Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy birthday Disha Patani: 19ನೇ ವಯಸ್ಸಿಗೆ ದಿಶಾ ಕೊಟ್ಟ ಮೊದಲ ಆಡಿಷನ್​ ವಿಡಿಯೋ ವೈರಲ್​

ದಿಶಾ ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಕಮರ್ಷಿಯಲ್​ ಜಾಹೀರಾತುಗಳನ್ನು ನಟಿಸುತ್ತಿದ್ದರು. ಚಾಕೋಲೆಟ್​, ಬಟ್ಟೆ, ಸೌಂದರ್ಯ ವರ್ಧಕ ಉತ್ಪನ್ನಗಳ ಜಾಹೀರಾತಿನಲ್ಲಿ ದಿಶಾ ಕಾಣಿಸಿಕೊಳ್ಳುತ್ತಿದ್ದರು.

Happy birthday Disha Patani: 19ನೇ ವಯಸ್ಸಿಗೆ ದಿಶಾ ಕೊಟ್ಟ ಮೊದಲ ಆಡಿಷನ್​ ವಿಡಿಯೋ ವೈರಲ್​
ದಿಶಾ ಪಟಾಣಿ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Jun 13, 2021 | 4:49 PM

ದಿಶಾ ಪಟಾಣಿ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಸ್ಟಾರ್​ ನಟರಾದ ಟೈಗರ್​ ಶ್ರಾಫ್​, ಸಲ್ಮಾನ್​ ಖಾನ್​ ಜತೆ ದಿಶಾ ತೆರೆಹಂಚಿಕೊಂಡಿದ್ದಾರೆ. ಅವರಿಗೆ ಇಂದು (ಜೂನ್​ 13) 29ನೇ ಜನ್ಮದಿನದ ಸಂಭ್ರಮ. ಈ ವೇಳೆ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದಿಶಾ ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಕಮರ್ಷಿಯಲ್​ ಜಾಹೀರಾತುಗಳನ್ನು ನಟಿಸುತ್ತಿದ್ದರು. ಚಾಕೋಲೆಟ್​, ಬಟ್ಟೆ, ಸೌಂದರ್ಯ ವರ್ಧಕ ಉತ್ಪನ್ನಗಳ ಜಾಹೀರಾತಿನಲ್ಲಿ ದಿಶಾ ಕಾಣಿಸಿಕೊಳ್ಳುತ್ತಿದ್ದರು. 10 ವರ್ಷಗಳಲ್ಲಿ ಅವರ ಜೀವನ ಸಂಪೂರ್ಣವಾಗಿ ಬದಲಾಗಿದೆ.

2015ರಲ್ಲಿ ತೆರೆಗೆ ಬಂದ ತೆಲುಗಿನ ‘ಲೋಫರ್​’ ಸಿನಿಮಾ ಮೂಲಕ ದಿಶಾ ಚಿತ್ರರಂಗಕ್ಕೆ ಕಾಲಿಟ್ಟರು. 2016ರಲ್ಲಿ ತೆರೆಕಂಡ ಎಂಎಸ್​​ ಧೋನಿ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ‘ಭಾಗಿ’ ಸರಣಿಯ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಟೈಗರ್​ ಶ್ರಾಫ್​ ಪ್ರೇಯಸಿ ಎಂದು ಕೂಡ ಹೇಳಲಾಗುತ್ತಿದೆ.

ಬಾಲಿವುಡ್​ನಲ್ಲಿ ಮಿಂಚುತ್ತಿರುವ ದಿಶಾ 10 ವರ್ಷಗಳ ಹಿಂದೆ ಈ ರೀತಿ ಇರಲಿಲ್ಲ. ಸಣ್ಣ-ಪುಟ್ಟ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು, ಮಾಡೆಲಿಂಗ್​ನಲ್ಲಿ ತೊಡಗಿಕೊಂಡಿದ್ದರು. ಅವರು ಮೊಟ್ಟ ಮೊದಲ ಬಾರಿಗೆ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲು ಆಡಿಷನ್​ ಕೊಟ್ಟಿದ್ದು 2009ರಲ್ಲಿ. ಆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇತ್ತೀಚೆಗೆ ತೆರೆಗೆ ಬಂದ ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್ ಮೋಸ್ಟ್ ವಾಂಟೆಡ್​ ಭಾಯ್​’ ಚಿತ್ರದಲ್ಲಿ ದಿಶಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಆದರೆ, ಸಿನಿಮಾ ವಿಮರ್ಶೆಯಲ್ಲಿ ಸೋತಿದೆ. ‘ಏಕ್​ ವಿಲನ್​ ರಿಟರ್ನ್’​​ ಚಿತ್ರದಲ್ಲಿ ದಿಶಾ ನಟಿಸುತ್ತಿದ್ದಾರೆ.

ಇತ್ತೀಚೆಗೆ ದಿಶಾ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಲಾಕ್​ಡೌನ್​ ಮಧ್ಯೆಯೂ ದಿಶಾ ಹಾಗೂ ಟೈಗರ್​ ಶ್ರಾಫ್​ ಕಾರಿನಲ್ಲಿ ಮುಂಬೈನ ಬಾಂದ್ರಾ ರಸ್ತೆಯಲ್ಲಿ ಸುತ್ತಾಟ ನಡೆಸಿದ್ದರು. ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಚರ್ಚೆ ಜೋರಾಗಿತ್ತು.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘನೆ; ದಿಶಾ ಪಟಾನಿ, ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲು

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ