AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Allu Arjun: ಅಲ್ಲು ಅರ್ಜುನ್​ ಜನ್ಮ ದಿನಕ್ಕೆ ಅಭಿಮಾನಿಗಳಿಂದ ಸಿಕ್ತು ಮರೆಯಲಾರದ ಗಿಫ್ಟ್​

ಅಲ್ಲು ಅರ್ಜುನ್​ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಫ್ಯಾನ್ಸ್​ ಮನೆ ಎದುರು ನೆರೆದಿದ್ದರು. ಗೇಟ್​ ಬಳಿ ಬಂದು ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಹಾಯ್​ ಎಂದಿದ್ದಾರೆ. ಸದ್ಯ, ಈ ಫೋಟೋ ಕೂಟ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Happy Birthday Allu Arjun: ಅಲ್ಲು ಅರ್ಜುನ್​ ಜನ್ಮ ದಿನಕ್ಕೆ ಅಭಿಮಾನಿಗಳಿಂದ ಸಿಕ್ತು ಮರೆಯಲಾರದ ಗಿಫ್ಟ್​
ಅಭಿಮಾನಿಗಳನ್ನು ಭೇಟಿಯಾದ ಅಲ್ಲು ಅರ್ಜುನ್​
ರಾಜೇಶ್ ದುಗ್ಗುಮನೆ
|

Updated on: Apr 08, 2021 | 4:42 PM

Share

ಅಲ್ಲು ಅರ್ಜುನ್​ಗೆ ಇಂದು ಜನ್ಮದಿನದ ಸಂಭ್ರಮ. ಸ್ಟಾರ್​ ನಟನ ಜನ್ಮದಿನಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ವಿಶ್​ ಮಾಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ, ಕಾಜಲ್​ ಅಗರ್​ವಾಲ್​ ಸೇರಿ ಅನೇಕರು ಶುಭಾಶಯ ತಿಳಿಸಿದ್ದಾರೆ. ಅಲ್ಲು ಅರ್ಜುನ್​ ಜನ್ಮದಿನಕ್ಕೆ ಅಭಿಮಾನಿಗಳಂತೂ ಶುಭಾಶಯಗಳ ಸುರಿಮಳೆಯನ್ನೇ ಸುರಿಸಿದ್ದಾರೆ. #HBDAlluArjun ಎನ್ನುವ ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಸಾಲು ಸಾಲು ಟ್ವೀಟ್​ ಮಾಡುತ್ತಿದ್ದಾರೆ. ಪರಿಣಾಮ ಈ ಹ್ಯಾಶ್​ಟ್ಯಾಗ್​ ಟ್ರೆಂಡಿಗ್​ನಲ್ಲಿ ಬಂದಿದೆ.

ಅಲ್ಲು ಅರ್ಜುನ್​ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಫ್ಯಾನ್ಸ್​ ಮನೆ ಎದುರು ನೆರೆದಿದ್ದರು. ಗೇಟ್​ ಬಳಿ ಬಂದು ಅಲ್ಲು ಅರ್ಜುನ್​ ಅಭಿಮಾನಿಗಳನ್ನು ಭೇಟಿಮಾಡಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ನು, ಅಭಿಮಾನಿಗಳಿಂದ ಅಲ್ಲು ಅರ್ಜುನ್​ಗೆ ವಿಶೇಷ ಗಿಫ್ಟ್​ ಒಂದು ದೊರೆತಿದೆ. ಅಷ್ಟಕ್ಕೂ ಏನದು ಆ ಗಿಫ್ಟ್​ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅನೇಕ ಸ್ಟಾರ್​ಗಳು ಗಿಡ ನೆಟ್ಟು ಪರಿಸರ ಉಳಿಸಿ ಎಂದು ಕರೆ ನೀಡಿದ್ದಾರೆ. ಇದಕ್ಕೆ ಅಲ್ಲು ಅರ್ಜುನ್​ ಕೂಡ ಹೊರತಾಗಿಲ್ಲ. ಹೀಗಾಗಿ, ಅವರಿಗೆ ಅಭಿಮಾನಿಗಳು ಗಿಡವನ್ನು ಗಿಫ್ಟ್​ ಆಗಿ ನೀಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸ್ಟಾರ್​ ನಟರ ಚಿತ್ರ ಎಂದರೆ ಅವರ ಸಿನಿಮಾ ತಂಡದಿಂದ ವಿಶೇಷ ಗಿಫ್ಟ್​ ಸಿಗೋದು ನಡೆದುಕೊಂಡುಬಂದ ಸಂಪ್ರದಾಯ. ಇದನ್ನು ಪುಷ್ಪ ಸಿನಿಮಾ ತಂಡ ಕೂಡ ಮುಂದುವರಿಸಿಕೊಂಡು ಹೋಗಿದೆ. ಪುಷ್ಪ ಸಿನಿಮಾ ಒಂದು ದಿನ ಮೊದಲೇ ಪುಷ್ಪ ರಾಜ್​ ಪಾತ್ರ ಪರಿಚಯ ಮಾಡಿದೆ.

ವಿಶೇಷ ವಿಡಿಯೋ ಒಂದನ್ನು ರಿಲೀಸ್​ ಮಾಡಲಾಗಿದ್ದು, ಈ ಸಿನಿಮಾದಲ್ಲಿ ರಕ್ತ ಚಂದನ ಕಳ್ಳ ಸಾಗಣೆಯನ್ನು ಹೇಗೆ ಮಾಡುತ್ತಾರೆ ಎನ್ನುವ ಇಂಚಿಂಚು ಮಾಹಿತಿಯನ್ನು ನಿರ್ದೇಶಕರು ಕಟ್ಟಿ ಕೊಟ್ಟಿದ್ದಾರೆ. ಕುರಿ ಮಂದೆಯನ್ನು ಎದುರು ಬಿಟ್ಟು ಹಿಂದಿನಿಂದ ರಕ್ತಚಂದನ ಮರದ ತುಂಡನ್ನು ಕಳ್ಳ ಸಾಗಣೆಕಾರರು ಹೊತ್ತು ಬರುತ್ತಿರುವ ದೃಶ್ಯಗಳು ಭಿನ್ನ ಲೋಕಕ್ಕೆ ಕರೆದೊಯ್ಯುತ್ತವೆ. ಕಳ್ಳ ಸಾಗಣೆ ವೇಳೆ ಲಾರಿ ಚೇಸಿಂಗ್​, ಅಲ್ಲು ಅರ್ಜುನ್​ ಅವರ ಪೊಲೀಸರ ಜತೆಗಿನ ಫೈಟಿಂಗ್​, ಜಿಗಿಯುತ್ತಲೇ ಮರದ ತುಂಡನ್ನು ಲಾರಿ ಮೇಲೆ ಹಾಕೋದು, ಪೊಲೀಸರು ಬಂದಾಗ ಸಿಳ್ಳೆ ಹೊಡೆಯೋದು,  ಕಣ್ಣುಕಟ್ಟಿರುವಾಗಲೂ ಫೈಟ್​ ಮಾಡೋದು ರೋಮಾಂಚನ ಮೂಡಿಸಿದೆ.

ಇದನ್ನೂ ಓದಿ: Pushpa Teaser: ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪಾತ್ರ ನೋಡಿದ್ರೆ ನೀವೊಮ್ಮೆ ಬೆಚ್ಚಿ ಬೀಳ್ತೀರಾ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ