AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಸಿನಿಮಾದಲ್ಲೇ ಮಿಂಚಿದ ಹರ್ಭಜನ್ ಸಿಂಗ್; ಆ್ಯಕ್ಷನ್​ ದೃಶ್ಯಗಳಿಗೆ ಫ್ಯಾನ್ಸ್ ಫಿದಾ

ಟ್ರೇಲರ್​ನಲ್ಲಿ ಕಾಲೇಜ್​ ಜೀವನವನ್ನು ಅದ್ಭುತವಾಗಿ ಕಟ್ಟಿಕೊಟ್ಟಿರುವುದು ಕಂಡು ಬರುತ್ತಿದೆ. ಇನ್ನು, ಶೀರ್ಷಿಕೆಗೆ ತಕ್ಕಂತೆ ಗೆಳೆತನದ ಬಗ್ಗೆ ಸಾಕಷ್ಟು ವಿಚಾರಗಳನ್ನು ಸಿನಿಮಾದಲ್ಲಿ ಹೇಳಲಾಗಿದೆ.

ಮೊದಲ ಸಿನಿಮಾದಲ್ಲೇ ಮಿಂಚಿದ ಹರ್ಭಜನ್ ಸಿಂಗ್; ಆ್ಯಕ್ಷನ್​ ದೃಶ್ಯಗಳಿಗೆ ಫ್ಯಾನ್ಸ್ ಫಿದಾ
ಮೊದಲ ಸಿನಿಮಾದಲ್ಲೇ ಮಿಂಚಿದ ಹರ್ಭಜನ್ ಸಿಂಗ್; ಆ್ಯಕ್ಷನ್​ ದೃಶ್ಯಗಳಿಗೆ ಫ್ಯಾನ್ಸ್ ಫಿದಾ
TV9 Web
| Edited By: |

Updated on: Sep 06, 2021 | 5:07 PM

Share

ಟೀಮ್​ ಇಂಡಿಯಾ ಸ್ಪಿನ್ನರ್​ ಹರ್ಭಜನ್ ಸಿಂಗ್​ ಈಗ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ಅವರ ನಟನೆಯ ಮೊದಲ ಸಿನಿಮಾ ‘ಫ್ರೆಂಡ್​ಶಿಪ್’ ರಿಲೀಸ್​ಗೆ ರೆಡಿ ಇದೆ. ಸದ್ಯ, ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದ್ದು ಭಜ್ಜಿ ಆ್ಯಕ್ಷನ್​ ದೃಶ್ಯಗಳಲ್ಲಿ ಮಿಂಚಿದ್ದಾರೆ. ಈ ಸಿನಿಮಾದಲ್ಲಿ ಸೋಶಿಯಲ್​ ಮೆಸೇಜ್​ ಕೂಡ ಇದೆ ಅನ್ನೋದು ಟ್ರೇಲರ್​ನಲ್ಲಿ ಕಂಡು ಬಂದಿದೆ. ಸದ್ಯ, ಟ್ರೇಲರ್​ ನೋಡಿದ ಅನೇಕರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.

ಸಿನಿಮಾದ ಕಥೆ ಮೆಕಾನಿಕಲ್​ ಇಂಜಿನಿಯರಿಂಗ್​ ಕಾಲೇಜಿನಲ್ಲಿ ನಡೆಯಲಿದೆ. ಈ ಸಿನಿಮಾದಲ್ಲಿ ಕ್ರೈಮ್​ ಇದೆ, ಆ್ಯಕ್ಷನ್​ ಇದೆ. ಖ್ಯಾತ ನಟ ಅರ್ಜುನ್​ ಸರ್ಜಾ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಕೂಡ ಆ್ಯಕ್ಷನ್​ನಲ್ಲಿ ಮಿಂಚಿದ್ದಾರೆ ಹರ್ಭಜನ್​ ಕ್ರಿಕೆಟ್​ ಹಿನ್ನೆಲೆಯವರು. ಅವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದರೆ, ಕ್ರಿಕೆಟ್​ ಇರಲೇಬೇಕು. ಅಂತೆಯೇ ಈ ಚಿತ್ರದಲ್ಲಿ ಕ್ರಿಕೆಟ್​ ಮ್ಯಾಚ್​ ಕೂಡ ಪ್ರಮುಖ ಎನಿಸಿಕೊಂಡಿದೆ.

ಟ್ರೇಲರ್​ನಲ್ಲಿ ಕಾಲೇಜ್​ ಜೀವನವನ್ನು ಅದ್ಭುತವಾಗಿ ಕಟ್ಟಿಕೊಟ್ಟಿರುವುದು ಕಂಡು ಬರುತ್ತಿದೆ. ಇನ್ನು, ಶೀರ್ಷಿಕೆಗೆ ತಕ್ಕಂತೆ ಗೆಳೆತನದ ಬಗ್ಗೆ ಸಾಕಷ್ಟು ವಿಚಾರಗಳನ್ನು ಸಿನಿಮಾದಲ್ಲಿ ಹೇಳಲಾಗಿದೆ. ‘ತಮಿಳು ಬಿಗ್​ ಬಾಸ್​ 3’ ಖ್ಯಾತಿಯ ಲೋಸ್ಲಿಯಾ ಈ ಸಿನಿಮಾದ ನಾಯಕಿ.

ಜಾನ್​ ಪೌಲ್​ ರಾಜ್​ ಮತ್ತು ಶ್ಯಾಮ್​ ಸೂರ್ಯ ಈ ಸಿನಿಮಾವನ್ನು ಒಟ್ಟಾಗಿ ನಿರ್ದೇಶನ ಮಾಡಿದ್ದಾರೆ. ಡಿ.ಎಂ. ಉಪಾಧ್ಯಾಯ ಕುಮಾರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂಥ ಕುಮಾರ್​ ಛಾಯಾಗ್ರಹಣ ಚಿತ್ರಕ್ಕಿದೆ. ಸೆಪ್ಟೆಂಬರ್​ 17ರಂದು ಸಿನಿಮಾ ತೆರೆಗೆ ಬರುತ್ತಿದೆ. ತಮಿಳು ಭಾಷೆಯಲ್ಲಿ ಸಿನಿಮಾ ಸಿದ್ಧಗೊಂಡಿದ್ದು, ಇದಲ್ಲದೆ, ಇನ್ನೂ ಕೆಲ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಹರ್ಭಜನ್​ ಮೊದಲ ಸಿನಿಮಾ ಆದ ಕಾರಣ ಸಿನಿ ಪ್ರಿಯರು ಹಾಗೂ ಕ್ರಿಕೆಟ್​ ಪ್ರಿಯರಿಗೆ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: ಭಜ್ಜಿ ಕುಟುಂಬಕ್ಕೆ ಹೊಸ ಅತಿಥಿಯ ಆಗಮನ; ಹರ್ಭಜನ್ ಸಿಂಗ್-ಗೀತಾ ಬಸ್ರಾ ದಂಪತಿಗೆ ಗಂಡು ಮಗು ಜನನ

ಭಾರತ ಟಿ-20 ವಿಶ್ವಕಪ್​ ಗೆಲ್ಲಬೇಕಾದರೆ ಇಂಥಹ ಆಟಗಾರರು ತಂಡದಲ್ಲಿರಬೇಕು ಎಂದ ಹರ್ಭಜನ್

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’