AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಟು ನಾಟು..’ ಜತೆ ಸ್ಪರ್ಧೆಯಲ್ಲಿರುವ ನಾಲ್ಕು ಹಾಡುಗಳು ಇವೇ ನೋಡಿ; ಯಾವುದಕ್ಕೆ ಚಾನ್ಸ್​?

‘ನಾಟು ನಾಟು..’ ಹಾಡು ಈ ಬಾರಿಯ ಆಸ್ಕರ್​​ಗೆ ನಾಮನಿರ್ದೇಶನಗೊಂಡಿದೆ. ಈ ಚಿತ್ರಕ್ಕೆ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ

‘ನಾಟು ನಾಟು..’ ಜತೆ ಸ್ಪರ್ಧೆಯಲ್ಲಿರುವ ನಾಲ್ಕು ಹಾಡುಗಳು ಇವೇ ನೋಡಿ; ಯಾವುದಕ್ಕೆ ಚಾನ್ಸ್​?
ಆಸ್ಕರ್ ರೇಸ್​ನಲ್ಲಿರುವ ಹಾಡುಗಳು..
ರಾಜೇಶ್ ದುಗ್ಗುಮನೆ
|

Updated on: Jan 25, 2023 | 8:10 AM

Share

ಈ ಬಾರಿಯ ಆಸ್ಕರ್​ (Oscar 2023) ಭಾರತೀಯರ ಪಾಲಿಗೆ ವಿಶೇಷ ಎನಿಸಿಕೊಳ್ಳಲಿದೆ. ಭಾರತದ ಎರಡು ಕಿರುಚಿತ್ರಗಳು ಹಾಗೂ ‘ಆರ್​ಆರ್​ಆರ್​’ ಚಿತ್ರದ (RRR Movie) ‘ನಾಟು ನಾಟು..’ ಹಾಡು ನಾಮನಿರ್ದೇಶನಗೊಂಡಿದೆ. ಪ್ರತಿ ವಿಭಾಗದಲ್ಲಿ ಒಟ್ಟೂ ಐದು ಪ್ರಾಜೆಕ್ಟ್​​ಗಳು ನಾಮನಿರ್ದೇನಗೊಳ್ಳುತ್ತವೆ. ‘ನಾಟು ನಾಟು..’ ಹಾಡಿನ ಜತೆ ನಾಲ್ಕು ಹಾಡುಗಳು ನಾಮನಿರ್ದೇಶನಗೊಂಡಿವೆ.

‘ನಾಟು ನಾಟು..’ ಹಾಡು ಈ ಬಾರಿಯ ಆಸ್ಕರ್​​ಗೆ ನಾಮನಿರ್ದೇಶನಗೊಂಡಿದೆ. ಈ ಚಿತ್ರಕ್ಕೆ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದ್ರಬೋಸ್ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

‘ಲಿಫ್ಟ್​ ಮಿ ಅಪ್​’ ಹಾಡು ರೇಸ್​ನಲ್ಲಿದೆ. ಇದು ಇಂಗ್ಲಿಷ್ ಹಾಡು. ಇದನ್ನು ಗಾಯಕಿ ರಿಯಾನ ಅವರು ಹಾಡಿದ್ದಾರೆ. ಇಂಗ್ಲಿಷ್​ನ ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಕೂಡ ರೇಸ್​​ನಲ್ಲಿದೆ.

ಇದನ್ನೂ ಓದಿ
Image
Oscars 2023: ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕಿಲ್ಲ ಆಸ್ಕರ್​ ನಾಮಿನೇಷನ್​; ಪ್ರತಿಷ್ಠಿತ ಪ್ರಶಸ್ತಿಗೆ ನೆಟ್ಟಿಗರ ಬಹಿಷ್ಕಾರ
Image
Oscar 2023 Nomination: ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟ; ಭಾರತಕ್ಕೆ ಬಂಪರ್​ ಚಾನ್ಸ್​
Image
Oscar nominations 2023: ಆಸ್ಕರ್ ನಾಮಿನೇಷನ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ; ಭಾರತೀಯರಲ್ಲಿ ಕುತೂಹಲ

ಇದನ್ನೂ ಓದಿ: Oscar 2023 Nomination: ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟ; ಭಾರತಕ್ಕೆ ಬಂಪರ್​ ಚಾನ್ಸ್​

‘ಗೋಲ್ಡನ್ ಗ್ಲೋಬ್ಸ್​​ 2023’ರಲ್ಲಿ ‘ನಾಟು ನಾಟು..’ ಹಾಡಿಗೆ ಪ್ರಶಸ್ತಿ ಸಿಕ್ಕಿರುವುದರಿಂದ ಈ ಹಾಡಿಗೆ ಈ ಬಾರಿ ಆಸ್ಕರ್ ಒಲಿಯುವ ಸಾಧ್ಯತೆ ಹೆಚ್ಚಿದೆ ಎಂದು ಅನೇಕರು ಊಹಿಸುತ್ತಿದ್ದಾರೆ.

ರಾಜಮೌಳಿ ಪತ್ರ

‘ನನ್ನ ದೊಡ್ಡಣ್ಣ (ಎಂಎಂ ಕೀರವಾಣಿ) ಅವರು ನನ್ನ ಚಿತ್ರದಲ್ಲಿನ ಹಾಡಿಗೆ ಆಸ್ಕರ್ ನಾಮನಿರ್ದೇಶನ ಪಡೆದಿದ್ದಾರೆ. ನಾನು ಹೆಚ್ಚಿನದನ್ನು ಕೇಳಲಾರೆ. ಚರಣ್ ಹಾಗೂ ತಾರಕ್​​ಗಿಂತ ಹೆಚ್ಚಿನ ಹುರುಪಿನೊಂದಿಗೆ ನಾಟು ನಾಟು ಹಾಡಿಗೆ ನಾನು ಡಾನ್ಸ್ ಮಾಡುತ್ತಿದ್ದೇನೆ. ಚಂದ್ರ ಬೋಸ್​ ಅವರೇ ಅಭಿನಂದನೆಗಳು. ಆಸ್ಕರ್ ವೇದಿಕೆ ಮೇಲೆ ನಮ್ಮ ಹಾಡು’ ಎಂದು ರಾಜಮೌಳಿ ಪತ್ರ ಆರಂಭಿಸಿದ್ದಾರೆ.

‘ಪ್ರೇಮ್ ಮಾಸ್ಟರ್​ ನಿಮಗೆ ನನ್ನ ಧನ್ಯವಾದ. ಹಾಡಿಗೆ ನಿಮ್ಮ ಕೊಡುಗೆ ಬೆಲೆ ಕಟ್ಟಲಾಗದ್ದು. ನನ್ನ ವೈಯಕ್ತಿಕ ಆಸ್ಕರ್ ನಿಮಗೆ ಸಲ್ಲುತ್ತದೆ. ತಾರಕ್ ಹಾಗೂ ಚರಣ್​ ನಿಮಗೂ ಧನ್ಯವಾದ. ನಾನು ನಿಮಗೆ ತುಂಬಾ ಟಾರ್ಚರ್ ಕೊಟ್ಟಿದ್ದೆ. ಅದಕ್ಕೆ ಕ್ಷಮೆ ಇರಲಿ’ ಎಂದಿರುವ ರಾಜಮೌಳಿ ಈ ಹಾಡಿಗಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು