AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇರಾ ಫೇರಿ ನಿರ್ಮಾಪಕರಿಂದ ಅಪಮಾನ; ನಿರ್ದೇಶಕ ಪ್ರಿಯದರ್ಶನ್ ಬೇಸರ

ಬಾಲಿವುಡ್‌ನ ಐಕಾನಿಕ್ ಕಾಮಿಡಿ ಚಿತ್ರ 'ಹೇರಾ ಫೇರಿ 3' ಚಿತ್ರದ ನಿರ್ದೇಶನದಿಂದ ಪ್ರಿಯದರ್ಶನ್ ಹೊರನಡೆದಿದ್ದಾರೆ. ನಿರ್ಮಾಪಕ ಫಿರೋಜ್ ನಡಿಯಾಡ್ವಾಲಾ ತಮಗೆ ಮಾಡಿದ ಅಪಮಾನಗಳೇ ಇದಕ್ಕೆ ಕಾರಣ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಇದರೊಂದಿಗೆ, ಹಕ್ಕುಗಳ ವಿಚಾರವಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಕಾನೂನು ಹೋರಾಟದಿಂದಾಗಿ ಈ ಸಿನಿಮಾ ಸದ್ಯಕ್ಕೆ ಸೆಟ್ಟೇರುವುದು ಅನುಮಾನ ಎನ್ನಲಾಗಿದೆ.

ಹೇರಾ ಫೇರಿ ನಿರ್ಮಾಪಕರಿಂದ ಅಪಮಾನ; ನಿರ್ದೇಶಕ ಪ್ರಿಯದರ್ಶನ್ ಬೇಸರ
ಹೇರಾ ಫೇರಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 04, 2026 | 11:11 AM

Share

ಮುಖ್ಯಾಂಶಗಳು

  • ಪ್ರಿಯದರ್ಶನ್ ಜೊತೆ ಸಿನಿಮಾ ಮಾಡದಂತೆ ಅಕ್ಷಯ್ ಕುಮಾರ್‌ಗೆ ಹೇಳಿದ್ದ ನಿರ್ಮಾಪಕ ಫಿರೋಜ್ ನಡಿಯಾಡ್ವಾಲಾ
  • ಅಕ್ಷಯ್, ಸುನಿಲ್ ಶೆಟ್ಟಿ ಹಾಗೂ ಪರೇಶ್ ರಾವಲ್ ಆಸೆಪಟ್ಟರೂ ಕೈಬಿಡಬೇಕಾಗಿ ಬಂದ ‘ಹೇರಾ ಫೇರಿ 3’ ಕನಸು
  • ಕೋರ್ಟ್ ಮೆಟ್ಟಿಲೇರಿದ ದಕ್ಷಿಣ ಭಾರತದ ಪ್ರೊಡಕ್ಷನ್ ಹೌಸ್; ಸಿನಿಮಾ ಹಕ್ಕುಗಳ ಕಾನೂನು ಹೋರಾಟದ ಅಸಲಿ ಕಥೆ

‘ಹೇರಾ ಫೇರಿ 3’ ಸಿನಿಮಾಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಈ ಚಿತ್ರದ ನಿರ್ದೇಶನದಿಂದ ಪ್ರಿಯದರ್ಶನ್ ಹೊರನಡೆದಿದ್ದಾರೆ. ಕಾನೂನು ಸಂಘರ್ಷಗಳ ಕಾರಣದಿಂದ ಈ ಸಿನಿಮಾ ಥಿಯೇಟರ್‌ಗೆ ಬರುವುದು ಅನುಮಾನ ಎಂದು ಅವರು ಹೇಳಿದ್ದಾರೆ. ಈಗ ಅವರು ನಿರ್ಮಾಪಕ ಫಿರೋಜ್ ನಡಿಯಾಡ್ವಾಲಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಪ್ರಿಯದರ್ಶನ್ ಜೊತೆ ಸಿನಿಮಾ ಮಾಡಬೇಡಿ ಎಂದಿದ್ದ ನಿರ್ಮಾಪಕ

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಿಯದರ್ಶನ್ ತಮ್ಮ ಅಳಲು ತೋಡಿಕೊಂಡಿದ್ದಾರೆ. ನಿರ್ಮಾಪಕ ಫಿರೋಜ್ ತಮಗೆ ಹಲವು ಬಾರಿ ಅಪಮಾನ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ‘ಪ್ರಿಯದರ್ಶನ್ ಜೊತೆ ಎಂದಿಗೂ ಹೇರಾ ಫೇರಿ 3 ಮಾಡಬೇಡಿ ಎಂದು ಫಿರೋಜ್ ಅವರು ಅಕ್ಷಯ್ ಕುಮಾರ್‌ಗೆ ಹೇಳಿದ್ದರು. ನಾನು ಮಾಡಿದ ಮೊದಲ ಭಾಗದ ಎಡಿಟಿಂಗ್ ಕಳಪೆಯಾಗಿತ್ತು ಎಂದು ಫಿರೋಜ್ ಟೀಕಿಸಿದ್ದರು. ನಾನು ಮಾಡಿದ 5 ಗಂಟೆಯ ಸಿನಿಮಾವನ್ನು ತಾವೇ ಎಡಿಟ್ ಮಾಡಿದ್ದಾಗಿ ಅವರು ಹೇಳಿಕೊಂಡಿದ್ದರು’ ಎಂದು ಪ್ರಿಯದರ್ಶನ್ ನೆನಪಿಸಿಕೊಂಡಿದ್ದಾರೆ.

ದೊಡ್ಡ ಸಿನಿಮಾ ಮಾಡುವ ಆಸೆ ಇತ್ತು

ಈ ಫ್ರಾಂಚೈಸಿಯನ್ನು ದೇಶದ ದೊಡ್ಡ ಸಿನಿಮಾವನ್ನಾಗಿ ಮಾಡುವ ಆಸೆ ತಮಗಿತ್ತು ಎಂದು ಪ್ರಿಯದರ್ಶನ್ ಹೇಳಿದ್ದಾರೆ. ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಮತ್ತು ಪರೇಶ್ ರಾವಲ್ ಅವರ ಕೋರಿಕೆಯ ಮೇರೆಗೆ ಅವರು ಮೂರನೇ ಭಾಗಕ್ಕೆ ಒಪ್ಪಿಕೊಂಡಿದ್ದರು. ಕಥೆ ಕೇಳಿ ನಟರೆಲ್ಲರೂ ಉತ್ಸುಕರಾಗಿದ್ದರು. ಆದರೆ ಈಗಿನ ಪರಿಸ್ಥಿತಿಯಲ್ಲಿ ಸಿನಿಮಾ ಸೆಟ್ಟೇರುವುದು ಕಷ್ಟ ಎಂದು ಪ್ರಿಯದರ್ಶನ್ ತಿಳಿಸಿದ್ದಾರೆ. ತಾವಿಲ್ಲದಿದ್ದರೂ ಪರವಾಗಿಲ್ಲ, ಆದರೆ ಕಾನೂನು ಮತ್ತು ವೈಯಕ್ತಿಕ ಭಿನ್ನಾಭಿಪ್ರಾಯಗಳಿಂದ ಸಿನಿಮಾ ಬರುವುದು ಅನುಮಾನ ಎಂದಿದ್ದಾರೆ.

ಇದನ್ನೂ ಓದಿ: ‘ಹೇರಾ ಫೇರಿ 3’ ಚಿತ್ರ ಸೆಟ್ಟೇರೋದೇ ಡೌಟ್; ಅಕ್ಷಯ್ ಜೊತೆ ಬೇರೆ ಸಿನಿಮಾ ಶುರು

‘ಹೇರಾ ಫೇರಿ 3’ ಚಿತ್ರಕ್ಕೆ ಕಾಡುತ್ತಿರುವ ಸಮಸ್ಯೆಗಳೇನು?

ಈ ಸಿನಿಮಾದ ಹಕ್ಕುಗಳ ವಿಚಾರವಾಗಿ ಸದ್ಯ ಕಾನೂನು ಹೋರಾಟ ನಡೆಯುತ್ತಿದೆ. ದಕ್ಷಿಣ ಭಾರತದ ಪ್ರೊಡಕ್ಷನ್ ಹೌಸ್ ‘ಸೆವೆನ್ ಆರ್ಟ್ಸ್ ಇಂಟರ್ನ್ಯಾಷನಲ್’ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದೆ. ಫಿರೋಜ್ ನಡಿಯಾಡ್ವಾಲಾ ಅವರಿಗೆ ಕೇವಲ ಮಲಯಾಳಂನ ‘ರಾಮ್‌ಜೀ ರಾವ್ ಸ್ಪೀಕಿಂಗ್’ ಚಿತ್ರವನ್ನು ರಿಮೇಕ್ ಮಾಡಲು ಮಾತ್ರ ಹಕ್ಕು ಇತ್ತು ಎಂದು ಸಂಸ್ಥೆ ವಾದಿಸಿದೆ. ಆದರೆ ನಿರ್ಮಾಪಕರು ನಿಯಮ ಮೀರಿ ಎರಡನೇ ಭಾಗ ಮಾಡಿದರು. ಈಗ ಮೂರನೇ ಭಾಗದ ಹಕ್ಕನ್ನು ಅಕ್ಷಯ್ ಕುಮಾರ್ ಅವರ ಸಂಸ್ಥೆಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:11 am, Sat, 4 July 26

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ