AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಟು ನಾಟು..’ ಜತೆ ಸ್ಪರ್ಧೆಯಲ್ಲಿರುವ ನಾಲ್ಕು ಹಾಡುಗಳು ಇವೇ ನೋಡಿ; ಯಾವುದಕ್ಕೆ ಚಾನ್ಸ್​?

‘ನಾಟು ನಾಟು..’ ಹಾಡು ಈ ಬಾರಿಯ ಆಸ್ಕರ್​​ಗೆ ನಾಮನಿರ್ದೇಶನಗೊಂಡಿದೆ. ಈ ಚಿತ್ರಕ್ಕೆ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ

‘ನಾಟು ನಾಟು..’ ಜತೆ ಸ್ಪರ್ಧೆಯಲ್ಲಿರುವ ನಾಲ್ಕು ಹಾಡುಗಳು ಇವೇ ನೋಡಿ; ಯಾವುದಕ್ಕೆ ಚಾನ್ಸ್​?
ಆಸ್ಕರ್ ರೇಸ್​ನಲ್ಲಿರುವ ಹಾಡುಗಳು..
ರಾಜೇಶ್ ದುಗ್ಗುಮನೆ
|

Updated on: Jan 25, 2023 | 8:10 AM

Share

ಈ ಬಾರಿಯ ಆಸ್ಕರ್​ (Oscar 2023) ಭಾರತೀಯರ ಪಾಲಿಗೆ ವಿಶೇಷ ಎನಿಸಿಕೊಳ್ಳಲಿದೆ. ಭಾರತದ ಎರಡು ಕಿರುಚಿತ್ರಗಳು ಹಾಗೂ ‘ಆರ್​ಆರ್​ಆರ್​’ ಚಿತ್ರದ (RRR Movie) ‘ನಾಟು ನಾಟು..’ ಹಾಡು ನಾಮನಿರ್ದೇಶನಗೊಂಡಿದೆ. ಪ್ರತಿ ವಿಭಾಗದಲ್ಲಿ ಒಟ್ಟೂ ಐದು ಪ್ರಾಜೆಕ್ಟ್​​ಗಳು ನಾಮನಿರ್ದೇನಗೊಳ್ಳುತ್ತವೆ. ‘ನಾಟು ನಾಟು..’ ಹಾಡಿನ ಜತೆ ನಾಲ್ಕು ಹಾಡುಗಳು ನಾಮನಿರ್ದೇಶನಗೊಂಡಿವೆ.

‘ನಾಟು ನಾಟು..’ ಹಾಡು ಈ ಬಾರಿಯ ಆಸ್ಕರ್​​ಗೆ ನಾಮನಿರ್ದೇಶನಗೊಂಡಿದೆ. ಈ ಚಿತ್ರಕ್ಕೆ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದ್ರಬೋಸ್ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

‘ಲಿಫ್ಟ್​ ಮಿ ಅಪ್​’ ಹಾಡು ರೇಸ್​ನಲ್ಲಿದೆ. ಇದು ಇಂಗ್ಲಿಷ್ ಹಾಡು. ಇದನ್ನು ಗಾಯಕಿ ರಿಯಾನ ಅವರು ಹಾಡಿದ್ದಾರೆ. ಇಂಗ್ಲಿಷ್​ನ ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಕೂಡ ರೇಸ್​​ನಲ್ಲಿದೆ.

ಇದನ್ನೂ ಓದಿ
Image
Oscars 2023: ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕಿಲ್ಲ ಆಸ್ಕರ್​ ನಾಮಿನೇಷನ್​; ಪ್ರತಿಷ್ಠಿತ ಪ್ರಶಸ್ತಿಗೆ ನೆಟ್ಟಿಗರ ಬಹಿಷ್ಕಾರ
Image
Oscar 2023 Nomination: ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟ; ಭಾರತಕ್ಕೆ ಬಂಪರ್​ ಚಾನ್ಸ್​
Image
Oscar nominations 2023: ಆಸ್ಕರ್ ನಾಮಿನೇಷನ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ; ಭಾರತೀಯರಲ್ಲಿ ಕುತೂಹಲ

ಇದನ್ನೂ ಓದಿ: Oscar 2023 Nomination: ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟ; ಭಾರತಕ್ಕೆ ಬಂಪರ್​ ಚಾನ್ಸ್​

‘ಗೋಲ್ಡನ್ ಗ್ಲೋಬ್ಸ್​​ 2023’ರಲ್ಲಿ ‘ನಾಟು ನಾಟು..’ ಹಾಡಿಗೆ ಪ್ರಶಸ್ತಿ ಸಿಕ್ಕಿರುವುದರಿಂದ ಈ ಹಾಡಿಗೆ ಈ ಬಾರಿ ಆಸ್ಕರ್ ಒಲಿಯುವ ಸಾಧ್ಯತೆ ಹೆಚ್ಚಿದೆ ಎಂದು ಅನೇಕರು ಊಹಿಸುತ್ತಿದ್ದಾರೆ.

ರಾಜಮೌಳಿ ಪತ್ರ

‘ನನ್ನ ದೊಡ್ಡಣ್ಣ (ಎಂಎಂ ಕೀರವಾಣಿ) ಅವರು ನನ್ನ ಚಿತ್ರದಲ್ಲಿನ ಹಾಡಿಗೆ ಆಸ್ಕರ್ ನಾಮನಿರ್ದೇಶನ ಪಡೆದಿದ್ದಾರೆ. ನಾನು ಹೆಚ್ಚಿನದನ್ನು ಕೇಳಲಾರೆ. ಚರಣ್ ಹಾಗೂ ತಾರಕ್​​ಗಿಂತ ಹೆಚ್ಚಿನ ಹುರುಪಿನೊಂದಿಗೆ ನಾಟು ನಾಟು ಹಾಡಿಗೆ ನಾನು ಡಾನ್ಸ್ ಮಾಡುತ್ತಿದ್ದೇನೆ. ಚಂದ್ರ ಬೋಸ್​ ಅವರೇ ಅಭಿನಂದನೆಗಳು. ಆಸ್ಕರ್ ವೇದಿಕೆ ಮೇಲೆ ನಮ್ಮ ಹಾಡು’ ಎಂದು ರಾಜಮೌಳಿ ಪತ್ರ ಆರಂಭಿಸಿದ್ದಾರೆ.

‘ಪ್ರೇಮ್ ಮಾಸ್ಟರ್​ ನಿಮಗೆ ನನ್ನ ಧನ್ಯವಾದ. ಹಾಡಿಗೆ ನಿಮ್ಮ ಕೊಡುಗೆ ಬೆಲೆ ಕಟ್ಟಲಾಗದ್ದು. ನನ್ನ ವೈಯಕ್ತಿಕ ಆಸ್ಕರ್ ನಿಮಗೆ ಸಲ್ಲುತ್ತದೆ. ತಾರಕ್ ಹಾಗೂ ಚರಣ್​ ನಿಮಗೂ ಧನ್ಯವಾದ. ನಾನು ನಿಮಗೆ ತುಂಬಾ ಟಾರ್ಚರ್ ಕೊಟ್ಟಿದ್ದೆ. ಅದಕ್ಕೆ ಕ್ಷಮೆ ಇರಲಿ’ ಎಂದಿರುವ ರಾಜಮೌಳಿ ಈ ಹಾಡಿಗಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?