AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy birthday Disha Patani: 19ನೇ ವಯಸ್ಸಿಗೆ ದಿಶಾ ಕೊಟ್ಟ ಮೊದಲ ಆಡಿಷನ್​ ವಿಡಿಯೋ ವೈರಲ್​

ದಿಶಾ ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಕಮರ್ಷಿಯಲ್​ ಜಾಹೀರಾತುಗಳನ್ನು ನಟಿಸುತ್ತಿದ್ದರು. ಚಾಕೋಲೆಟ್​, ಬಟ್ಟೆ, ಸೌಂದರ್ಯ ವರ್ಧಕ ಉತ್ಪನ್ನಗಳ ಜಾಹೀರಾತಿನಲ್ಲಿ ದಿಶಾ ಕಾಣಿಸಿಕೊಳ್ಳುತ್ತಿದ್ದರು.

Happy birthday Disha Patani: 19ನೇ ವಯಸ್ಸಿಗೆ ದಿಶಾ ಕೊಟ್ಟ ಮೊದಲ ಆಡಿಷನ್​ ವಿಡಿಯೋ ವೈರಲ್​
ದಿಶಾ ಪಟಾಣಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 13, 2021 | 4:49 PM

Share

ದಿಶಾ ಪಟಾಣಿ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಸ್ಟಾರ್​ ನಟರಾದ ಟೈಗರ್​ ಶ್ರಾಫ್​, ಸಲ್ಮಾನ್​ ಖಾನ್​ ಜತೆ ದಿಶಾ ತೆರೆಹಂಚಿಕೊಂಡಿದ್ದಾರೆ. ಅವರಿಗೆ ಇಂದು (ಜೂನ್​ 13) 29ನೇ ಜನ್ಮದಿನದ ಸಂಭ್ರಮ. ಈ ವೇಳೆ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದಿಶಾ ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಕಮರ್ಷಿಯಲ್​ ಜಾಹೀರಾತುಗಳನ್ನು ನಟಿಸುತ್ತಿದ್ದರು. ಚಾಕೋಲೆಟ್​, ಬಟ್ಟೆ, ಸೌಂದರ್ಯ ವರ್ಧಕ ಉತ್ಪನ್ನಗಳ ಜಾಹೀರಾತಿನಲ್ಲಿ ದಿಶಾ ಕಾಣಿಸಿಕೊಳ್ಳುತ್ತಿದ್ದರು. 10 ವರ್ಷಗಳಲ್ಲಿ ಅವರ ಜೀವನ ಸಂಪೂರ್ಣವಾಗಿ ಬದಲಾಗಿದೆ.

2015ರಲ್ಲಿ ತೆರೆಗೆ ಬಂದ ತೆಲುಗಿನ ‘ಲೋಫರ್​’ ಸಿನಿಮಾ ಮೂಲಕ ದಿಶಾ ಚಿತ್ರರಂಗಕ್ಕೆ ಕಾಲಿಟ್ಟರು. 2016ರಲ್ಲಿ ತೆರೆಕಂಡ ಎಂಎಸ್​​ ಧೋನಿ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ‘ಭಾಗಿ’ ಸರಣಿಯ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಟೈಗರ್​ ಶ್ರಾಫ್​ ಪ್ರೇಯಸಿ ಎಂದು ಕೂಡ ಹೇಳಲಾಗುತ್ತಿದೆ.

ಬಾಲಿವುಡ್​ನಲ್ಲಿ ಮಿಂಚುತ್ತಿರುವ ದಿಶಾ 10 ವರ್ಷಗಳ ಹಿಂದೆ ಈ ರೀತಿ ಇರಲಿಲ್ಲ. ಸಣ್ಣ-ಪುಟ್ಟ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು, ಮಾಡೆಲಿಂಗ್​ನಲ್ಲಿ ತೊಡಗಿಕೊಂಡಿದ್ದರು. ಅವರು ಮೊಟ್ಟ ಮೊದಲ ಬಾರಿಗೆ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲು ಆಡಿಷನ್​ ಕೊಟ್ಟಿದ್ದು 2009ರಲ್ಲಿ. ಆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇತ್ತೀಚೆಗೆ ತೆರೆಗೆ ಬಂದ ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್ ಮೋಸ್ಟ್ ವಾಂಟೆಡ್​ ಭಾಯ್​’ ಚಿತ್ರದಲ್ಲಿ ದಿಶಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಆದರೆ, ಸಿನಿಮಾ ವಿಮರ್ಶೆಯಲ್ಲಿ ಸೋತಿದೆ. ‘ಏಕ್​ ವಿಲನ್​ ರಿಟರ್ನ್’​​ ಚಿತ್ರದಲ್ಲಿ ದಿಶಾ ನಟಿಸುತ್ತಿದ್ದಾರೆ.

ಇತ್ತೀಚೆಗೆ ದಿಶಾ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಲಾಕ್​ಡೌನ್​ ಮಧ್ಯೆಯೂ ದಿಶಾ ಹಾಗೂ ಟೈಗರ್​ ಶ್ರಾಫ್​ ಕಾರಿನಲ್ಲಿ ಮುಂಬೈನ ಬಾಂದ್ರಾ ರಸ್ತೆಯಲ್ಲಿ ಸುತ್ತಾಟ ನಡೆಸಿದ್ದರು. ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಚರ್ಚೆ ಜೋರಾಗಿತ್ತು.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘನೆ; ದಿಶಾ ಪಟಾನಿ, ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲು

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್