Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ದಿನಗಳಲ್ಲಿ 300 ಕೋಟಿ ರೂಪಾಯಿ ಗಳಿಸಿದ ‘ಹನುಮಾನ್​’ ಸಿನಿಮಾ

ತೆಲುಗಿನ ‘ಹನುಮಾನ್​’ ಸಿನಿಮಾ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಿಗೆ ಡಬ್​ ಆಗಿ ತೆರೆಕಂಡಿತು. 25 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿದ್ದು, ಈ ಸಿನಿಮಾದ ಗಳಿಕೆ ಎಲ್ಲರ ಕಣ್ಣು ಕುಕ್ಕುವಂತಾಗಿದೆ. ವಿಶ್ವಾದ್ಯಂತ ಬರೋಬ್ಬರಿ 300 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿರುವ ಈ ಸಿನಿಮಾ ಇನ್ನೂ ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ.

25 ದಿನಗಳಲ್ಲಿ 300 ಕೋಟಿ ರೂಪಾಯಿ ಗಳಿಸಿದ ‘ಹನುಮಾನ್​’ ಸಿನಿಮಾ
ಹನುಮಾನ್​ ಸಿನಿಮಾ
Follow us
ಮದನ್​ ಕುಮಾರ್​
|

Updated on: Feb 06, 2024 | 1:07 PM

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆದ ಹನುಮಾನ್​’ ಸಿನಿಮಾ (HanuMan Movie) ಈ ಪರಿ ಕಲೆಕ್ಷನ್​ ಮಾಡುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ನೋಡನೋಡುತ್ತಿದ್ದಂತೆಯೇ ಈ ಸಿನಿಮಾದ ಕಲೆಕ್ಷನ್​ 300 ಕೋಟಿ ರೂಪಾಯಿ ಆಗಿದೆ. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಮುನ್ನೂರು ಕೋಟಿ ರೂಪಾಯಿ ಕ್ಲಬ್​ ಸೇರಿರುವುದಕ್ಕೆ ಚಿತ್ರತಂಡ ಸಂಭ್ರಮಿಸಿದೆ. ಈ ಸಿನಿಮಾಗೆ ಪ್ರಶಾಂತ್​ ವರ್ಮಾ ನಿರ್ದೇಶನ ಮಾಡಿದ್ದಾರೆ. ಕಲೆಕ್ಷನ್​ (HanuMan Movie Collection) ಬಗ್ಗೆ ಮಾಹಿತಿ ನೀಡುವ ಪೋಸ್ಟರ್​ ಅನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತೇಜ ಸಜ್ಜಾ (Teja Sajja) ಅವರು ‘ಹನುಮಾನ್​’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದ ಗೆಲುವಿನ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಕನ್ನಡದ ಕಲಾವಿದರು ಸಹ ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

ಜನವರಿ 12ರಂದು ‘ಹನುಮಾನ್​’ ಸಿನಿಮಾ ರಿಲೀಸ್​ ಆಯಿತು. ಈ ಸಿನಿಮಾದಲ್ಲಿ ದೇಸಿ ಸೂಪರ್​ ಹೀರೋ ಕಾನ್ಸೆಪ್ಟ್​ ಇದೆ. ಆಂಜನೇಯನ ಕಾರಣದಿಂದ ಸೂಪರ್​ ಪವರ್​ ಪಡೆಯುವ ಸಾಮಾನ್ಯ ಹಳ್ಳಿ ಹುಡುಗನ ಕಹಾನಿ ಈ ಚಿತ್ರದಲ್ಲಿ ಇದೆ. ಇದರಲ್ಲಿನ ಗ್ರಾಫಿಕ್ಸ್​ ನೋಡಿ ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಕನ್ನಡದಲ್ಲೂ ‘ಹನುಮಾನ್​’ ಬಿಡುಗಡೆಯಾಗಿ ಯಶಸ್ವಿ ಆಗಿದೆ.

ಇದನ್ನೂ ಓದಿ: ‘ಹನುಮಾನ್​’ ಚಿತ್ರಕ್ಕಾಗಿ 75 ಸಿನಿಮಾಗಳ ಅವಕಾಶ ಕೈಚೆಲ್ಲಿದ್ದ ನಟ ತೇಜ ಸಜ್ಜಾ

ಕನ್ನಡದ ಹುಡುಗಿ ಅಮೃತಾ ಅಯ್ಯರ್​, ರಾಜ್​ ದೀಪಕ್​ ಶೆಟ್ಟಿ ಅವರು ‘ಹನುಮಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ವಿನಯ್​ ರೈ ಅವರು ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಟಿ ವರಲಕ್ಷ್ಮೀ ಶರತ್​ಕುಮಾರ್​ ಅವರಿಗೂ ಒಂದು ಮುಖ್ಯವಾದ ಪಾತ್ರವಿದೆ. ಸೂಪರ್ ಹೀರೋ ಆಗಿ ತೇಜ ಸಜ್ಜಾ ಅವರು ನಟಿಸಿದ್ದಾರೆ. ಈ ಸಿನಿಮಾಗಾಗಿ ಅವರು 3 ವರ್ಷ ಮೀಸಲಿಟ್ಟಿದ್ದರು. ಆ ಗ್ಯಾಪ್​ನಲ್ಲಿ 70ಕ್ಕೂ ಅಧಿಕ ಪ್ರಾಜೆಕ್ಟ್​ಗಳನ್ನು ರಿಜೆಕ್ಟ್​ ಮಾಡಿರುವುದಾಗಿ ಅವರು ಇತ್ತೀಚೆಗೆ ಹೇಳಿಕೊಂಡಿದ್ದರು.

ಪ್ರಶಾಂತ್​ ವರ್ಮಾ ಸೋಶಿಯಲ್​ ಮೀಡಿಯಾ ಪೋಸ್ಟ್​:

ಮಹೇಶ್​ ಬಾಬು, ಧನುಷ್​, ಅಕ್ಕಿನೇನಿ ನಾಗಾರ್ಜುನ ಅವರಂತಹ ಸ್ಟಾರ್​ ನಟರ ಸಿನಿಮಾಗಳ ಎದುರಿನಲ್ಲಿ ‘ಹನುಮಾನ್​’ ಚಿತ್ರ ಬಿಡುಗಡೆ ಆಗಿತ್ತು. ಹಾಗಾಗಿ ಈ ಸಿನಿಮಾ ಹೆಚ್ಚು ಕಲೆಕ್ಷನ್​ ಮಾಡುವುದಿಲ್ಲ ಎಂದು ಕೆಲವರು ಅಂದುಕೊಂಡಿದ್ದರು. ಆದರೆ ನಂತರ ಬಾಕ್ಸ್​ ಆಫೀಸ್​ನಲ್ಲಿ ಆಗಿದ್ದು ನಿಜಕ್ಕೂ ಮ್ಯಾಜಿಕ್​. ಸಂಕ್ರಾಂತಿ ಸಂದರ್ಭದಲ್ಲಿ ಬಿಡುಗಡೆಯಾದ ಬೇರೆ ಎಲ್ಲ ನಟರ ಸಿನಿಮಾಗಳಿಗಿಂತಲೂ ‘ಹನುಮಾನ್​’ ಹೆಚ್ಚು ಕಲೆಕ್ಷನ್​ ಮಾಡಿತು. ಈಗ ಸಿನಿಮಾದ ಗಳಿಕೆ 300 ಕೋಟಿ ರೂಪಾಯಿ ತಲುಪಿದ್ದು ಚಿತ್ರತಂಡಕ್ಕೆ ಖುಷಿ ನೀಡಿದೆ. ಸದ್ಯ ಈ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗಿತ್ತಿದ್ದು, ಅದಕ್ಕೆ ‘ಜೈ ಹನುಮಾನ್​’ ಎಂದು ಶೀರ್ಷಿಕೆ ಇಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ