು. ಈ ವೇಳೆ ಸಿನಿಮಾ ನಾಲ್ಕು ಕೋಟಿ ರೂಪಾಯಿ ಗಳಿಕೆ ಮಾಡಿತು. ಎರಡನೇ ದಿನ (ಜನವರಿ 12) 8 ಕೋಟಿ ರೂಪಾಯಿ, ಶನಿವಾರ (ಜನವರಿ 13) 12.45 ಕೋಟಿ ರೂಪಾಯಿ ಹಾಗೂ ಭಾನುವಾರ 16 ಕೋಟಿ ರೂಪಾಯಿ ಗಳಿಕೆ ಆಗಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 40.65 ಕೋಟಿ ರೂಪಾಯಿ ಆಗಿದೆ.

ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು ಮೊದಲಾದ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಿದೆ. ಹಿಂದಿಯಲ್ಲೂ ಸಿನಿಮಾ ಉತ್ತಮವಾಗಿ ಗಳಿಕೆ ಮಾಡಿದೆ. ಹಿಂದಿ ವರ್ಷನ್​ನಿಂದ ಚಿತ್ರಕ್ಕೆ 12 ಕೋಟಿ ರೂಪಾಯಿ ಸಿಕ್ಕಿದೆ. ಮೊದಲ ವೀಕೆಂಡ್​ ಗಳಿಕೆಯಲ್ಲಿ ಈ ಚಿತ್ರ ‘ಕಾಂತಾರ’, ‘ಕೆಜಿಎಫ್ 2’ ಗೆದ್ದಿದೆ. ಈ ಚಿತ್ರವನ್ನು ಕಟ್ಟಿಕೊಟ್ಟ ರೀತಿ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಹನುಮಾನ್​ನ ಸ್ಫೂರ್ತಿಯಾಗಿ ಇಟ್ಟುಕೊಂಡು ಈ ಚಿತ್ರದ ಕಥೆ ಸಿದ್ಧವಾಗಿದೆ.

ಈ ಬಗ್ಗೆ ಬಾಲಿವುಡ್​ ಬಾಕ್ಸ್ ಆಫೀಸ್ ತಜ್ಞ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ. ‘2024ರ ಮೊದಲ ಹಿಟ್ ಸಿನಿಮಾ’ ಎಂದು ಅವರು ಘೋಷಣೆ ಮಾಡಿದ್ದಾರೆ. ‘ಹನುಮಾನ್’ ಎದುರು ರಿಲೀಸ್ ಆದ ‘ಗುಂಟೂರು ಖಾರಂ’ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ.

ಇದನ್ನೂ ಓದಿ: ‘ಹನುಮಾನ್’ ಸಿನಿಮಾಕ್ಕೆ ಭಾರಿ ನಷ್ಟ, ನಿರ್ಮಾಪಕ ದಿಲ್ ರಾಜು ಮೇಲೆ ಗುಮಾನಿ

ಸಿನಿಮಾ ಕಲೆಕ್ಷನ್ ಉತ್ತಮವಾಗಿ ಆಗುತ್ತಿದೆ. ಪ್ರತಿ ಟಿಕೆಟ್​ ಮೇಲೆ ಐದು ರೂಪಾಯಿ ಹಣವನ್ನು ರಾಮ ಮಂದಿರಕ್ಕೆ ನೀಡುವುದಾಗಿ ತಂಡ ಘೋಷಣೆ ಮಾಡಿದೆ. ಮೊದಲ ದಿನ 14 ಲಕ್ಷ ರೂಪಾಯಿ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ತಂಡ ದಾನ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:06 pm, Mon, 15 January 24

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್