AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haseen Dillruba Trailer: ಬದಲಾಯ್ತು ತಾಪ್ಸಿ ಪನ್ನು ಅವತಾರ; ಬೋಲ್ಡ್ ಲುಕ್​ ನೋಡಿ ಫ್ಯಾನ್ಸ್​ ಫಿದಾ

ತಾಪ್ಸಿ ಈ ಚಿತ್ರಕ್ಕಾಗಿ ಹಾಟ್​ ಅವತಾರ ತಾಳಿದ್ದಾರೆ. ಅಷ್ಟೇ ಅಲ್ಲ, ಅದನ್ನು ಅವರು ಸೂಕ್ತವಾಗಿ ನಿರ್ವಹಿಸಿದ್ದಾರೆ ಎಂಬುದು ಟ್ರೇಲರ್​ನಲ್ಲಿ ಗೊತ್ತಾಗುತ್ತದೆ. ‘ಮನ್​ಮರ್ಜಿಯಾ’​ ಸಿನಿಮಾದಲ್ಲಿಯೂ ತಾಪ್ಸಿ ಇದೇ ರೀತಿಯ ಬೋಲ್ಡ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Haseen Dillruba Trailer: ಬದಲಾಯ್ತು ತಾಪ್ಸಿ ಪನ್ನು ಅವತಾರ; ಬೋಲ್ಡ್ ಲುಕ್​ ನೋಡಿ ಫ್ಯಾನ್ಸ್​ ಫಿದಾ
ಬದಲಾಯ್ತು ತಾಪ್ಸಿ ಪನ್ನು ಅವತಾರ; ಬೋಲ್ಡ್ ಲುಕ್​ ನೋಡಿ ಫ್ಯಾನ್ಸ್​ ಫಿದಾ
TV9 Web
| Edited By: |

Updated on:Jun 11, 2021 | 7:43 PM

Share

ನಟಿ ತಾಪ್ಸಿ ಪನ್ನು ಸದಾ ಒಂದಿಲ್ಲೊಂದು ಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ಎದುರಾಗುತ್ತಾರೆ. ಈ ಬಾರಿ ಅವರು ಹಸೀನ್​ ದಿಲ್​ರುಬಾ ಚಿತ್ರಕ್ಕಾಗಿ ಹಾಟ್​ ಅವತಾರ ತಾಳಿದ್ದಾರೆ. ಇಂದು ಚಿತ್ರದ ಟ್ರೇಲರ್ ರಿಲೀಸ್​ ಆಗಿದ್ದು, ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಹಸೀನ್​ ದಿಲ್​ರುಬಾ’ ಚಿಕ್ಕ ನಗರದಲ್ಲಿ ನಡೆಯುವ ಕಥೆ. ಗಂಡನನ್ನು ಹತ್ಯೆ ಮಾಡಿದ ಆರೋಪ ತಾಪ್ಸಿ ವಿರುದ್ಧ ಕೇಳಿಬರುತ್ತದೆ. ತಾಪ್ಸಿ ಗಂಡನನ್ನು ಹತ್ಯೆ ಮಾಡಲು ಪಕ್ಕದ ಮನೆಯವನ ಜತೆ ಇಟ್ಟುಕೊಂಡ ಸಂಬಂಧ ಕಾರಣವೇ? ಎನ್ನುವ ಅನುಮಾನ ಬರುವ ರೀತಿಯಲ್ಲಿ ಟ್ರೇಲರ್​ ಹೆಣೆಯಲಾಗಿದೆ. ತಾಪ್ಸಿ ಗಂಡನ ಸಾವಿನ ನಂತರ, ಆಕೆಯ ಪ್ರಿಯಕರ ಕೂಡ ಕಾಣೆ ಆಗುತ್ತಾನೆ. ಇದಿಷ್ಟು ವಿಚಾರಗಳನ್ನು ಟ್ರೇಲರ್​ನಲ್ಲಿ ಹೇಳಲಾಗಿದ್ದು, ಪ್ರೇಕ್ಷಕರಿಗೆ ಸಾಕಷ್ಟು ನಿಗೂಢವಾಗಿ ಕಾಣುತ್ತದೆ.

ತಾಪ್ಸಿ ಈ ಚಿತ್ರಕ್ಕಾಗಿ ಹಾಟ್​ ಅವತಾರ ತಾಳಿದ್ದಾರೆ. ಅಷ್ಟೇ ಅಲ್ಲ, ಅದನ್ನು ಅವರು ಸೂಕ್ತವಾಗಿ ನಿರ್ವಹಿಸಿದ್ದಾರೆ ಎಂಬುದು ಟ್ರೇಲರ್​ನಲ್ಲಿ ಗೊತ್ತಾಗುತ್ತದೆ. ‘ಮನ್​ಮರ್ಜಿಯಾ’​ ಸಿನಿಮಾದಲ್ಲಿಯೂ ತಾಪ್ಸಿ ಇದೇ ರೀತಿಯ ಬೋಲ್ಡ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಟ್ರೆಲರ್​ ನೋಡಿದ ನಂತರದಲ್ಲಿ ಈ ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್​ ಇರೋದು ಸ್ಪಷ್ಟವಾಗುತ್ತದೆ. ವಿಕ್ರಾಂತ್​ ಮಾಸ್ಸಿ, ಹರ್ಷವರ್ಧನ್​ ರಾಣೆ ಕೂಡ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

‘ಮನ್​ಮರ್ಜಿಯಾ’​, ‘ಮೆಂಟಲ್​ ಹೈ ಕ್ಯಾ’ ಚಿತ್ರಕ್ಕೆ ಕಥೆ ಬರೆದ ಕನಿಕಾ ದಿಲ್ಲೋನ್​ ಈ ಚಿತ್ರಕ್ಕೂ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ‘ಹಸೀ ತೋ ಪಸೀ’ ಖ್ಯಾತಿ ವಿನಿಲ್​ ಮ್ಯಾಥೀವ್​ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಜುಲೈ 12ರಂದು ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ.

ಇದನ್ನೂ ಓದಿ: Taapsee Pannu: 66ನೇ ಫಿಲ್ಮ್​ ಫೇರ್​ ಪ್ರಶಸ್ತಿ; ಇರ್ಫಾನ್​ ಖಾನ್-ತಾಪ್ಸಿ ಪನ್ನು​ ಅತ್ಯುತ್ತಮ ನಟ-ನಟಿ!

Published On - 7:35 pm, Fri, 11 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ