AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy birthday Disha Patani: 19ನೇ ವಯಸ್ಸಿಗೆ ದಿಶಾ ಕೊಟ್ಟ ಮೊದಲ ಆಡಿಷನ್​ ವಿಡಿಯೋ ವೈರಲ್​

ದಿಶಾ ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಕಮರ್ಷಿಯಲ್​ ಜಾಹೀರಾತುಗಳನ್ನು ನಟಿಸುತ್ತಿದ್ದರು. ಚಾಕೋಲೆಟ್​, ಬಟ್ಟೆ, ಸೌಂದರ್ಯ ವರ್ಧಕ ಉತ್ಪನ್ನಗಳ ಜಾಹೀರಾತಿನಲ್ಲಿ ದಿಶಾ ಕಾಣಿಸಿಕೊಳ್ಳುತ್ತಿದ್ದರು.

Happy birthday Disha Patani: 19ನೇ ವಯಸ್ಸಿಗೆ ದಿಶಾ ಕೊಟ್ಟ ಮೊದಲ ಆಡಿಷನ್​ ವಿಡಿಯೋ ವೈರಲ್​
ದಿಶಾ ಪಟಾಣಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 13, 2021 | 4:49 PM

Share

ದಿಶಾ ಪಟಾಣಿ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಸ್ಟಾರ್​ ನಟರಾದ ಟೈಗರ್​ ಶ್ರಾಫ್​, ಸಲ್ಮಾನ್​ ಖಾನ್​ ಜತೆ ದಿಶಾ ತೆರೆಹಂಚಿಕೊಂಡಿದ್ದಾರೆ. ಅವರಿಗೆ ಇಂದು (ಜೂನ್​ 13) 29ನೇ ಜನ್ಮದಿನದ ಸಂಭ್ರಮ. ಈ ವೇಳೆ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದಿಶಾ ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಕಮರ್ಷಿಯಲ್​ ಜಾಹೀರಾತುಗಳನ್ನು ನಟಿಸುತ್ತಿದ್ದರು. ಚಾಕೋಲೆಟ್​, ಬಟ್ಟೆ, ಸೌಂದರ್ಯ ವರ್ಧಕ ಉತ್ಪನ್ನಗಳ ಜಾಹೀರಾತಿನಲ್ಲಿ ದಿಶಾ ಕಾಣಿಸಿಕೊಳ್ಳುತ್ತಿದ್ದರು. 10 ವರ್ಷಗಳಲ್ಲಿ ಅವರ ಜೀವನ ಸಂಪೂರ್ಣವಾಗಿ ಬದಲಾಗಿದೆ.

2015ರಲ್ಲಿ ತೆರೆಗೆ ಬಂದ ತೆಲುಗಿನ ‘ಲೋಫರ್​’ ಸಿನಿಮಾ ಮೂಲಕ ದಿಶಾ ಚಿತ್ರರಂಗಕ್ಕೆ ಕಾಲಿಟ್ಟರು. 2016ರಲ್ಲಿ ತೆರೆಕಂಡ ಎಂಎಸ್​​ ಧೋನಿ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ‘ಭಾಗಿ’ ಸರಣಿಯ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಟೈಗರ್​ ಶ್ರಾಫ್​ ಪ್ರೇಯಸಿ ಎಂದು ಕೂಡ ಹೇಳಲಾಗುತ್ತಿದೆ.

ಬಾಲಿವುಡ್​ನಲ್ಲಿ ಮಿಂಚುತ್ತಿರುವ ದಿಶಾ 10 ವರ್ಷಗಳ ಹಿಂದೆ ಈ ರೀತಿ ಇರಲಿಲ್ಲ. ಸಣ್ಣ-ಪುಟ್ಟ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು, ಮಾಡೆಲಿಂಗ್​ನಲ್ಲಿ ತೊಡಗಿಕೊಂಡಿದ್ದರು. ಅವರು ಮೊಟ್ಟ ಮೊದಲ ಬಾರಿಗೆ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲು ಆಡಿಷನ್​ ಕೊಟ್ಟಿದ್ದು 2009ರಲ್ಲಿ. ಆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇತ್ತೀಚೆಗೆ ತೆರೆಗೆ ಬಂದ ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್ ಮೋಸ್ಟ್ ವಾಂಟೆಡ್​ ಭಾಯ್​’ ಚಿತ್ರದಲ್ಲಿ ದಿಶಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಆದರೆ, ಸಿನಿಮಾ ವಿಮರ್ಶೆಯಲ್ಲಿ ಸೋತಿದೆ. ‘ಏಕ್​ ವಿಲನ್​ ರಿಟರ್ನ್’​​ ಚಿತ್ರದಲ್ಲಿ ದಿಶಾ ನಟಿಸುತ್ತಿದ್ದಾರೆ.

ಇತ್ತೀಚೆಗೆ ದಿಶಾ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಲಾಕ್​ಡೌನ್​ ಮಧ್ಯೆಯೂ ದಿಶಾ ಹಾಗೂ ಟೈಗರ್​ ಶ್ರಾಫ್​ ಕಾರಿನಲ್ಲಿ ಮುಂಬೈನ ಬಾಂದ್ರಾ ರಸ್ತೆಯಲ್ಲಿ ಸುತ್ತಾಟ ನಡೆಸಿದ್ದರು. ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಚರ್ಚೆ ಜೋರಾಗಿತ್ತು.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘನೆ; ದಿಶಾ ಪಟಾನಿ, ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲು

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ