AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shilpa Shetty Birthday: ವಿವಾಹಿತ ಪುರುಷ ರಾಜ್​ ಕುಂದ್ರಾ ಜೊತೆ ಶಿಲ್ಪಾ ಶೆಟ್ಟಿ ಮದುವೆ ಆಗಲು ಒಪ್ಪಿದ್ದೇಕೆ?

2009ರ ಅಕ್ಟೋಬರ್​ನಲ್ಲಿ ರಾಜ್​ ಕುಂದ್ರಾ ಮನೆಯಲ್ಲಿ ನಿಶ್ಚಿತಾರ್ಥ ನೆರವೇರಿತ್ತು. ಆಗ ಶಿಲ್ಪಾ ಶೆಟ್ಟಿಗೆ ಅವರು 3 ಕೋಟಿ ರೂ. ಬೆಲೆ ಬಾಳುವ ವಜ್ರದ ಉಂಗುರ ನೀಡಿದ್ದರಂತೆ!

Shilpa Shetty Birthday: ವಿವಾಹಿತ ಪುರುಷ ರಾಜ್​ ಕುಂದ್ರಾ ಜೊತೆ ಶಿಲ್ಪಾ ಶೆಟ್ಟಿ ಮದುವೆ ಆಗಲು ಒಪ್ಪಿದ್ದೇಕೆ?
ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ - ರಾಜ್ ​ಕುಂದ್ರಾ
TV9 Web
| Edited By: |

Updated on: Jun 08, 2021 | 1:54 PM

Share

ಬಾಲಿವುಡ್​ನಲ್ಲಿ ಗುರುತಿಸಿಕೊಂಡ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಅವರಿಗೆ ಇಂದು (ಜೂ.8) ಜನ್ಮದಿನದ ಸಂಭ್ರಮ. ಈ ಬಳುಕುವ ಬಳ್ಳಿಗೆ ಎಲ್ಲೆಡೆಯಿಂದಲೂ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಶಿಲ್ಪಾ ಶೆಟ್ಟಿ ನಟನೆಯಿಂದ ಸ್ವಲ್ಪ ಅಂತರ ಕಾಯ್ದುಕೊಂಡಿದ್ದಾರೆ. ಪತಿ ರಾಜ್​ ಕುಂದ್ರಾ ಮತ್ತು ಇಬ್ಬರು ಮಕ್ಕಳ ಜೊತೆ ಅವರು ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಬಹುಬೇಡಿಕೆಯ ನಟಿಯಾಗಿದ್ದ ಶಿಲ್ಪಾ ಅವರು 2009ರಲ್ಲಿ ರಾಜ್​ ಕುಂದ್ರಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ರಾಜ್​ ಕುಂದ್ರಾಗೆ ಅದು ಎರಡನೇ ಮದುವೆ. ಹಾಗಾಗಿ ಶಿಲ್ಪಾ ಅಭಿಮಾನಿಗಳಿಗೆ ಈ ವಿಚಾರ ಅಚ್ಚರಿ ಮೂಡಿಸಿತ್ತು.

ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ ನಡುವೆ ಹೇಗೆ ಪ್ರೀತಿ ಬೆಳೆಯಿತು ಎಂಬುದೇ ಹಲವರ ಅಚ್ಚರಿಯ ಪ್ರಶ್ನೆ. ತಮ್ಮ ಬ್ರ್ಯಾಂಡ್​ವೊಂದರ ಪ್ರಮೋಷನ್​ಗಾಗಿ ಶಿಲ್ಪಾ ಅವರು ರಾಜ್ ಕುಂದ್ರಾ ಜೊತೆ ಬ್ಯುಸಿನೆಸ್​ನಲ್ಲಿ ಕೈ ಜೋಡಿಸಿದ್ದರು. ಆಗಲೇ ಅವರಿಬ್ಬರಿಗೂ ಪರಿಚಯ ಬೆಳೆಯಿತು. ರಾಜ್​ ಅವರ ವ್ಯಕ್ತಿತ್ವ ಕಂಡು ಶಿಲ್ಪಾ ಫಿದಾ ಆದರು. ಆದರೆ ರಾಜ್​ಗೆ ಈಗಾಗಲೇ ಮದುವೆ ಆಗಿದೆ ಎಂಬ ವಿಷಯ ತಿಳಿದಾಗ ಶಿಲ್ಪಾಗೆ ಕೊಂಚ ನಿರಾಸೆ ಆಯಿತು. ಶೀಘ್ರದಲ್ಲೇ ತಮ್ಮ ಹೆಂಡತಿಗೆ ರಾಜ್​ ವಿಚ್ಛೇದನ ನೀಡಲಿದ್ದಾರೆ ಎಂಬುದು ಶಿಲ್ಪಾಗೆ ತಿಳಿಯಿತು.

ನಂತರ ಇಬ್ಬರೂ ಡೇಟಿಂಗ್​ ಮಾಡಲು ಶುರು ಮಾಡಿದರು. ಆಗಲೇ ಅನುಮಾನ ಹೊಗೆಯಾಡುತ್ತಿತ್ತು. ಗಾಸಿಪ್​ ಕಾಲಂಗಳಲ್ಲಿ ಇಬ್ಬರ ಹೆಸರು ಕೇಳಿಬರುತ್ತಿತ್ತು. ಆದರೂ ಅವರು ಒಪ್ಪಿಕೊಂಡಿರಲಿಲ್ಲ. ನಂತರದ ದಿನಗಳಲ್ಲಿ ಈ ಬಗ್ಗೆ ಶಿಲ್ಪಾ ಬಾಯಿ ಬಿಟ್ಟರು. ಶಿಲ್ಪಾಗೆ ದುಬಾರಿ ಗಿಫ್ಟ್​ಗಳನ್ನು ನೀಡುವ ಮೂಲಕ ರಾಜ್ ಇಂಪ್ರೆಸ್​ ಮಾಡುತ್ತಿದ್ದರು. ಮುಂಬೈನಲ್ಲಿ ಅವರಿಗಾಗಿ ಒಂದು ಫ್ಲಾಟ್​ ಕೂಡ ಖರೀದಿಸಿದರು. ಆಗಲೇ ಪ್ರೀತಿಯ ವಿಚಾರದಲ್ಲಿ ರಾಜ್​ ಗಂಭೀರವಾಗಿದ್ದಾರೆ ಎಂಬುದು ಶಿಲ್ಪಾಗೆ ತಿಳಿಯಿತು.

ಇಂಗ್ಲೆಂಡ್​ನ ರೆಸ್ಟೋರೆಂಟ್​ವೊಂದರಲ್ಲಿ ರಾಜ್​ ತುಂಬ ರೊಮ್ಯಾಂಟಿಕ್​ ಆಗಿ ಪ್ರಪೋಸ್​ ಮಾಡಿದರು. ಡೈಮಂಡ್​ ರಿಂಗ್​ ನೀಡಿ ಪ್ರೇಮ ನಿವೇದನೆ ಮಾಡಿಕೊಂಡರು. ಶಿಲ್ಪಾ ಒಪ್ಪಿಗೆ ಸೂಚಿಸಿದರು. ಆದರೆ ನಂತರದ ದಿನಗಳಲ್ಲಿ ರಾಜ್​ ಮೊದಲ ಪತ್ನಿ ಕವಿತಾ ಕುಂದ್ರಾ ಕೆಲವು ಆರೋಪಗಳನ್ನು ಮಾಡಿದರು. ತಮ್ಮ ಮದುವೆ ಮುರಿದು ಬೀಳಲು ಶಿಲ್ಪಾ ಶೆಟ್ಟಿಯೇ ಕಾರಣ ಎಂದು ಹೇಳಿದರು. ಆದರೆ ಆ ಆರೋಪಗಳನ್ನೆಲ್ಲ ರಾಜ್​ ತಳ್ಳಿ ಹಾಕಿದರು.

2009ರ ಅಕ್ಟೋಬರ್​ನಲ್ಲಿ ರಾಜ್​ ಕುಂದ್ರಾ ಮನೆಯಲ್ಲಿ ನಿಶ್ಚಿತಾರ್ಥ ನೆರವೇರಿತು. ಆಗ ಶಿಲ್ಪಾಗೆ ಅವರು 3 ಕೋಟಿ ರೂ. ಬೆಲೆ ಬಾಳುವ ವಜ್ರದ ಉಂಗುರ ನೀಡಿದರಂತೆ! ಅದೇ ವರ್ಷ ನವೆಂಬರ್​ 22ರಂದು ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ ಅದ್ದೂರಿಯಾಗಿ ಮದುವೆಯಾದರು. ಪುತ್ರ ವಿಹಾನ್​ಗೆ 2012ರಲ್ಲಿ ಶಿಲ್ಪಾ ಜನ್ಮ ನೀಡಿದರು. 2020ರ ಫೆಬ್ರವರಿಯಲ್ಲಿ ಬಾಡಿಗೆ ತಾಯಿ ಮೂಲಕ ಹೆಣ್ಣು ಮಗುವನ್ನು ಪಡೆದು, ಆ ಮಗುವಿಗೆ ಸಮಿಶಾ ಎಂದು ಹೆಸರಿಟ್ಟಿದ್ದಾರೆ.

ಇದನ್ನೂ ಓದಿ:

ಮದುವೆಯಾದ ಪ್ರಣಿತಾಗೆ ಶುಭಕೋರಿದ ಶಿಲ್ಪಾ ಶೆಟ್ಟಿ; ಇಬ್ಬರ ನಡುವೆ ಗೆಳೆತನ ಬೆಳೆದಿದ್ದು ಹೇಗೆ?

ಮಹೇಶ್​ ಬಾಬುಗೆ ಶಿಲ್ಪಾ ಶೆಟ್ಟಿ ಆಂಟಿ? ಇದು ಹೇಗೆ ಸಾಧ್ಯ ಎಂದು ತಲೆ ಕೆರೆದುಕೊಂಡ ಫ್ಯಾನ್ಸ್​

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ