AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಸಿನಿಮಾದಲ್ಲೇ ಮಿಂಚಿದ ಹರ್ಭಜನ್ ಸಿಂಗ್; ಆ್ಯಕ್ಷನ್​ ದೃಶ್ಯಗಳಿಗೆ ಫ್ಯಾನ್ಸ್ ಫಿದಾ

ಟ್ರೇಲರ್​ನಲ್ಲಿ ಕಾಲೇಜ್​ ಜೀವನವನ್ನು ಅದ್ಭುತವಾಗಿ ಕಟ್ಟಿಕೊಟ್ಟಿರುವುದು ಕಂಡು ಬರುತ್ತಿದೆ. ಇನ್ನು, ಶೀರ್ಷಿಕೆಗೆ ತಕ್ಕಂತೆ ಗೆಳೆತನದ ಬಗ್ಗೆ ಸಾಕಷ್ಟು ವಿಚಾರಗಳನ್ನು ಸಿನಿಮಾದಲ್ಲಿ ಹೇಳಲಾಗಿದೆ.

ಮೊದಲ ಸಿನಿಮಾದಲ್ಲೇ ಮಿಂಚಿದ ಹರ್ಭಜನ್ ಸಿಂಗ್; ಆ್ಯಕ್ಷನ್​ ದೃಶ್ಯಗಳಿಗೆ ಫ್ಯಾನ್ಸ್ ಫಿದಾ
ಮೊದಲ ಸಿನಿಮಾದಲ್ಲೇ ಮಿಂಚಿದ ಹರ್ಭಜನ್ ಸಿಂಗ್; ಆ್ಯಕ್ಷನ್​ ದೃಶ್ಯಗಳಿಗೆ ಫ್ಯಾನ್ಸ್ ಫಿದಾ
TV9 Web
| Edited By: |

Updated on: Sep 06, 2021 | 5:07 PM

Share

ಟೀಮ್​ ಇಂಡಿಯಾ ಸ್ಪಿನ್ನರ್​ ಹರ್ಭಜನ್ ಸಿಂಗ್​ ಈಗ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ಅವರ ನಟನೆಯ ಮೊದಲ ಸಿನಿಮಾ ‘ಫ್ರೆಂಡ್​ಶಿಪ್’ ರಿಲೀಸ್​ಗೆ ರೆಡಿ ಇದೆ. ಸದ್ಯ, ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದ್ದು ಭಜ್ಜಿ ಆ್ಯಕ್ಷನ್​ ದೃಶ್ಯಗಳಲ್ಲಿ ಮಿಂಚಿದ್ದಾರೆ. ಈ ಸಿನಿಮಾದಲ್ಲಿ ಸೋಶಿಯಲ್​ ಮೆಸೇಜ್​ ಕೂಡ ಇದೆ ಅನ್ನೋದು ಟ್ರೇಲರ್​ನಲ್ಲಿ ಕಂಡು ಬಂದಿದೆ. ಸದ್ಯ, ಟ್ರೇಲರ್​ ನೋಡಿದ ಅನೇಕರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.

ಸಿನಿಮಾದ ಕಥೆ ಮೆಕಾನಿಕಲ್​ ಇಂಜಿನಿಯರಿಂಗ್​ ಕಾಲೇಜಿನಲ್ಲಿ ನಡೆಯಲಿದೆ. ಈ ಸಿನಿಮಾದಲ್ಲಿ ಕ್ರೈಮ್​ ಇದೆ, ಆ್ಯಕ್ಷನ್​ ಇದೆ. ಖ್ಯಾತ ನಟ ಅರ್ಜುನ್​ ಸರ್ಜಾ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಕೂಡ ಆ್ಯಕ್ಷನ್​ನಲ್ಲಿ ಮಿಂಚಿದ್ದಾರೆ ಹರ್ಭಜನ್​ ಕ್ರಿಕೆಟ್​ ಹಿನ್ನೆಲೆಯವರು. ಅವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದರೆ, ಕ್ರಿಕೆಟ್​ ಇರಲೇಬೇಕು. ಅಂತೆಯೇ ಈ ಚಿತ್ರದಲ್ಲಿ ಕ್ರಿಕೆಟ್​ ಮ್ಯಾಚ್​ ಕೂಡ ಪ್ರಮುಖ ಎನಿಸಿಕೊಂಡಿದೆ.

ಟ್ರೇಲರ್​ನಲ್ಲಿ ಕಾಲೇಜ್​ ಜೀವನವನ್ನು ಅದ್ಭುತವಾಗಿ ಕಟ್ಟಿಕೊಟ್ಟಿರುವುದು ಕಂಡು ಬರುತ್ತಿದೆ. ಇನ್ನು, ಶೀರ್ಷಿಕೆಗೆ ತಕ್ಕಂತೆ ಗೆಳೆತನದ ಬಗ್ಗೆ ಸಾಕಷ್ಟು ವಿಚಾರಗಳನ್ನು ಸಿನಿಮಾದಲ್ಲಿ ಹೇಳಲಾಗಿದೆ. ‘ತಮಿಳು ಬಿಗ್​ ಬಾಸ್​ 3’ ಖ್ಯಾತಿಯ ಲೋಸ್ಲಿಯಾ ಈ ಸಿನಿಮಾದ ನಾಯಕಿ.

ಜಾನ್​ ಪೌಲ್​ ರಾಜ್​ ಮತ್ತು ಶ್ಯಾಮ್​ ಸೂರ್ಯ ಈ ಸಿನಿಮಾವನ್ನು ಒಟ್ಟಾಗಿ ನಿರ್ದೇಶನ ಮಾಡಿದ್ದಾರೆ. ಡಿ.ಎಂ. ಉಪಾಧ್ಯಾಯ ಕುಮಾರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂಥ ಕುಮಾರ್​ ಛಾಯಾಗ್ರಹಣ ಚಿತ್ರಕ್ಕಿದೆ. ಸೆಪ್ಟೆಂಬರ್​ 17ರಂದು ಸಿನಿಮಾ ತೆರೆಗೆ ಬರುತ್ತಿದೆ. ತಮಿಳು ಭಾಷೆಯಲ್ಲಿ ಸಿನಿಮಾ ಸಿದ್ಧಗೊಂಡಿದ್ದು, ಇದಲ್ಲದೆ, ಇನ್ನೂ ಕೆಲ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಹರ್ಭಜನ್​ ಮೊದಲ ಸಿನಿಮಾ ಆದ ಕಾರಣ ಸಿನಿ ಪ್ರಿಯರು ಹಾಗೂ ಕ್ರಿಕೆಟ್​ ಪ್ರಿಯರಿಗೆ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: ಭಜ್ಜಿ ಕುಟುಂಬಕ್ಕೆ ಹೊಸ ಅತಿಥಿಯ ಆಗಮನ; ಹರ್ಭಜನ್ ಸಿಂಗ್-ಗೀತಾ ಬಸ್ರಾ ದಂಪತಿಗೆ ಗಂಡು ಮಗು ಜನನ

ಭಾರತ ಟಿ-20 ವಿಶ್ವಕಪ್​ ಗೆಲ್ಲಬೇಕಾದರೆ ಇಂಥಹ ಆಟಗಾರರು ತಂಡದಲ್ಲಿರಬೇಕು ಎಂದ ಹರ್ಭಜನ್

Follow Us
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ