ಹನುಮಂತನ ಮುಗ್ಧತೆಗೆ ಎಲ್ಲರೂ ಫಿದಾ; ಒಂದೇ ಮಾತಿನಿಂದ ಎಲ್ಲರ ಮನ ಗೆದ್ದ ಬಿಗ್ ಬಾಸ್ ಸ್ಪರ್ಧಿ

ಹನುಮಂತ ಅವರ ಈ ಮುಗ್ಧತೆ ಹಾಗೂ ಒಳ್ಳೆಯತನ ಎಲ್ಲರಿಗೂ ಇಷ್ಟ ಆಗಿದೆ. ಐಸ್​ಕ್ರೀಮ್ ಕೊಟ್ಟ ಅವರಿಗೆ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ‘ಮನೆ ಬಿಟ್ಟು ಹೋಗುವವರೆಗೆ ಕೀ ನನ್ನ ಬಳಿಯೇ ಇರಲಿ’ ಎಂದು ಹನುಮಂತ್ ಹೇಳಿಕೊಂಡಿದ್ದಾರೆ.

ಹನುಮಂತನ ಮುಗ್ಧತೆಗೆ ಎಲ್ಲರೂ ಫಿದಾ; ಒಂದೇ ಮಾತಿನಿಂದ ಎಲ್ಲರ ಮನ ಗೆದ್ದ ಬಿಗ್ ಬಾಸ್ ಸ್ಪರ್ಧಿ
ಹನುಮಂತ್
Follow us
|

Updated on: Oct 23, 2024 | 11:52 AM

‘ಬಿಗ್ ಬಾಸ್ ಕನ್ನಡ ಸೀಸನ್​ 11’ಕ್ಕೆ ಗಾಯಕ ಹನುಮಂತ ಅವರು ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಇದನ್ನು ಕೆಲವರು ಟೀಕೆ ಮಾಡಿದ್ದರು. ಅವರು ಬಿಗ್ ಬಾಸ್​ಗೆ ಸರಿಯಾದ ವ್ಯಕ್ತಿ ಅಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ, ಅವರು ದೊಡ್ಮನೆ ಸೇರಿದ ಕೆಲವೇ ದಿನಗಳಲ್ಲಿ ಎಲ್ಲರಿಗೂ ಇಷ್ಟ ಆಗುತ್ತಿದ್ದಾರೆ. ಹಾಡಿನ ಮೂಲಕ ಅವರು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಒಳ್ಳೆಯತನ, ಮುಗ್ಧತೆಗೆ ಎಲ್ಲರೂ ಫಿದಾ ಆಗಿದ್ದಾರೆ.

ಹನುಮಂತಗೆ ದೊಡ್ಮನೆಯ ಕನ್ಫೆಷನ್​ರೂಂಗೆ ಬರೋಕೆ ಹೇಳಲಾಯಿತು. ಒಳಗೆ ಹೋದ ಅವರಿಗೆ ಬಿಗ್ ಬಾಸ್​ ಐಸ್​ಕ್ರೀಂ ಬಾಕ್ಸ್​ನ ಕೀ ಕೊಟ್ಟರು. ಅಲ್ಲದೆ ಒಂದು ಷರತ್ತನ್ನು ಕೂಡ ಹಾಕಿದರು. ‘ಮನೆಯವರ ಬಳಿ ಎಂಟರ್​ಟೇನ್​ಮೆಂಟ್ ಮಾಡುವಂತೆ ನೀವು ಕೇಳಬಹುದು. ಅದರಿಂದ ನಿಮಗೆ ಖುಷಿ ಆದರೆ ಐಸ್​​ಕ್ರೀಂ ತೆಗೆದುಕೊಡಬಹುದು’ ಎಂದು ಬಿಗ್ ಬಾಸ್ ಹೇಳಿದರು.

ಅದರಂತೆ ಹನುಮಂತ ಅವರು ಎಲ್ಲರ ಬಳಿಯೂ ಮನರಂಜನೆ ನೀಡುವಂತೆ ಕೋರಿದರು. ಕೆಲವರು ಹನುಮಂತ ಅವರ ಆಸೆಯನ್ನು ಈಡೇರಿಸಿದರೆ, ಇನ್ನೂ ಕೆಲವರು ಅವರ ಮಾತಿಗೆ ಬೆಲೆ ಕೊಡಲೇ ಇಲ್ಲ. ಇದೇ ಕಾರಣ ಕೊಟ್ಟರು ಮನರಂಜನೆ ನೀಡದವರಿಗೆ ಐಸ್​ಕ್ರೀಂ ಕೊಡಲ್ಲ ಎಂದು ಹೇಳುವ ಅವಕಾಶ ಹನುಮಂತ್​ಗೆ ಇತ್ತು. ಆದರೆ, ಹನುಮಂತ ಹಾಗೆ ಮಾಡಲೇ ಇಲ್ಲ.

‘ನಮಗೆ ನೀವು ಐಸ್​ಕ್ರೀಂ ವಿಚಾರ ಹೇಳಿದ್ರಿ. ಒಂದೈದು ಜನ ಮಾಡಿಲ್ಲ. ಮಾಡಿದವರು ನಮ್ಮವರೇ, ಮಾಡದೇ ಇದ್ದವರೂ ನಮ್ಮವರೇ. ಬಿಗ್ ಬಾಸ್ ಮನೆಗೆ ಬಂದ ಖುಷಿಗೆ ಎಲ್ಲರಿಗೂ ಐಸ್​ಕ್ರೀಂ ಕೊಡ್ತೀನಿ. ನೀವು ಬೈದರೂ ಬೈಸಿಕೊಳ್ಳುತ್ತೇನೆ’ ಎಂದರು ಹನುಮಂತ.

ಇದನ್ನೂ ಓದಿ: ಜಗದೀಶ್ ಇದ್ದಾಗ ಜಗಳ, ಹನುಮಂತ ಬಂದ್ಮೇಲೆ ನಗು: ಬದಲಾಯ್ತು ಬಿಗ್ ಬಾಸ್ ಮನೆ

ಹನುಮಂತ ಅವರ ಈ ಮುಗ್ಧತೆ ಹಾಗೂ ಒಳ್ಳೆಯತನ ಎಲ್ಲರಿಗೂ ಇಷ್ಟ ಆಗಿದೆ. ಐಸ್​ಕ್ರೀಮ್ ಕೊಟ್ಟ ಅವರಿಗೆ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ‘ಮನೆ ಬಿಟ್ಟು ಹೋಗುವವರೆಗೆ ಕೀ ನನ್ನ ಬಳಿಯೇ ಇರಲಿ’ ಎಂದು ಹನುಮಂತ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್