AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Allu Arjun: ಅಲ್ಲು ಅರ್ಜುನ್​ ಜನ್ಮ ದಿನಕ್ಕೆ ಅಭಿಮಾನಿಗಳಿಂದ ಸಿಕ್ತು ಮರೆಯಲಾರದ ಗಿಫ್ಟ್​

ಅಲ್ಲು ಅರ್ಜುನ್​ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಫ್ಯಾನ್ಸ್​ ಮನೆ ಎದುರು ನೆರೆದಿದ್ದರು. ಗೇಟ್​ ಬಳಿ ಬಂದು ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಹಾಯ್​ ಎಂದಿದ್ದಾರೆ. ಸದ್ಯ, ಈ ಫೋಟೋ ಕೂಟ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Happy Birthday Allu Arjun: ಅಲ್ಲು ಅರ್ಜುನ್​ ಜನ್ಮ ದಿನಕ್ಕೆ ಅಭಿಮಾನಿಗಳಿಂದ ಸಿಕ್ತು ಮರೆಯಲಾರದ ಗಿಫ್ಟ್​
ಅಭಿಮಾನಿಗಳನ್ನು ಭೇಟಿಯಾದ ಅಲ್ಲು ಅರ್ಜುನ್​
ರಾಜೇಶ್ ದುಗ್ಗುಮನೆ
|

Updated on: Apr 08, 2021 | 4:42 PM

Share

ಅಲ್ಲು ಅರ್ಜುನ್​ಗೆ ಇಂದು ಜನ್ಮದಿನದ ಸಂಭ್ರಮ. ಸ್ಟಾರ್​ ನಟನ ಜನ್ಮದಿನಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ವಿಶ್​ ಮಾಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ, ಕಾಜಲ್​ ಅಗರ್​ವಾಲ್​ ಸೇರಿ ಅನೇಕರು ಶುಭಾಶಯ ತಿಳಿಸಿದ್ದಾರೆ. ಅಲ್ಲು ಅರ್ಜುನ್​ ಜನ್ಮದಿನಕ್ಕೆ ಅಭಿಮಾನಿಗಳಂತೂ ಶುಭಾಶಯಗಳ ಸುರಿಮಳೆಯನ್ನೇ ಸುರಿಸಿದ್ದಾರೆ. #HBDAlluArjun ಎನ್ನುವ ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಸಾಲು ಸಾಲು ಟ್ವೀಟ್​ ಮಾಡುತ್ತಿದ್ದಾರೆ. ಪರಿಣಾಮ ಈ ಹ್ಯಾಶ್​ಟ್ಯಾಗ್​ ಟ್ರೆಂಡಿಗ್​ನಲ್ಲಿ ಬಂದಿದೆ.

ಅಲ್ಲು ಅರ್ಜುನ್​ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಫ್ಯಾನ್ಸ್​ ಮನೆ ಎದುರು ನೆರೆದಿದ್ದರು. ಗೇಟ್​ ಬಳಿ ಬಂದು ಅಲ್ಲು ಅರ್ಜುನ್​ ಅಭಿಮಾನಿಗಳನ್ನು ಭೇಟಿಮಾಡಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ನು, ಅಭಿಮಾನಿಗಳಿಂದ ಅಲ್ಲು ಅರ್ಜುನ್​ಗೆ ವಿಶೇಷ ಗಿಫ್ಟ್​ ಒಂದು ದೊರೆತಿದೆ. ಅಷ್ಟಕ್ಕೂ ಏನದು ಆ ಗಿಫ್ಟ್​ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅನೇಕ ಸ್ಟಾರ್​ಗಳು ಗಿಡ ನೆಟ್ಟು ಪರಿಸರ ಉಳಿಸಿ ಎಂದು ಕರೆ ನೀಡಿದ್ದಾರೆ. ಇದಕ್ಕೆ ಅಲ್ಲು ಅರ್ಜುನ್​ ಕೂಡ ಹೊರತಾಗಿಲ್ಲ. ಹೀಗಾಗಿ, ಅವರಿಗೆ ಅಭಿಮಾನಿಗಳು ಗಿಡವನ್ನು ಗಿಫ್ಟ್​ ಆಗಿ ನೀಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸ್ಟಾರ್​ ನಟರ ಚಿತ್ರ ಎಂದರೆ ಅವರ ಸಿನಿಮಾ ತಂಡದಿಂದ ವಿಶೇಷ ಗಿಫ್ಟ್​ ಸಿಗೋದು ನಡೆದುಕೊಂಡುಬಂದ ಸಂಪ್ರದಾಯ. ಇದನ್ನು ಪುಷ್ಪ ಸಿನಿಮಾ ತಂಡ ಕೂಡ ಮುಂದುವರಿಸಿಕೊಂಡು ಹೋಗಿದೆ. ಪುಷ್ಪ ಸಿನಿಮಾ ಒಂದು ದಿನ ಮೊದಲೇ ಪುಷ್ಪ ರಾಜ್​ ಪಾತ್ರ ಪರಿಚಯ ಮಾಡಿದೆ.

ವಿಶೇಷ ವಿಡಿಯೋ ಒಂದನ್ನು ರಿಲೀಸ್​ ಮಾಡಲಾಗಿದ್ದು, ಈ ಸಿನಿಮಾದಲ್ಲಿ ರಕ್ತ ಚಂದನ ಕಳ್ಳ ಸಾಗಣೆಯನ್ನು ಹೇಗೆ ಮಾಡುತ್ತಾರೆ ಎನ್ನುವ ಇಂಚಿಂಚು ಮಾಹಿತಿಯನ್ನು ನಿರ್ದೇಶಕರು ಕಟ್ಟಿ ಕೊಟ್ಟಿದ್ದಾರೆ. ಕುರಿ ಮಂದೆಯನ್ನು ಎದುರು ಬಿಟ್ಟು ಹಿಂದಿನಿಂದ ರಕ್ತಚಂದನ ಮರದ ತುಂಡನ್ನು ಕಳ್ಳ ಸಾಗಣೆಕಾರರು ಹೊತ್ತು ಬರುತ್ತಿರುವ ದೃಶ್ಯಗಳು ಭಿನ್ನ ಲೋಕಕ್ಕೆ ಕರೆದೊಯ್ಯುತ್ತವೆ. ಕಳ್ಳ ಸಾಗಣೆ ವೇಳೆ ಲಾರಿ ಚೇಸಿಂಗ್​, ಅಲ್ಲು ಅರ್ಜುನ್​ ಅವರ ಪೊಲೀಸರ ಜತೆಗಿನ ಫೈಟಿಂಗ್​, ಜಿಗಿಯುತ್ತಲೇ ಮರದ ತುಂಡನ್ನು ಲಾರಿ ಮೇಲೆ ಹಾಕೋದು, ಪೊಲೀಸರು ಬಂದಾಗ ಸಿಳ್ಳೆ ಹೊಡೆಯೋದು,  ಕಣ್ಣುಕಟ್ಟಿರುವಾಗಲೂ ಫೈಟ್​ ಮಾಡೋದು ರೋಮಾಂಚನ ಮೂಡಿಸಿದೆ.

ಇದನ್ನೂ ಓದಿ: Pushpa Teaser: ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪಾತ್ರ ನೋಡಿದ್ರೆ ನೀವೊಮ್ಮೆ ಬೆಚ್ಚಿ ಬೀಳ್ತೀರಾ!

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ