AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawan Kalyan: ‘ಮಾತು ಕೇಳಯ್ಯ’ ಎನ್ನುತ್ತಿದ್ದಾರೆ ಪವನ್ ಕಲ್ಯಾಣ್

Pawan Kalyan Movie: ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದೆ. ಈ ಹಾಡನ್ನು ಎಲ್ಲ ಭಾಷೆಗಳಲ್ಲಿಯೂ ಪವನ್ ಕಲ್ಯಾಣ್ ಅವರೇ ಹಾಡಿದ್ದಾರೆ ಎನ್ನಲಾಗುತ್ತಿದೆ. ‘ಹರಿಹರ ವೀರ ಮಲ್ಲು’ ಸಿನಿಮಾ ಅದರ ಕುರಿತಾದ ಇತರೆ ಮಾಹಿತಿಗಳನ್ನು ಈ ಲೇಖನ ಒಳಗೊಂಡಿದೆ.

Pawan Kalyan: ‘ಮಾತು ಕೇಳಯ್ಯ’ ಎನ್ನುತ್ತಿದ್ದಾರೆ ಪವನ್ ಕಲ್ಯಾಣ್
Pawan Kalyan
ಮಂಜುನಾಥ ಸಿ.
|

Updated on: Jan 17, 2025 | 4:25 PM

Share

ರಾಜಕೀಯದಲ್ಲಿ ಬ್ಯುಸಿಯಾದ ಬಳಿಕ ಪವನ್ ಕಲ್ಯಾಣ್ ಸಿನಿಮಾಗಳಿಂದ ತುಸು ದೂರವಾಗಿದ್ದಾರೆ. ಆದರೆ ಇದೀಗ ಮತ್ತೆ ಸಿನಿಮಾ ಮೇಲೆ ಗಮನ ಹರಿಸಲು ಮುಂದಾಗಿದ್ದು, ಆಂಧ್ರ ಪ್ರದೇಶ ಚುನಾವಣೆಗೆ ಮುಂಚೆ ಶುರು ಮಾಡಿದ್ದ ಸಿನಿಮಾಗಳನ್ನು ಮುಗಿಸಿ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದಾರೆ. ಇದೀಗ ಪವನ್ ಕಲ್ಯಾಣ್ ನಟಿಸಿರುವ ‘ಹರಿ ಹರ ವೀರ ಮಲ್ಲು’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದೆ. ಹಾಡಿನ ವಿಶೇಷವೆಂದರೆ ಎಲ್ಲ ಭಾಷೆಗಳಲ್ಲಿಯೂ ಪವನ್ ಕಲ್ಯಾಣ್ ಅವರೇ ಹಾಡು ಹಾಡಿದ್ದಾರೆ.

‘ಹರಿಹರ ವೀರ ಮಲ್ಲು’ ಸಿನಿಮಾದ ‘ಮಾಟ ವಿನಾಲಿ’ ಹೆಸರಿನ ಹಾಡು ಬಿಡುಗಡೆ ಆಗಿದೆ. ಈ ಹಾಡನ್ನು ಖುದ್ದು ಪವನ್ ಕಲ್ಯಾಣ್ ಹಾಡಿದ್ದಾರೆ. ಜನಪದ ಶೈಲಿಯ ಹಾಡು ಇದಾಗಿದ್ದು, ಅನುಭವಗಳನ್ನು ಹಾಡಾಗಿ ಮಾಡಿ ಇತರರಿಗೆ ಎಚ್ಚರಿಕೆ ಹೇಳುತ್ತಿರುವ ರೀತಿಯ ಹಾಡು ಇದಾಗಿದೆ. ರಾಜ, ಸೇನಾಧಿಪತಿಗಳಿಗೆ ಪವನ್ ಕಲ್ಯಾಣ್ ತನ್ನ ಮಾತು ಕೇಳು ಎಂದು ಹಾಡಿನ ಮೂಲಕ ಬುದ್ಧಿವಾದ ಹೇಳುತ್ತಿರುವ ಹಾಡು ಇದಾಗಿದೆ.

ಹಾಡು ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬಿಡುಗಡೆ ಆಗಿದೆ. ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಹಾಡು ಬಿಡುಗಡೆ ಆಗಿದೆ. ಎಲ್ಲ ಭಾಷೆಯಲ್ಲಿಯೂ ಪವನ್ ಕಲ್ಯಾಣ್ ಹಾಡಿದ್ದಾರೆ ಎನ್ನಲಾಗುತ್ತಿದೆ. ಹಾಡಿನ ಯೂಟ್ಯೂಬ್ ಲಿಂಕ್​ನಲ್ಲಿ ಇದೇ ಮಾಹಿತಿ ಇದೆ. ಆದರೆ ತೆಲುಗು ಹೊರತಾಗಿ ಬೇರೆ ಭಾಷೆಗಳಲ್ಲಿ ಪವನ್ ಕಲ್ಯಾಣ್ ಅವರ ಧ್ವನಿ ಗುರುತಿಸುವುದೇ ಕಷ್ಟ ಎಂಬಂತಾಗಿದೆ. ಅತಿಯಾಗಿ ತಂತ್ರಜ್ಞಾನ ಬಳಸಿರುವುದು ಎದ್ದು ಕಾಣುತ್ತಿದೆ.

ಇದನ್ನೂ ಓದಿ:ಪವನ್ ಕಲ್ಯಾಣ್ ವೃತ್ತಿ ಜೀವನಕ್ಕೆ ಭದ್ರ ಬುನಾದಿ ಹಾಕಿದ್ದೇ ಅಲ್ಲು ಅರ್ಜುನ್ ತಂದೆ

‘ಹರಿಹರ ವೀರ ಮಲ್ಲು’ ಐತಿಹಾಸಿಕ ಕತೆ ಹೊಂದಿರುವ ಸಿನಿಮಾ ಆಗಿದೆ. ಸಿನಿಮಾ ಅನ್ನು ಕ್ರಿಶ್ ಮತ್ತು ಜ್ಯೋತಿ ಕೃಷ್ಣ ಅವರುಗಳು ನಿರ್ದೇಶನ ಮಾಡಿದ್ದಾರೆ. ಸಿನಿಮಾವನ್ನು ಎಎಂ ರತ್ನಂ ಮತ್ತು ದಯಾಕರ್ ರಾವ್ ಅವರುಗಳು ನಿರ್ಮಾಣ ಮಾಡಿದ್ದಾರೆ. ಇದು ಪವನ್ ಕಲ್ಯಾಣ್ ನಟಿಸುತ್ತಿರುವ ಮೊದಲ ಐತಿಹಾಸಿಕ ಕತೆಯುಳ್ಳ ಸಿನಿಮಾ ಆಗಿದೆ. ಸಿನಿಮಾದ ಚಿತ್ರೀಕರಣದ ವೇಳೆ ಈಗಾಗಲೇ ಒಮ್ಮೆ ಸೆಟ್ ಬೆಂಕಿಗಾಹುತಿ ಆಗಿತ್ತು. ಹಾಗಾಗಿ ಸಿನಿಮಾ ತಡವಾಗಿದೆ. ಸಿನಿಮಾನಲ್ಲಿ ಪವನ್ ಜೊತೆಗೆ ಬಾಬಿ ಡಿಯೋಲ್, ನಾಯಕಿಯಾಗಿ ನಿಧಿ ಅಗರ್ವಾಲ್, ಇತರೆ ನಟಿಯರಾದ ಗ್ಲಾಮರ್​ ಗೊಂಬೆಗಳಾದ ನೋರಾ ಫತೇಹಿ, ನರ್ಗಿಸ್ ಫಕ್ರಿ ಅವರುಗಳು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ