AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಮೊದಲ ಹಿಟ್ ‘ಹನುಮಾನ್’; ಗಳಿಕೆಯಲ್ಲಿ ‘ಕೆಜಿಎಫ್’, ‘ಕಾಂತಾರ’ ಹಿಂದಿಕ್ಕಿದ ಸಿನಿಮಾ..

ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು ಮೊದಲಾದ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಿದೆ. ಹಿಂದಿಯಲ್ಲೂ ಸಿನಿಮಾ ಉತ್ತಮವಾಗಿ ಗಳಿಕೆ ಮಾಡಿದೆ. ಹಿಂದಿ ವರ್ಷನ್​ನಿಂದ ಚಿತ್ರಕ್ಕೆ 12 ಕೋಟಿ ರೂಪಾಯಿ ಸಿಕ್ಕಿದೆ.

2024ರ ಮೊದಲ ಹಿಟ್ ‘ಹನುಮಾನ್’; ಗಳಿಕೆಯಲ್ಲಿ ‘ಕೆಜಿಎಫ್’, ‘ಕಾಂತಾರ’ ಹಿಂದಿಕ್ಕಿದ ಸಿನಿಮಾ..
ಕಾಂತಾರ-ಹನುಮಾನ್
ರಾಜೇಶ್ ದುಗ್ಗುಮನೆ
|

Updated on:Jan 15, 2024 | 2:30 PM

Share

2024ರ ಆರಂಭದಲ್ಲೇ ಹಲವು ಸಿನಿಮಾಗಳು ರಿಲೀಸ್ ಆಗಿವೆ. ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’, ತೆಜ ಸಜ್ಜಾ ನಟನೆಯ ‘ಹನುಮಾನ್’ (Hanuman Movie), ಅಕ್ಕಿನೇನಿ ನಾಗಾರ್ಜುನ ನಟನೆಯ ‘ನಾ ಸಾಮಿ ರಂಗ’ ಮೊದಲಾದ ಚಿತ್ರಗಳು ಬಿಡುಗಡೆ ಆಗಿವೆ. ಈ ಪೈಕಿ ‘ಹನುಮಾನ್’ ಸಿನಿಮಾ ಗೆದ್ದಿದೆ ಎಂದು ಘೋಷಣೆ ಮಾಡಲಾಗಿದೆ. 2024ರ ಮೊದಲ ಹಿಟ್ ಎನ್ನುವ ಖ್ಯಾತಿ ‘ಹನುಮಾನ್’ ಚಿತ್ರಕ್ಕೆ ಸಿಕ್ಕಿದೆ. ಮೊದಲ ವಾರದ ಗಳಿಕೆಯಲ್ಲಿ ಈ ಚಿತ್ರ ‘ಕಾಂತಾರ’ ಹಾಗೂ ‘ಕೆಜಿಎಫ್ ಚಾಪ್ಟರ್ 1’ ಚಿತ್ರದ (ಹಿಂದಿ ವರ್ಷನ್) ಗಳಿಕೆಯನ್ನು ಹಿಂದಿಕ್ಕಿದೆ.

‘ಹನುಮಾನ್’ ಸಿನಿಮಾಗೆ ಗುರುವಾರ (ಜನವರಿ 11) ಪೇಯ್ಡ್​ ಪ್ರೀಮಿಯರ್ ಇಡಲಾಗಿತ್ತು. ಈ ವೇಳೆ ಸಿನಿಮಾ ನಾಲ್ಕು ಕೋಟಿ ರೂಪಾಯಿ ಗಳಿಕೆ ಮಾಡಿತು. ಎರಡನೇ ದಿನ (ಜನವರಿ 12) 8 ಕೋಟಿ ರೂಪಾಯಿ, ಶನಿವಾರ (ಜನವರಿ 13) 12.45 ಕೋಟಿ ರೂಪಾಯಿ ಹಾಗೂ ಭಾನುವಾರ 16 ಕೋಟಿ ರೂಪಾಯಿ ಗಳಿಕೆ ಆಗಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 40.65 ಕೋಟಿ ರೂಪಾಯಿ ಆಗಿದೆ.

ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು ಮೊದಲಾದ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಿದೆ. ಹಿಂದಿಯಲ್ಲೂ ಸಿನಿಮಾ ಉತ್ತಮವಾಗಿ ಗಳಿಕೆ ಮಾಡಿದೆ. ಹಿಂದಿ ವರ್ಷನ್​ನಿಂದ ಚಿತ್ರಕ್ಕೆ 12 ಕೋಟಿ ರೂಪಾಯಿ ಸಿಕ್ಕಿದೆ. ಮೊದಲ ವೀಕೆಂಡ್​ ಗಳಿಕೆಯಲ್ಲಿ ಈ ಚಿತ್ರ ‘ಕಾಂತಾರ’, ‘ಕೆಜಿಎಫ್ 2’ ಗೆದ್ದಿದೆ. ಈ ಚಿತ್ರವನ್ನು ಕಟ್ಟಿಕೊಟ್ಟ ರೀತಿ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಹನುಮಾನ್​ನ ಸ್ಫೂರ್ತಿಯಾಗಿ ಇಟ್ಟುಕೊಂಡು ಈ ಚಿತ್ರದ ಕಥೆ ಸಿದ್ಧವಾಗಿದೆ.

ಈ ಬಗ್ಗೆ ಬಾಲಿವುಡ್​ ಬಾಕ್ಸ್ ಆಫೀಸ್ ತಜ್ಞ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ. ‘2024ರ ಮೊದಲ ಹಿಟ್ ಸಿನಿಮಾ’ ಎಂದು ಅವರು ಘೋಷಣೆ ಮಾಡಿದ್ದಾರೆ. ‘ಹನುಮಾನ್’ ಎದುರು ರಿಲೀಸ್ ಆದ ‘ಗುಂಟೂರು ಖಾರಂ’ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ.

ಇದನ್ನೂ ಓದಿ: ‘ಹನುಮಾನ್’ ಸಿನಿಮಾಕ್ಕೆ ಭಾರಿ ನಷ್ಟ, ನಿರ್ಮಾಪಕ ದಿಲ್ ರಾಜು ಮೇಲೆ ಗುಮಾನಿ

ಸಿನಿಮಾ ಕಲೆಕ್ಷನ್ ಉತ್ತಮವಾಗಿ ಆಗುತ್ತಿದೆ. ಪ್ರತಿ ಟಿಕೆಟ್​ ಮೇಲೆ ಐದು ರೂಪಾಯಿ ಹಣವನ್ನು ರಾಮ ಮಂದಿರಕ್ಕೆ ನೀಡುವುದಾಗಿ ತಂಡ ಘೋಷಣೆ ಮಾಡಿದೆ. ಮೊದಲ ದಿನ 14 ಲಕ್ಷ ರೂಪಾಯಿ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ತಂಡ ದಾನ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:06 pm, Mon, 15 January 24

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!