AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಥುರಾ ಜನರ ಸಹಾಯಕ್ಕೆ ನಿಂತ ನಟಿ ಹೇಮಾ ಮಾಲಿನಿ; ಅವರು ಮಾಡಿದ ಸಹಾಯ ಏನು?

ಮಥುರಾ ಹೇಮಾ ಮಾಲಿನಿ ಅವರ ಲೋಕಸಭಾ ಕ್ಷೇತ್ರ. ಈ ಕಾರಣಕ್ಕೆ ಅವರು ಜಿಲ್ಲೆಯ ಬ್ರಜ್​ ಭಾಗದ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಈ ಭಾಗದಲ್ಲಿ ಅವರು ಏಳು ಆಕ್ಸಿಜನ್​ ಉತ್ಪಾದನಾ ಮಷಿನ್​ಗಳನ್ನು ಸ್ಥಾಪಿಸಿದ್ದಾರೆ.

ಮಥುರಾ ಜನರ ಸಹಾಯಕ್ಕೆ ನಿಂತ ನಟಿ ಹೇಮಾ ಮಾಲಿನಿ; ಅವರು ಮಾಡಿದ ಸಹಾಯ ಏನು?
ಹೇಮಾ ಮಾಲಿನಿ
ರಾಜೇಶ್ ದುಗ್ಗುಮನೆ
|

Updated on: May 19, 2021 | 9:50 PM

Share

ಕೊರೊನಾ ಸಂಕಷ್ಟದಲ್ಲಿರುವವರ ಸಹಾಯಕ್ಕೆ ಚಿತ್ರರಂಗದ ಸ್ಟಾರ್ಸ್​ಗಳು ಮುಂದೆ ಬಂದಿದ್ದಾರೆ. ಸ್ಯಾಂಡಲ್​ವುಡ್​, ಬಾಲಿವುಡ್, ಟಾಲಿವುಡ್​ ಸೇರಿ ಎಲ್ಲಾ ಚಿತ್ರರಂಗದವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈಗ ಬಾಲಿವುಡ್​ ನಟಿ ಹಾಗೂ ಸಂಸದೆ ಹೇಮಾ ಮಾಲಿನಿ ಕೂಡ ಕೊವಿಡ್​ ಸಂಕಷ್ಟದಲ್ಲಿರುವವರ ಸಹಾಯಕ್ಕೆ ನಿಂತಿದ್ದಾರೆ. ಬುಧವಾರ ಅವರು ಮಥುರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಆಕ್ಸಿಜನ್ ವರ್ಧಕ ಯಂತ್ರವನ್ನು ಅಳವಡಿಸಿದ್ದಾರೆ.

ಮಥುರಾ ಹೇಮಾ ಮಾಲಿನಿ ಅವರ ಲೋಕಸಭಾ ಕ್ಷೇತ್ರ. ಈ ಕಾರಣಕ್ಕೆ ಅವರು ಜಿಲ್ಲೆಯ ಬ್ರಜ್​ ಭಾಗದ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಈ ಭಾಗದಲ್ಲಿ ಅವರು ಏಳು ಆಕ್ಸಿಜನ್​ ಉತ್ಪಾದನಾ ಮಷಿನ್​ಗಳನ್ನು ಸ್ಥಾಪಿಸಿದ್ದಾರೆ. ಇದು ಕೊವಿಡ್​ ರೋಗಿಗಳಿಗೆ ಸರಿಯಾದ ಸಮಯದಲ್ಲಿ ಆಮ್ಲಜನಕ ದೊರೆಯಲು ಸಹಕಾರಿಯಾಗಲಿದೆ.

ಬ್ರಜ್ ನಿವಾಸಿಗಳಿಗೆ ಸಹಾಯವಾಗಲು ಮಥುರಾ ಜಿಲ್ಲೆಯಲ್ಲಿ 7 ಆಕ್ಸಿಜನ್ ವರ್ಧಕ ಯಂತ್ರವನ್ನು ಸ್ಥಾಪಿಸಿದ್ದೇನೆ. ಮಥುರಾ ಜಿಲ್ಲೆಯ ಗ್ರಾಮೀಣ ಪ್ರದೇಶದ ಬ್ರಜ್ ನಿವಾಸಿಗಳಿಗೆ ಮತ್ತಷ್ಟು ಆಮ್ಲಜನಕ ವರ್ಧಕ ಯಂತ್ರವನ್ನು ಶೀಘ್ರದಲ್ಲೇ ಅರ್ಪಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಕಷ್ಟದ ಸಮಯದಲ್ಲಿ ಜನರ ಸಹಾಯಕ್ಕೆ ನಿಂತಿದ್ದಾರೆ.

ಪ್ರಿಯಾಂಕಾ ಚೋಪ್ರಾ, ಅನುಷ್ಕಾ, ಶರ್ಮ, ಅಮಿತಾಭ್ ಬಚ್ಚನ್​, ಸೋನು ಸೂದ್​, ವರುಣ್​ ಧವನ್​ ಅಕ್ಷಯ್​ ಕುಮಾತ್​ ಸೇರಿ ಸಾಕಷ್ಟು ಬಾಲಿವುಡ್​ ಸೆಲೆಬ್ರಿಟಿಗಳು ಕೊವಿಡ್​ ಸಂಕಷ್ಟದ ಸಮಯದಲ್ಲಿ ಜನರ ಸಹಾಯಕ್ಕೆ ನಿಂತಿದ್ದಾರೆ.

ನಟ ಸೋನು ಸೂದ್​ ಅವರಂತೂ ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ. ಕಷ್ಟ ಎಂದು ಹೇಳಿದ ಎಲ್ಲರಿಗೂ ಅವರು ಸಹಾಯ ಮಾಡುತ್ತಿದ್ದಾರೆ. ಸದ್ಯದ ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಅದರಲ್ಲೂ ಆಸ್ಪತ್ರೆಯ ಬೆಡ್​ ಸಿಗದೇ ಒದ್ದಾಡುತ್ತಿರುವ, ಆಕ್ಸಿಜನ್​ ಸಿಲಿಂಡರ್​ ಕೊರತೆ ಅನುಭವಿಸುತ್ತಿರುವ ಕೊವಿಡ್​ ಸೋಂಕಿತರಿಗಾಗಿ ಸೋನು ಸೂದ್​ ಹಲವು ಬಗೆಯಲ್ಲಿ ನೆರವು ನೀಡುತ್ತಿದ್ದಾರೆ. ಕೊರೊನಾದಿಂದ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್​ ಪ್ಲಾಂಟ್​ಗಳನ್ನು ಸ್ಥಾಪಿಸಲು ಸೋನು ಸೂದ್​ ತೀರ್ಮಾನಿಸಿದ್ದರು. ಅದಕ್ಕಾಗಿ ಅವರು ಆಕ್ಸಿಜನ್​ ಪ್ಲಾಂಟ್​ಗಳನ್ನು ಫ್ರಾನ್ಸ್​ನಿಂದ ಆಮದು ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು.

ಇದನ್ನೂ ಓದಿ: Sonu Sood: ಸೋನು ಸೂದ್​ ಹೆಸರಲ್ಲಿ ಮಹಾಮೋಸ; ಕೊರೊನಾ ಕಾಲದಲ್ಲೂ ದುಡ್ಡು ಕಬಳಿಸಿದ ಕಿಡಿಗೇಡಿಗಳು

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?