AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ‘ಪಠಾಣ್​’ ಚಿತ್ರದ ಕಲೆಕ್ಷನ್ ಬೀಟ್ ಮಾಡಲು ರೆಡಿ ಆಗಿವೆ ಈ ಸಿನಿಮಾಗಳು

‘ಪಠಾಣ್​’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಭಾರತದ ಕಲೆಕ್ಷನ್ 400 ಕೋಟಿ ರೂಪಾಯಿ ದಾಟಿದೆ. ವಿಶ್ವ ಮಟ್ಟದಲ್ಲಿ ಚಿತ್ರದ ಕಲೆಕ್ಷನ್ 700 ಕೋಟಿ ರೂಪಾಯಿ ಆಗಿದೆ.

ಈ ವರ್ಷ ‘ಪಠಾಣ್​’ ಚಿತ್ರದ ಕಲೆಕ್ಷನ್ ಬೀಟ್ ಮಾಡಲು ರೆಡಿ ಆಗಿವೆ ಈ ಸಿನಿಮಾಗಳು
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on:Feb 07, 2023 | 11:31 AM

Share

ಒಟಿಟಿ ಜಗತ್ತು ವಿಸ್ತಾರಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಿನಿಮಾಗಳು ಒಳ್ಳೆಯ ಕಲೆಕ್ಷನ್ ಮಾಡುವುದಿಲ್ಲ ಎನ್ನುವ ನಂಬಿಕೆ ಇತ್ತು. ಆದರೆ, ಹಲವು ಚಿತ್ರಗಳು ಈ ನಂಬಿಕೆಯನ್ನು ಸುಳ್ಳು ಮಾಡುತ್ತಿವೆ. 2022 ಬಾಲಿವುಡ್​ಗೆ ಅಷ್ಟು ಉತ್ತಮವಾಗಿರಲಿಲ್ಲ. ಆದರೆ, 2023ರ ಆರಂಭದಲ್ಲೇ ಬಾಲಿವುಡ್​ಗೆ ದೊಡ್ಡ ಯಶಸ್ಸು ಸಿಕ್ಕಿದೆ. ‘ಪಠಾಣ್​’ ಚಿತ್ರದಿಂದ (Pathaan Movie) ದೊಡ್ಡ ಗೆಲುವು ಒಲಿದಿದೆ. ಈ ಬಗ್ಗೆ ಅನೇಕರಿಗೆ ಖುಷಿ ಇದೆ. ‘ಕೆಜಿಎಫ್​ 2’ (KGF 2 Movie) ಮಾಡಿದ ದಾಖಲೆಗಳನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಈ ದಾಖಲೆಯನ್ನು ‘ಪಠಾಣ್​’ ಸಿನಿಮಾ ಮುರಿದಿದೆ. ಈಗ ‘ಪಠಾಣ್ ದಾಖಲೆಯನ್ನು ಮುರಿಯಲು ಹಲವು ಸಿನಿಮಾಗಳು ರೆಡಿ ಇವೆ.

‘ಪಠಾಣ್​’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಭಾರತದ ಕಲೆಕ್ಷನ್ 400 ಕೋಟಿ ರೂಪಾಯಿ ದಾಟಿದೆ. ವಿಶ್ವ ಮಟ್ಟದಲ್ಲಿ ಚಿತ್ರದ ಕಲೆಕ್ಷನ್ 700 ಕೋಟಿ ರೂಪಾಯಿ ಆಗಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಸಿನಿಮಾ ಭಾರತದ ಗಳಿಕೆಯಲ್ಲಿ ‘ಕೆಜಿಎಫ್ 2’ ಚಿತ್ರವನ್ನು ಹಿಂದಿಕ್ಕುವ ಸಾಧ್ಯತೆ ಇದೆ. ಈಗ ‘ಪಠಾಣ್​’ ಚಿತ್ರದ ರೆಕಾರ್ಡ್​ ಮುರಿಯಲು ಕೆಲವು ಸಿನಿಮಾಗಳು ರೆಡಿ ಆಗಿವೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಹಾಗೂ ‘ಡಂಕಿ’ ಚಿತ್ರಗಳು ಈ ವರ್ಷ ತೆರೆಗೆ ಬರುತ್ತಿವೆ. ‘ಪಠಾಣ್​’ ಹಿಟ್ ಆಗಿರುವುದರಿಂದ ಅವರ ನಟನೆಯ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಾಗುತ್ತದೆ. ಹೀಗಾಗಿ, ಈ ಎರಡೂ ಚಿತ್ರಗಳು ಅಬ್ಬರದ ಕಲೆಕ್ಷನ್ ಮಾಡಬಹುದು. ಸಲ್ಮಾನ್ ಖಾನ್ ಅವರು ಹಿಂದಿ ಚಿತ್ರರಂಗದ ಬಾಕ್ಸ್ ಆಫೀಸ್ ಬಾದ್​​ಶಾ. ಅವರ ನಟನೆಯ ‘ಟೈಗರ್​ 3’ ಸಿನಿಮಾ ಈ ವರ್ಷ ರಿಲೀಸ್ ಆಗುತ್ತಿದೆ. ಈ ಚಿತ್ರದ ಗಳಿಕೆ ಎಷ್ಟಾಗಬಹುದು ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ‘ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚಲ್ಲ’; ‘ಪಠಾಣ್​’ ಟೀಕಿಸಿದವರಿಗೆ ಪ್ರಕಾಶ್ ರಾಜ್ ತಿರುಗೇಟು

ತೆಲುಗಿನಲ್ಲಿ ‘ಸಲಾರ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಇದಕ್ಕೆ ಕಾರಣ ನಿರ್ದೇಶಕ ಪ್ರಶಾಂತ್ ನೀಲ್​. ‘ಕೆಜಿಎಫ್ 2’ ಬಳಿಕ ಅವರ ನಿರ್ದೇಶನದ ‘ಸಲಾರ್​’ ತೆರೆಗೆ ಬರುತ್ತಿದೆ. ಈ ಕಾರಣಕ್ಕೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾ ಕೂಡ ‘ಪಠಾಣ್​’ ಕಲೆಕ್ಷನ್ ಬೀಟ್ ಮಾಡಬಹುದು. ಇನ್ನೂ ಅನೇಕ ಸ್ಟಾರ್​ ಚಿತ್ರಗಳು ರಿಲೀಸ್​ಗೆ ರೆಡಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:29 am, Tue, 7 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ