AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Miss Universe 2021: ಭುವನ ಸುಂದರಿಯಾಗಿ ಹೊರಹೊಮ್ಮಿದ ಭಾರತದ ಹರ್ನಾಜ್ ಸಂಧು

2021 ರ ಮಿಸ್​ ಯುನಿವರ್ಸ್​ ಸ್ಪರ್ಧೆಯ ವಿಜೇತೆಯಾಗಿ ಚಂಡೀಗಢ ಮೂಲದ ಹರ್ನಾಜ್​ ಸಂಧು ಆಯ್ಕೆಯಾಗಿದ್ದಾರೆ. ಇಸ್ರೇಲ್​ನ ಐಲಾಟ್​ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿನಿಸಿದ್ದ 21 ವರ್ಷದ ಹರ್ನಾಜ್​ ಸಂಧು ಭುವನ ಸುಂದರಿಯಾಗಿ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ.  ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್​ ಯುನಿವರ್ಸ್​ ಪಟ್ಟ ದೊರಕಿದೆ.

Miss Universe 2021: ಭುವನ ಸುಂದರಿಯಾಗಿ ಹೊರಹೊಮ್ಮಿದ ಭಾರತದ ಹರ್ನಾಜ್ ಸಂಧು
2021ರ ಮಿಸ್​ ಯುನಿವರ್ಸ್ ವಿಜೇತೆ ಹರ್ನಾಜ್​ ಸಂಧು
TV9 Web
| Updated By: Digi Tech Desk|

Updated on:Dec 13, 2021 | 10:24 AM

Share

Miss Universe Harnaaz Sandhu: 2021 ರ ಮಿಸ್​ ಯುನಿವರ್ಸ್​ ಸ್ಪರ್ಧೆಯ ವಿಜೇತೆಯಾಗಿ ಚಂಡೀಗಢ ಮೂಲದ ಹರ್ನಾಜ್​ ಸಂಧು ಆಯ್ಕೆಯಾಗಿದ್ದಾರೆ. ಇಸ್ರೇಲ್​ನ ಐಲಾಟ್​ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 21 ವರ್ಷದ ಹರ್ನಾಜ್​ ಸಂಧು ಭುವನ ಸುಂದರಿಯಾಗಿ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ.  ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್​ ಯುನಿವರ್ಸ್​ ಪಟ್ಟ ದೊರಕಿದೆ. 2000ರಲ್ಲಿ ಲಾರಾದತ್ತ ಭುವನ ಸುಂದರಿಯಾಗಿ ಹೊರಹೊಮ್ಮಿದ್ದರು. ಅವರ ಬಳಿಕ ಈಗ ಹರ್ನಾಜ್​ ಸಂಧು 2021ರ ವಿಶ್ವ ಸುಂದರಿಯಾಗಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಇಸ್ರೇಲ್​ನಲ್ಲಿ ನಡೆದ ಸ್ಪರ್ಧೆಯನ್ನು ಲೈವ್​ ಸ್ಟ್ರೀಮ್​ನಲ್ಲಿ ಟೆಲಿಕಾಸ್ಟ್​ ಮಾಡಲಾಗಿತ್ತು. ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ಹರ್ನಾಜ್​ ಸಂಧು ಅವರಿಗೆ ಮೆಕ್ಸಿಕೊದ 2020ರ ಮಾಜಿ ವಿಶ್ವ ಸುಂದರಿ ಆಂಡ್ರಿಯಾ ಮೆಜಾ ಅವರು ಕಿರೀಟವನ್ನು ತೊಡಿಸಿದ್ದಾರೆ.

ಪರಾಗ್ವೆಯ ನಾಡಿಯಾ ಫೆರಾರಾ ಮತ್ತು ದಕ್ಷಿಣ ಆಫ್ರಿಕಾದ ಲಾಲೆಲಾ ಮ್ಸಾವೆಎ ಅವರನ್ನು ಹಿಂದಿಕ್ಕಿ ಹರ್ನಾಜ್​ ಸಂಧು ವಿಶ್ವ ಸುಂದರಿ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ.  ಈಮೂಲಕ ಭಾರತಕ್ಕೆ ಮೂರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಟ್ಟಿದ್ದಾರೆ. 1994ರಲ್ಲಿ ಸುಶ್ಮಿತಾ ಸೇನ್ ಮಿಸ್​ ಯುನಿವರ್ಸ್​ ಪಟ್ಟವನ್ನು ಹಾಗೂ 2000ರಲ್ಲಿ ಲಾರಾದತ್ತ ಮಿಸ್​ ಯುನಿವರ್ಸ್​ ಆಗಿ ಹೊರಹೊಮ್ಮಿದ್ದರು. ಅದರ ಬಳಿಕ ಈಗ ಹರ್ನಾಜ್​ ಸಂಧು ಭುವನಸುಂದರಿಯಾಗಿ ಹೊರಹೊಮ್ಮಿದ್ದಾರೆ.

ಹರ್ನಾಜ್​ ಸಂಧು ಅವರಿಗೆ ಸ್ಪರ್ಧೆಯಲ್ಲಿ ಮೊದಲ ಮೂರು ಸುತ್ತಿನ ಭಾಗವಾಗಿ ಇಂದು ಯುವತಿಯರು ಎದುರಿಸುತ್ತಿರುವ ಇತ್ತಡಗಳನ್ನು ಹೇಗೆ ಎದುರಿಸಬೇಕು? ಹಾಗೂ ನಿಮ್ಮ ಸಲಹೆಗಳೇನು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಹರ್ನಾಜ್​ ಸಂಧು ಇಂದಿನ ಯುವ ಜನತೆ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಅದು ಆತ್ಮವಿಶ್ವಾಸ ಅವರ ಅವರ ಮೇಲೆ ಇರುವ ನಂಬಿಕೆಯ ಕೊರತೆ. ಇತರರು ಏನೆಂದುಕೊಳ್ಳುತ್ತಾರೊ ಎನ್ನುವ ದುಗುಢ ಭಾವದಿಂದೇ ಇಂದಿಯ ಯುವಜನತೆ ತಾವು ಮಾಡುವ ಕೆಲಸದಿಂದ ವಿಮುಖರಾಗುತ್ತಿದ್ದಾರೆ ಎಂದರು. ಜತಗೆ ಸಲಹೆಯಾಗಿ  ಅದರ ಬದಲು ಬೇರೆಯವರೊಂದಿಗೆ ಹೊಂದಾಣಿಕೆ ಮಾಡುವುದನ್ನು ನಿಲ್ಲಿಸಿ, ನಿಮಗೇ ನಿಮ್ಮದೇ ಅದ ಜೀವನವಿದೆ, ಕನಸಿದೆ. ಅದರೆಡೆಗೆ ಗಮನ ನೀಡಿ. ಪ್ರಪಂಚದಲ್ಲಿ ಅನೇಕ ಸಂಗತಿಗಳು ನಡೆಯುತ್ತಿರುತ್ತವೆ. ಅದನ್ನು ಚರ್ಚಿಸಿ. ನಿಮ್ಮ ಕನಸಿಗೆ ನೀವೇ ಧ್ವನಿಯಾಗಬೇಕು.  ನನ್ನನ್ನು ನಾನು ಹೆಚ್ಚು ನಂಬುತ್ತೇನೆ ಅದರಿಂದಲೇ ನಾನು ಇಂದು ಈ ಸ್ಥಾನದಲ್ಲಿದ್ದೇನೆ ಎಂದು ಸಲಹೆ ನೀಡುವ ಮೂಲಕ ತೀರಪುಗಾರರ ಪ್ರಶ್ನೆಗೆ ಹರ್ನಾಜ್​ ಸಂಧು ಉತ್ತರಿಸಿದ್ದಾರೆ.

ಇದನ್ನೂ ಓದಿ:

Harnaaz Sandhu: ಮಿಸ್​ ಯುನಿವರ್ಸ್ 2021ರ ವಿಜೇತೆ ಹರ್ನಾಜ್ ಸಂಧು ಬ್ಯೂಟಿಫುಲ್​ ಗ್ಯಾಲರಿ

Published On - 9:51 am, Mon, 13 December 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ