AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haripriya Vasishta Simha: ಸಿಂಹದ ಕೈಯಲ್ಲಿ ಮಗು: ‘ಚಿನ್ನ ನಿನ್ನ ತೋಳಿನಲ್ಲಿ ಕಂದ ನಾನು’ ಎಂದ ಹರಿಪ್ರಿಯಾ

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಸಿಂಪಲ್​ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಆದ ಬೆನ್ನೆಲ್ಲೆ ನಟಿ ಹರಿಪ್ರಿಯಾ ಟ್ವೀಟ್​ ಮಾಡಿದ್ದು, ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

Haripriya Vasishta Simha: ಸಿಂಹದ ಕೈಯಲ್ಲಿ ಮಗು: 'ಚಿನ್ನ ನಿನ್ನ ತೋಳಿನಲ್ಲಿ ಕಂದ ನಾನು' ಎಂದ ಹರಿಪ್ರಿಯಾ
ಹರಿಪ್ರಿಯಾ
TV9 Web
| Edited By: |

Updated on:Dec 02, 2022 | 9:58 PM

Share

ಕನ್ನಡದ ಬಹು ಬೇಡಿಕೆ ನಟಿಯರಲ್ಲಿ ಒಬ್ಬರಾದ ಅದಿತಿ ಪ್ರಭುದೇವ ಅವರು ಇತ್ತೀಚೆಗೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ಅದ್ದೂರಿಯಾಗಿ ಮದುವೆ ಮಾಡಿಕೊಂಡರು. ಬಳಿಕ ರೆಬಲ್​ ಸ್ಟಾರ್​ ಅಂಬರೀಷ್​​ ಅವರ ಪುತ್ರ ಯಂಗ್ ರೆಬಲ್​ ಸ್ಟಾರ್​ ಅಭಿಷೇಕ್​ ಅವರು ಮಾಡೆಲ್ ಅವಿವಾ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲ್ಲಿದ್ದಾರೆ ಎಂದೆಲ್ಲಾ ವಂದತಿ ಹಬ್ಬಿಸಲಾಗಿತ್ತು. ಇವೆಲ್ಲದರ ಮಧ್ಯೆ ನಟಿ ಹರಿಪ್ರಿಯಾ (Haripriya) ಅವರು ಮೂಗು ಚುಚ್ಚಿಸಿಕೊಂಡು ಸುದ್ದಿಯಾಗಿದ್ದರು. ಈ ಕುರಿತಾಗಿ ನಟಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದರು. ವಿಡಿಯೋ ನೋಡಿದ ಅಭಿಮಾನಿಗಳು ನಟ ವಸಿಷ್ಠ ಸಿಂಹ ಇರುವುದನ್ನು ಪತ್ತೆ ಹಚ್ಚಿದ್ದರು. ಬಳಿಕ ಇವರಿಬ್ಬರು ಮದುವೆ ಆಗಲಿದ್ದಾರೆ ಎನ್ನಲಾಗಿತ್ತು. ಸದ್ಯ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಸಿಂಪಲ್​ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಆದ ಬೆನ್ನೆಲ್ಲೆ ನಟಿ ಹರಿಪ್ರಿಯಾ ಟ್ವೀಟ್​ ಒಂದನ್ನು ಮಾಡಿದ್ದಾರೆ.

ಹರಿಪ್ರಿಯಾ ಅವರ ನಿವಾಸದಲ್ಲಿ ಸಿಂಪಲ್​ ಆಗಿ ನಿಶ್ಚಿತಾರ್ಥ ಕಾರ್ಯ ನಡೆದಿದೆ. ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಉಂಗುರ ಬದಲಾಯಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ. ಈ ವಿಚಾರಗಳಿಗೆ ಪುಷ್ಠಿ ನೀಡುವಂತೆ ನಟಿ ಹರಿಪ್ರಿಯಾ ಟ್ವೀಟ್​ ಮಾಡಿದ್ದು, ಸಿಂಹದ ಮಡಿಲಲ್ಲಿ ಮಲಗಿದ ಮಗುವಿನ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಜೊತೆಗೆ ‘ಚಿನ್ನ ನಿನ್ನ ತೋಳಿನಲ್ಲಿ ಕಂದ ನಾನು’ ಎಂದು ಬರೆದುಕೊಂಡಿದ್ದಾರೆ. ಹೀಗೆ ಪೋಸ್ಟ್‌ ಹಾಕುತ್ತಿದ್ದಂತೆ ಈ ಜೋಡಿಯ ಇಬ್ಬರ ಫ್ಯಾನ್ಸ್​ ವಿಶ್​ ಮಾಡಿದ್ದಾರೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜೋಡಿಯ ಪ್ರೇಮ್​ ಕಹಾನಿ ಸದ್ಯ ಗಾಂಧಿನಗರದಲ್ಲಿ ಹಾಟ್​ ನ್ಯೂಸ್​ ಆಗಿದೆ. ಕಳೆದ ಕೆಲ  ದಿನಗಳಿಂದ ಇವರಿಬ್ಬರದೆ ಸುದ್ದಿ ಹರಿದಾಡುತ್ತಿದ್ದರು ಈ ಜೋಡಿ ಮಾತ್ರ ಬಾಯಿಬಿಟ್ಟಿಲ್ಲ. ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿತು ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ. ಎಂಗೇಜ್​ಮೆಂಟ್​ ಸಲುವಾಗಿಯೇ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಇತ್ತೀಚಿಗೆ ಶಾಪಿಂಗ್​ ಮಾಡಿದ್ದರು ಎಂಬ ಮಾಹಿತಿ ಕೇಳಿಬಂದಿತ್ತು. ಈಗ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಈ ಜೋಡಿಗೆ ಅಭಿನಂದನೆ ತಿಳಿಸಲು ಆರಂಭಿಸಿದ್ದಾರೆ.

ಇದನ್ನೂ ಓದಿ: Haripriya Vasishta Simha Engagement: ಹರಿಪ್ರಿಯಾ-ವಸಿಷ್ಠ ಸಿಂಹ ನಿಶ್ಚಿತಾರ್ಥ; ಕೇವಲ ಆಪ್ತರ ಸಮ್ಮುಖದಲ್ಲಿ ನಡೆಯಿತು ಶುಭಕಾರ್ಯ

2007ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಹರಿಪ್ರಿಯಾ ಅವರು ಇಂದಿಗೂ ಚಾರ್ಮ್​ ಉಳಿಸಿಕೊಂಡಿದ್ದಾರೆ. ರಿಷಬ್​ ಶೆಟ್ಟಿ, ರಕ್ಷಿತ್​ ಶೆಟ್ಟಿ, ಶ್ರೀಮುರಳಿ ಮುಂತಾದ ಸ್ಟಾರ್​ ಹೀರೋಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ನಾಯಕಿ ಪ್ರಧಾನ ಸಿನಿಮಾಗಳನ್ನೂ ಮಾಡಿ ಸೈ ಎನಿಸಿಕೊಂಡಿದ್ದಾರೆ. ಸದ್ಯ ಹಲವು ಚಿತ್ರಗಳು ಅವರ ಕೈಯಲ್ಲಿವೆ. ವಸಿಷ್ಠ ಸಿಂಹ ಕೂಡ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ವಿಲನ್​ ಪಾತ್ರಗಳ ಮೂಲಕ ತಮ್ಮದೇ ಛಾಪು ಮೂಡಿಸಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:57 pm, Fri, 2 December 22

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!