AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತ-ತ್ರಿವಿಕ್ರಂ ವೋಟ್​ಗಳ ಮಧ್ಯೆ ಅಜಗಜಾಂತರ; 3 ಕೋಟಿ ಅಂತರದಲ್ಲಿ ವಿನ್ ಆದ ದೋಸ್ತ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ವಿನ್ನರ್ ಎಂದು ಘೋಷಣೆ ಆಗಿದೆ. ಅವರು ದೊಡ್ಮನೆಯಲ್ಲಿ ಕೆಲ ವಾರಗಳ ಬಳಿಕ ಎಂಟ್ರಿ ಕೊಟ್ಟರೂ ಮೆಚ್ಚುಗೆ ಪಡೆದರು. ಈಗ ದೊಡ್ಮನೆಯಲ್ಲಿ ಅವರು ಕಪ್ ಎತ್ತುವ ಮೂಲಕ ಗಮನ ಸೆಳೆದಿದ್ದಾರೆ. ಅವರ ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಅವರು ದೊಡ್ಡ ಅಂತರದಿಂದ ಗೆದ್ದಿದ್ದಾರೆ ಅನ್ನೋ ವಿಚಾರ ರಿವೀಲ್ ಆಗಿದೆ.

ಹನುಮಂತ-ತ್ರಿವಿಕ್ರಂ ವೋಟ್​ಗಳ ಮಧ್ಯೆ ಅಜಗಜಾಂತರ; 3 ಕೋಟಿ ಅಂತರದಲ್ಲಿ ವಿನ್ ಆದ ದೋಸ್ತ
ಹನುಮಂತ-ತ್ರಿವಿಕ್ರಂ
ರಾಜೇಶ್ ದುಗ್ಗುಮನೆ
|

Updated on: Jan 27, 2025 | 7:33 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿಜೇತನಾಗಿ ಹನುಮಂತ ಅವರು ಹೊರ ಹೊಮ್ಮಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹನುಮಂತ ಅವರು ವಿನ್ನರ್ ಎಂದು ಸಂಭ್ರಮಿಸಲಾಗುತ್ತಿದೆ. ಹಾಗಾದರೆ, ಹನುಮಂತ ಅವರಿಗೆ ಸಿಕ್ಕ ಒಟ್ಟೂ ವೋಟ್ ಎಷ್ಟು? ರನ್ನರ್​ ಅಪ್ ಆದ ತ್ರಿವಿಕ್ರಂ ಅವರಿಗೆ ಸಿಕ್ಕ ಮತಗಳು ಎಷ್ಟು? ಈ ವಿಚಾರವನ್ನು ಸುದೀಪ್ ರಿವೀಲ್ ಮಾಡಿದ್ದಾರೆ. ಸುಮಾರು 3 ಕೋಟಿ ಮತಗಳ ಅಂತರದಿಂದ ಹನುಮಂತ ಅವರು ವಿಜಯ ಸಾಧಿಸಿದ್ದಾರೆ.

ಕಳೆದ ವರ್ಷಕ್ಕಿಂತ ಈ ವರ್ಷ ವೋಟ್ ಮಾಡುವವರ ಸಂಖ್ಯೆ ಹೆಚ್ಚಿದೆ. ಕಳೆದ ವರ್ಷ ವಿನ್ನರ್​ಗೆ ಬಿದ್ದಷ್ಟು ವೋಟ್ ರನ್ನರ್​ ಅಪ್​ಗೆ ಸಿಕ್ಕಿದೆ ಎಂದು ಸುದೀಪ್ ರಿವೀಲ್ ಮಾಡಿದ್ದಾರೆ. ಜಿಯೋ ಸಿನಿಮಾದಲ್ಲಿ ಪ್ರತಿ ವ್ಯಕ್ತಿಗೆ ಒಂದು ದಿನಕ್ಕೆ 99 ವೋಟ್ ಮಾಡಲು ಅವಕಾಶ ಇತ್ತು. ಇದನ್ನು ಜನರು ಹೆಚ್ಚು ಆಸಕ್ತಿಯಿಂದ ಮಾಡಿದ್ದಾರೆ.

ವಿನ್ನರ್ ಹನುಮಂತ ಅವರಿಗೆ ಬರೋಬ್ಬರಿ 5,23,89,313 ಮತಗಳು ಬಿದ್ದಿವೆ. ಸೆಕೆಂಡರ್ ರನ್ನರ್​ ಅಪ್ ರಜತ್​​ಗೆ 2,53,01,251 ವೋಟ್​ಗಳು ಬಿದ್ದಿವೆ. ಅಂದರೆ ಇಬ್ಬರ ಮಧ್ಯೆ ಸುಮಾರು 2.70 ಕೋಟಿ ಮತಗಳ ಅಂತರ ಇದೆ. ಇಷ್ಟು ದೊಡ್ಡ ಮತಗಳ ಅಂತರದ ಮಧ್ಯೆ ಗೆದ್ದಿರುವುದಕ್ಕೆ ಹನುಮಂತ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಾ ಇದ್ದಾರೆ.

‘ಬಿಗ್ ಬಾಸ್’ ವೀಕ್ಷಕರ ಬಳಗ ಹೆಚ್ಚಿದೆ. ಅದಕ್ಕೆ ಬಿಗ್ ಬಾಸ್ ಟಿಆರ್​ಪಿಯೇ ಸಾಕ್ಷಿ. ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ. ಇದು 13 ಟಿವಿಆರ್​​ನ ಗಡಿ ತಲುಪಿತ್ತು ಅನ್ನೋದು ವಿಶೇಷ. ಫಿನಾಲೆ ದಿನ ಎಷ್ಟು ಟಿಆರ್​ಪಿ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: 50 ಲಕ್ಷದಲ್ಲಿ ಹನುಮಂತಗೆ ಸಿಗೋ ಹಣ ಎಷ್ಟು? ಕಟ್ ಆಗೋ ತೆರಿಗೆ ಎಷ್ಟು?

ಹನುಮಂತ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ತ್ರಿವಿಕ್ರಂ ಅವರು ವಿನ್ ಆಗಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದು ಇದೆ. ಅವರ ಅಭಿಮಾನಿಗಳಿಗೆ ಈಗ ಸಾಕಷ್ಟು ಬೇಸರ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!