AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪ್ರಯತ್ನದೊಂದಿಗೆ ರಂಜಿಸಲು ಬಂದ ‘ಖುಷಿ 2’ ಗೀತೆ; ಲಕ್ಷಾಂತರ ವೀಕ್ಷಣೆ ಕಂಡ ಸಂತಸ

ಪ್ರತಿ ದಿನ ಹೊಸ ಹೊಸ ಹಾಡುಗಳು ಬಿಡುಗಡೆ ಆಗುತ್ತವೆ. ಆದರೆ ಹಿಟ್​ ಆಗುವ ಗೀತೆಗಳ ಸಂಖ್ಯೆ ಕಡಿಮೆ. ಏನಾದರೂ ಹೊಸದಾಗಿ ಪ್ರಯತ್ನಿಸಿದಾಗಲೇ ಜನರು ಜೈಕಾರ ಹಾಕೋದು.

ಹೊಸ ಪ್ರಯತ್ನದೊಂದಿಗೆ ರಂಜಿಸಲು ಬಂದ ‘ಖುಷಿ 2’ ಗೀತೆ; ಲಕ್ಷಾಂತರ ವೀಕ್ಷಣೆ ಕಂಡ ಸಂತಸ
‘ಖುಷಿ 2’ ಕನ್ನಡ ಸಾಂಗ್​
TV9 Web
| Edited By: |

Updated on: Feb 09, 2022 | 4:08 PM

Share

ಸಿನಿಮಾಗಳಲ್ಲಿ ಸಂಗೀತಕ್ಕೆ ದೊಡ್ಡ ಸ್ಥಾನವಿದೆ. ಹಾಡುಗಳ ಕಾರಣದಿಂದಲೇ ಸಿನಿಮಾ ಸೂಪರ್​ ಹಿಟ್​ ಆಗಿದ್ದಕ್ಕೆ ಸಾಕಷ್ಟು ಉದಾಹರಣೆ ಸಿಗುತ್ತದೆ. ಸಂಗೀತದ ಪ್ರಕಾರಗಳು ಹಲವು. ಅದಕ್ಕೆ ಭಾಷೆ ಮತ್ತು ಗಡಿಯ ಹಂಗು ಕೂಡ ಇಲ್ಲ. ಸೋಶಿಯಲ್​ ಮೀಡಿಯಾ ಬಳಕೆ ಹೆಚ್ಚಾದ ಬಳಿಕ ಕೆಲವು ಪ್ರಾದೇಶಿಕ ಗೀತೆಗಳು ಜಾಗತ್ತಿಕ ಮಟ್ಟದಲ್ಲಿ ಫೇಮಸ್​ ಆಗಿದ್ದುಂಟು. ಭಾರತೀಯ ಚಿತ್ರರಂಗದಲ್ಲಿ ಸ್ವತಂತ್ರ ಸಂಗೀತಗಾರರ ಸಂಖ್ಯೆಗೇನೂ ಕೊರತೆ ಇಲ್ಲ. ಅದೇ ರೀತಿ ಕನ್ನಡದಲ್ಲೂ ಕೆಲವು ಸಂಗೀತ ನಿರ್ದೇಶಕರು ಸಿನಿಮಾಗಳ ಹೊರತಾಗಿ ಸ್ವತಂತ್ರವಾಗಿ ಗುರುತಿಸಿಕೊಂಡಿದ್ದಾರೆ. ಮ್ಯೂಸಿಕ್​ ವಿಡಿಯೋಗಳ ಮೂಲಕ ಹಲವರು ಜನಪ್ರಿಯತೆ ಪಡೆದಿದ್ದಾರೆ. ಏನಾದರೂ ಹೊಸ ಪ್ರಯತ್ನ ಮಾಡಬೇಕು ಎಂಬ ಹಂಬಲದೊಂದಿಗೆ ಸಂಗೀತ ನಿರ್ದೇಶಕ ಹೇಮಂತ್ ಜೋಯಿಸ್​ ಅವರು ‘ಖುಷಿ 2’ ಗೀತೆ ಸಿದ್ಧಪಡಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗಿರುವ ಈ ಹಾಡು ಲಕ್ಷಾಂತರ ವೀವ್ಸ್​ ಪಡೆಯುವ ಮೂಲಕ ಜನರಿಂದ ಮೆಚ್ಚುಗೆ ಗಳಿಸಿದೆ.

ಪ್ರತಿ ದಿನ ಹೊಸ ಹೊಸ ಹಾಡುಗಳು ಬಿಡುಗಡೆ ಆಗುತ್ತವೆ. ಆದರೆ ಹಿಟ್​ ಆಗುವ ಗೀತೆಗಳ ಸಂಖ್ಯೆ ಕಡಿಮೆ. ಏನಾದರೂ ಹೊಸದಾಗಿ ಪ್ರಯತ್ನಿಸಿದಾಗಲೇ ಜನರು ಜೈಕಾರ ಹಾಕೋದು. ಆ ನಿಟ್ಟಿಲ್ಲಿ ಸಂಗೀತ ನಿರ್ದೇಶಕ ಹೇಮಂತ್ ಜೋಯಿಸ್ ಅವರು ಪ್ರಯತ್ನ ಮಾಡಿದ್ದಾರೆ. ಇದೊಂದು ಇಡಿಎಂ ಸಾಂಗ್​ ಎಂದು ಅವರು ಹೇಳಿಕೊಂಡಿದ್ದಾರೆ. EDM ಸಾಂಗ್, ಅಂದರೆ ಎಲೆಕ್ಟ್ರಾನಿಕ್ ಡ್ಯಾನ್ಸ್ ಮ್ಯೂಸಿಕ್ ಹಾಡು. ಇದರಲ್ಲಿ ಸಾಹಿತ್ಯಕ್ಕಿಂತ ಹೆಚ್ಚಾಗಿ ಮ್ಯೂಸಿಕ್ ಇರುತ್ತದೆ. ಆ ಮೂಲಕ ಜನರನ್ನು ಸೆಳೆಯುವ ಪ್ರಯತ್ನ ಮಾಡಲಾಗಿದೆ.

ಸ್ವತಂತ್ರ ಸಂಗೀತ ನಿರ್ದೇಶಕರಾಗಿರುವ ಹೇಮಂತ್ ಜೋಯಿಸ್ ಅವರು ಈ ಮ್ಯೂಸಿಕ್​ ವಿಡಿಯೋವನ್ನು ತಮ್ಮದೇ ಯೂಟ್ಯೂಬ್​ ಚಾನೆಲ್​ ಮೂಲಕ ರಿಲೀಸ್ ಮಾಡಿದ್ದಾರೆ. ಈ ಗೀತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತಿರುವುದು ಅವರ ಸಂತಸಕ್ಕೆ ಕಾರಣ ಆಗಿದೆ.

ಈ ಹಿಂದೆ ಬಿಡುಗಡೆ ಆಗಿದ್ದ ‘ಖುಷಿ’ ಹಾಡಿನ ಸೀಕ್ವೆಲ್ ಆಗಿ ‘ಖುಷಿ 2’ ಮೂಡಿಬಂದಿದೆ. EDM ಪ್ರಕಾರದ ಕಾರಣದಿಂದ ಇದು ಕೊಂಚ ಸ್ಪಷಲ್​ ಎನಿಸಿಕೊಂಡಿದೆ. ಅಜ್ಜಿ ಹಾಗೂ ಮೊಮ್ಮಗನ ನಡುವೆ ಇರುವ ಬಾಂಧವ್ಯದ ಮಹತ್ವ ಸಾರುವ ಈ ಗೀತೆಯನ್ನು ಹಲವರು ಮೆಚ್ಚಿಕೊಂಡಿದ್ದಾರೆ.

‘ಜನರು ಮೆಚ್ಚುವ ವಿದೇಶಿ ಹಾಡುಗಳು EDM ಫಾರ್ಮೆಟ್​ನಲ್ಲಿ ಇರುತ್ತವೆ. ನಾವು ಕೂಡ ಯಾಕೆ EDM ಒಮ್ಮೆ ಟ್ರೈ ಮಾಡಬಾರದು ಅಂತ ಯೋಚಿಸಿ ‘ಖುಷಿ 2’ ಹಾಡು ರಿಲೀಸ್ ಮಾಡಿದೆವು. ಪ್ರತಿಯೊಬ್ಬರಿಗೂ ಇದು ಇಷ್ಟವಾಗುತ್ತಿದೆ. ಕನ್ನಡದಲ್ಲಿ ಈ ರೀತಿ ಹಾಡು ಮಾಡಿರೋದು ಮೊದಲ ಬಾರಿಗೆ ಅಂದರೂ ತಪ್ಪಿಲ್ಲ’ ಎಂದಿದ್ದಾರೆ ಹೇಮಂತ್ ಜೋಯಿಸ್.

ರಕ್ಷಿತ್ ತೀರ್ಥಹಳ್ಳಿ ‘ಖುಷಿ 2’ ಹಾಡನ್ನು ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಈ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದರೆ, ಇಂಗ್ಲಿಷ್​ನಲ್ಲಿ ಚಿನ್ಮಯ್ ಬರೆದಿದ್ದಾರೆ. ಚೇತನ್ ನಾಯ್ಕ್ ಈ ಗೀತೆಗೆ ಧ್ವನಿಯಾಗಿದ್ದಾರೆ. ಹೇಮಂತ್ ಜೋಯಿಸ್ ಅವರು ಸಂಗೀತ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ. ಹೇಮಂತ್ ಜೋಯಿಸ್ ಅವರ ಜೊತೆಗೆ ಗುಬ್ಬಿ ವೀರಣ್ಣ ಅವರ ಕುಟುಂಬದ ಕುಡಿ ಸುಂದರಶ್ರೀ ನಟಿಸಿದ್ದಾರೆ.

ಇದನ್ನೂ ಓದಿ:

ವಿಜಯ್​ ಪ್ರಕಾಶ್ ಕಂಠದಲ್ಲಿ ಮೂಡಿಬಂತು ‘ಆರಾಮ್ಸೆ’ ಮ್ಯೂಸಿಕ್​ ವಿಡಿಯೋ; ಏನಿದರ ವಿಶೇಷ?

ಚಂದನ್​ ಶೆಟ್ಟಿ ಹೊಸ ಸಾಂಗ್​ ‘ಲಕ ಲಕ ಲ್ಯಾಂಬೋರ್ಗಿನಿ’ ಹೇಗಿದೆ? ಒಂದೇ ದಿನಕ್ಕೆ ಮಿಲಿಯನ್​ ವೀಕ್ಷಣೆ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು