AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haseen Dillruba Trailer: ಬದಲಾಯ್ತು ತಾಪ್ಸಿ ಪನ್ನು ಅವತಾರ; ಬೋಲ್ಡ್ ಲುಕ್​ ನೋಡಿ ಫ್ಯಾನ್ಸ್​ ಫಿದಾ

ತಾಪ್ಸಿ ಈ ಚಿತ್ರಕ್ಕಾಗಿ ಹಾಟ್​ ಅವತಾರ ತಾಳಿದ್ದಾರೆ. ಅಷ್ಟೇ ಅಲ್ಲ, ಅದನ್ನು ಅವರು ಸೂಕ್ತವಾಗಿ ನಿರ್ವಹಿಸಿದ್ದಾರೆ ಎಂಬುದು ಟ್ರೇಲರ್​ನಲ್ಲಿ ಗೊತ್ತಾಗುತ್ತದೆ. ‘ಮನ್​ಮರ್ಜಿಯಾ’​ ಸಿನಿಮಾದಲ್ಲಿಯೂ ತಾಪ್ಸಿ ಇದೇ ರೀತಿಯ ಬೋಲ್ಡ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Haseen Dillruba Trailer: ಬದಲಾಯ್ತು ತಾಪ್ಸಿ ಪನ್ನು ಅವತಾರ; ಬೋಲ್ಡ್ ಲುಕ್​ ನೋಡಿ ಫ್ಯಾನ್ಸ್​ ಫಿದಾ
ಬದಲಾಯ್ತು ತಾಪ್ಸಿ ಪನ್ನು ಅವತಾರ; ಬೋಲ್ಡ್ ಲುಕ್​ ನೋಡಿ ಫ್ಯಾನ್ಸ್​ ಫಿದಾ
TV9 Web
| Edited By: |

Updated on:Jun 11, 2021 | 7:43 PM

Share

ನಟಿ ತಾಪ್ಸಿ ಪನ್ನು ಸದಾ ಒಂದಿಲ್ಲೊಂದು ಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ಎದುರಾಗುತ್ತಾರೆ. ಈ ಬಾರಿ ಅವರು ಹಸೀನ್​ ದಿಲ್​ರುಬಾ ಚಿತ್ರಕ್ಕಾಗಿ ಹಾಟ್​ ಅವತಾರ ತಾಳಿದ್ದಾರೆ. ಇಂದು ಚಿತ್ರದ ಟ್ರೇಲರ್ ರಿಲೀಸ್​ ಆಗಿದ್ದು, ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಹಸೀನ್​ ದಿಲ್​ರುಬಾ’ ಚಿಕ್ಕ ನಗರದಲ್ಲಿ ನಡೆಯುವ ಕಥೆ. ಗಂಡನನ್ನು ಹತ್ಯೆ ಮಾಡಿದ ಆರೋಪ ತಾಪ್ಸಿ ವಿರುದ್ಧ ಕೇಳಿಬರುತ್ತದೆ. ತಾಪ್ಸಿ ಗಂಡನನ್ನು ಹತ್ಯೆ ಮಾಡಲು ಪಕ್ಕದ ಮನೆಯವನ ಜತೆ ಇಟ್ಟುಕೊಂಡ ಸಂಬಂಧ ಕಾರಣವೇ? ಎನ್ನುವ ಅನುಮಾನ ಬರುವ ರೀತಿಯಲ್ಲಿ ಟ್ರೇಲರ್​ ಹೆಣೆಯಲಾಗಿದೆ. ತಾಪ್ಸಿ ಗಂಡನ ಸಾವಿನ ನಂತರ, ಆಕೆಯ ಪ್ರಿಯಕರ ಕೂಡ ಕಾಣೆ ಆಗುತ್ತಾನೆ. ಇದಿಷ್ಟು ವಿಚಾರಗಳನ್ನು ಟ್ರೇಲರ್​ನಲ್ಲಿ ಹೇಳಲಾಗಿದ್ದು, ಪ್ರೇಕ್ಷಕರಿಗೆ ಸಾಕಷ್ಟು ನಿಗೂಢವಾಗಿ ಕಾಣುತ್ತದೆ.

ತಾಪ್ಸಿ ಈ ಚಿತ್ರಕ್ಕಾಗಿ ಹಾಟ್​ ಅವತಾರ ತಾಳಿದ್ದಾರೆ. ಅಷ್ಟೇ ಅಲ್ಲ, ಅದನ್ನು ಅವರು ಸೂಕ್ತವಾಗಿ ನಿರ್ವಹಿಸಿದ್ದಾರೆ ಎಂಬುದು ಟ್ರೇಲರ್​ನಲ್ಲಿ ಗೊತ್ತಾಗುತ್ತದೆ. ‘ಮನ್​ಮರ್ಜಿಯಾ’​ ಸಿನಿಮಾದಲ್ಲಿಯೂ ತಾಪ್ಸಿ ಇದೇ ರೀತಿಯ ಬೋಲ್ಡ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಟ್ರೆಲರ್​ ನೋಡಿದ ನಂತರದಲ್ಲಿ ಈ ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್​ ಇರೋದು ಸ್ಪಷ್ಟವಾಗುತ್ತದೆ. ವಿಕ್ರಾಂತ್​ ಮಾಸ್ಸಿ, ಹರ್ಷವರ್ಧನ್​ ರಾಣೆ ಕೂಡ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

‘ಮನ್​ಮರ್ಜಿಯಾ’​, ‘ಮೆಂಟಲ್​ ಹೈ ಕ್ಯಾ’ ಚಿತ್ರಕ್ಕೆ ಕಥೆ ಬರೆದ ಕನಿಕಾ ದಿಲ್ಲೋನ್​ ಈ ಚಿತ್ರಕ್ಕೂ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ‘ಹಸೀ ತೋ ಪಸೀ’ ಖ್ಯಾತಿ ವಿನಿಲ್​ ಮ್ಯಾಥೀವ್​ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಜುಲೈ 12ರಂದು ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ.

ಇದನ್ನೂ ಓದಿ: Taapsee Pannu: 66ನೇ ಫಿಲ್ಮ್​ ಫೇರ್​ ಪ್ರಶಸ್ತಿ; ಇರ್ಫಾನ್​ ಖಾನ್-ತಾಪ್ಸಿ ಪನ್ನು​ ಅತ್ಯುತ್ತಮ ನಟ-ನಟಿ!

Published On - 7:35 pm, Fri, 11 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್