AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀನಾಯ ಸ್ಥಿತಿ ತಲುಪಿದ ‘ಹರಿ ಹರ ವೀರ ಮಲ್ಲು’ ಕಲೆಕ್ಷನ್; ಪವನ್ ಕಲ್ಯಾಣ್ ಕನಸು ಭಗ್ನ

Hari Hara Veera Mallu Collection: ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಗಳಿಸಲು ವಿಫಲವಾಗಿದೆ. 250 ಕೋಟಿ ರೂಪಾಯಿ ಬಜೆಟ್‌ನ ಈ ಚಿತ್ರ ಕೇವಲ 79 ಕೋಟಿ ರೂಪಾಯಿ ಮಾತ್ರ ಸಂಗ್ರಹಿಸಿದೆ. ಪ್ರಾರಂಭಿಕ ದಿನಗಳಲ್ಲಿ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿತ್ತು. ಆದರೆ, ದಿನ ಕಳೆದಂರೆ ಗಳಿಕೆ ಕುಸಿದಿದೆ.

ಹೀನಾಯ ಸ್ಥಿತಿ ತಲುಪಿದ ‘ಹರಿ ಹರ ವೀರ ಮಲ್ಲು’ ಕಲೆಕ್ಷನ್; ಪವನ್ ಕಲ್ಯಾಣ್ ಕನಸು ಭಗ್ನ
ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on: Jul 30, 2025 | 7:30 AM

Share

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ (Hari Hara Veera Mallu) ಸಿನಿಮಾ ಸೂಪರ್ ಹಿಟ್ ಆಗಬಹುದು ಎಂದು ಫ್ಯಾನ್ಸ್ ಭಾವಿಸಿದ್ದರು. ಆದರೆ, ಊಹೆ ತಪ್ಪಾಗಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಹೀನಾಯ ಸ್ಥಿತಿ ತಲುಪಿದೆ. ಅದರಲ್ಲೂ ಮಂಗಳವಾರದ ಗಳಿಕೆ ನೋಡಿದ ನಿರ್ಮಾಪಕರ ಕಣ್ಣಲ್ಲಿ ಆತಂಕದ ಛಾಯೆ ಮೂಡಿದೆ. 250 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಕೇವಲ 79 ಕೋಟಿ ರೂಪಾಯಿ. ಕಳೆದ ವಾರಕ್ಕಿಂತ ಈ ವಾರದ ಕಲೆಕ್ಷನ್ ಮತ್ತಷ್ಟು ಹೀನಾಯ ಎನಿಸಿಕೊಂಡಿದೆ.

‘ಹರಿ ಹರ ವೀರ ಮಲ್ಲು’ ಸಿನಿಮಾ ಪ್ರೀಮಿಯರ್ ಶೋಗಳಿಂದ 12.75 ಕೋಟಿ ರೂಪಾಯಿ ಹಾಗೂ ಮೊದಲ ದಿನದ ಕಲೆಕ್ಷನ್​ನಿಂದ 34.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಇವೆರಡು ಸೇರಿದರೆ 47.50 ಕೋಟಿ ರೂಪಾಯಿ ಆಗಲಿದೆ. ಇದಾದ ಬಳಿಕ ಸಿನಿಮಾ ಐದು ದಿನಗಳಲ್ಲಿ ಕಲೆಕ್ಷನ್ ಮಾಡಿದ್ದು ಕೇವಲ 32 ಕೋಟಿ ರೂಪಾಯಿ. ಶನಿವಾರ ಹಾಗೂ ಭಾನುವಾರ ಚಿತ್ರಕ್ಕೆ ಸ್ವಲ್ಪ ಒಳ್ಳೆಯ ಕಲೆಕ್ಷನ್ ಆಗಿದೆ. ಈ ವಾರ ಚಿತ್ರದ ಸ್ಥಿತಿ ಹೀನಾಯವಾಗಿದೆ.

ಸೋಮವಾರ (ಜುಲೈ 28) ಚಿತ್ರ ಕೇವಲ 2.1 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮಂಗಳವಾರ (ಜುಲೈ 29) ಸಿನಿಮಾ ಗಳಿಸಿದ್ದು 1.75 ಕೋಟಿ ರೂಪಾಯಿ. ವಾರದ ಮೊದಲೆರಡು ದಿನದ ಗಳಿಕೆ ಸೇರಿದರೆ 3.85 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಇದೇ ಎರಡು ದಿನಗಳಲ್ಲಿ ರಾಜ್ ಬಿ ಶೆಟ್ಟಿ ನಿರ್ಮಾಣದ ಕನ್ನಡದ ಸಿನಿಮಾ ‘ಸು ಫ್ರಮ್ ಸೋ’ ಸಿನಿಮಾ 6 ಕೋಟಿ ರೂಪಾಯಿಗೂ ಹೆಚ್ಚಿನ ಕಲೆಕ್ಷನ್ ಮಾಡಿದೆ.

ಇದನ್ನೂ ಓದಿ
Image
ಶ್ರಾವಣದ ಉಪವಾಸ ಮಾಡಿ ಬಳಿಕ ಕುರಿ ಮರಿ ತಿಂದ ನಟಿ; ವ್ಯಕ್ತವಾಯಿತು ಟೀಕೆ
Image
ಜೀ ಕನ್ನಡದಲ್ಲಿ ‘ನಾವು ನಮ್ಮವರು’ ಶೋ; ತಾರಾ, ಶರಣ್, ಅಮೂಲ್ಯ ಜಡ್ಜ್
Image
ಸೋಮವಾರವೂ ಭಾನುವಾರದಷ್ಟೇ ಗಳಿಸಿದ ‘ಸು ಫ್ರಮ್ ಸೋ’
Image
‘ಕನಿಷ್ಠ ಸಭ್ಯತೆ ಇರಲಿ’; ದರ್ಶನ್ ಅಭಿಮಾನಿಗಳ ಬಳಿ ಕೋರಿದ್ರಾ ರಕ್ಷಿತಾ

ಇದನ್ನೂ ಓದಿ: ‘ಹರಿ ಹರ ವೀರ ಮಲ್ಲು’ ಕಲೆಕ್ಷನ್; ಪವನ್ ಕಲ್ಯಾಣ್ ಚಿತ್ರಕ್ಕೆ ಕುಂಟುವುದೊಂದೇ ಆಯ್ಕೆ

ದಿನ ಕಳೆದಂತೆ ‘ಹರಿ ಹರ ವೀರ ಮಲ್ಲು’ ಮತ್ತಷ್ಟು ಕಡಿಮೆ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ. ಈ ಶುಕ್ರವಾರದ ವೇಳೆಗೆ ಶೋ ಸಂಖ್ಯೆ ಮತ್ತಷ್ಟು ಇಳಿಕೆ ಕಾಣಲಿದೆ. ಹೀಗಾಗಿ, ಸಿನಿಮಾದ 100 ಕೋಟಿ ರೂಪಾಯಿ ಕನಸು ಕನಸಾಗಿಯೇ ಉಳಿಯಲಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ಪವನ್ ಕಲ್ಯಾಣ್ ಸಿನಿಮಾಗಳಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಈಗ ಈ ರೀತಿಯ ಸೋಲು ಕಂಡರೆ ಅವರು ನಟನೆಯಿಂದ ಮತ್ತಷ್ಟು ದೂರವೇ ಉಳಿದುಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ