AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಅಡುಗೆ ಮಾಡಿ 1.8 ಕೋಟಿ ರೂಪಾಯಿ ಗೆದ್ದ ಭಾರತೀಯ ಯುವಕ

ಈ ರಿಯಾಲಿಟಿ ಶೋನ ಫಿನಾಲೆಯಲ್ಲಿ ಆಸ್ಟ್ರೆಲಿಯಾದ ಪೆಟೆ ಹಾಗೂ ಬಾಂಗ್ಲಾದೇಶದ ಕಿಶ್ವರ್​ ಚೌಧರಿ ಕಡೆಯಿಂದ ಭಾರೀ ಕಾಂಪಿಟೇಷನ್​ ಇತ್ತು. ಅಂತಿಮವಾಗಿ ಜಸ್ಟಿನ್​ ವಿಜೇತರಾಗಿದ್ದಾರೆ.

ವಿದೇಶದಲ್ಲಿ ಅಡುಗೆ ಮಾಡಿ 1.8 ಕೋಟಿ ರೂಪಾಯಿ ಗೆದ್ದ ಭಾರತೀಯ ಯುವಕ
ವಿದೇಶದಲ್ಲಿ ಅಡುಗೆ ಮಾಡಿ 1.8 ಕೋಟಿ ರೂಪಾಯಿ ಗೆದ್ದ ಭಾರತೀಯ ಯುವಕ
TV9 Web
| Edited By: |

Updated on: Jul 14, 2021 | 9:40 PM

Share

ರಿಯಾಲಿಟಿ ಶೋಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿವೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ರಿಯಾಲಿಟಿ ಶೋಗಳಿಗೆ ದೊಡ್ಡಮಟ್ಟದ ಬೇಡಿಕೆ ಇದೆ. ಈಗ ಭಾರತ ಮೂಲದ ಜಸ್ಟಿನ್​ ನಾರಾಯಣ್​ ಎನ್ನುವ 27 ವರ್ಷದ ಯುವಕ ‘ಮಾಸ್ಟರ್​ಚೆಫ್​ ಆಸ್ಟ್ರೇಲಿಯಾ ಸೀಸನ್​ 13’ರ ವಿಜೇತರಾಗಿದ್ದಾರೆ. ಈ ಮೂಲಕ 1.86 ಕೋಟಿ ರೂಪಾಯಿ (2.5 ಲಕ್ಷ ಡಾಲರ್​) ಪ್ರಶಸ್ತಿ ಹಣ ಗೆದ್ದಿದ್ದಾರೆ.

ಈ ರಿಯಾಲಿಟಿ ಶೋನ ಫಿನಾಲೆಯಲ್ಲಿ ಆಸ್ಟ್ರೆಲಿಯಾದ ಪೆಟೆ ಹಾಗೂ ಬಾಂಗ್ಲಾದೇಶದ ಕಿಶ್ವರ್​ ಚೌಧರಿ ಕಡೆಯಿಂದ ಭಾರೀ ಕಾಂಪಿಟೇಷನ್​ ಇತ್ತು. ಅಂತಿಮವಾಗಿ ಜಸ್ಟಿನ್​ ವಿಜೇತರಾಗಿದ್ದಾರೆ. ಮೊದಲ ರನ್ನರ್​ ಅಪ್​ ಆಗಿ ಪೆಟೆ ಆಯ್ಕೆಯಾದರೆ, ಎರಡನೇ ರನ್ನರ್​ ಅಪ್​ ಸ್ಥಾನಕ್ಕೆ ಕಿಶ್ವರ್​ ಖುಷಿಪಟ್ಟಿದ್ದಾರೆ.

ಮಾಸ್ಟರ್​ಚೆಫ್​ ಆಸ್ಟ್ರೇಲಿಯಾ ರಿಯಾಲಿಟಿಶೋನಲ್ಲಿ ಸಾಕಷ್ಟು ಏರಳಿತಗಳನ್ನು ಜಸ್ಟಿನ್​ ಕಂಡಿದ್ದರು. ಆದರೆ, ಇತ್ತೀಚೆಗೆ ಅವರ ಪರ್ಫಾರ್ಮೆನ್ಸ್​ ಉತ್ತಮವಾಗಿತ್ತು. ಅವರು ತಮ್ಮ ಅದ್ಭುತ ಅಡುಗೆ ಮೂಲಕ ಜಡ್ಜ್​ಗಳನ್ನು ಸೆಳೆದುಕೊಂಡಿದ್ದರು. ಅವರು ಮಾಡುತ್ತಿದ್ದ ಅಡುಗೆ ಜಡ್ಜ್​ಗಳಿಗೆ ಇಷ್ಟವಾಗಿತ್ತು. ಹೀಗಾಗಿ, ಅಂತಿಮವಾಗಿ ಅವರೇ ವಿಜೇತರಾದರು.

ಜಸ್ಟಿಸ್​ ನಾರಾಯಣ್​ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಜಸ್ಟಿನ್​ ತಮ್ಮ 13ನೇ ವಯಸ್ಸಿಗೆ ಅಡುಗೆ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದರು. ಭಾರತೀಯ ಶೈಲಿಯ ಅಡುಗೆ ಹಾಗೂ ಪಾಶ್ಚಿಮಾತ್ಯ ಅಡುಗೆ ಎರಡರಲ್ಲೂ ಜಸ್ಟಿನ್​ ಪಳಗಿದ್ದಾರೆ. ಇಂಡಿಯನ್​ ಚಿಕನ್​ ಟ್ಯಾಕೋಸ್​, ಇಂಡಿಯನ್​ ಚಿಕನ್​ ಕರ್ರಿ ಸೇರಿ ಸಾಕಷ್ಟು ವಿಧದ ಅಡುಗೆಯನ್ನು ಜಸ್ಟಿನ್​ ರಿಯಾಲಿಟಿ ಶೋನಲ್ಲಿ ಮಾಡಿದ್ದರು.

2017ರಲ್ಲಿ ಜಸ್ಟಿನ್​ ಭಾರತಕ್ಕೆ ಬಂದಿದ್ದರು. ಇಲ್ಲಿಯ ಸಂಸ್ಕೃತಿ, ಇತಿಹಾಸ, ಜನರು ಹಾಗೂ ಆಹಾರ ಸಂಸ್ಕೃತಿ ಅವರ ಮೇಲೆ ಸಾಕಷ್ಟು ಪ್ರಭಾವ ಬೀರಿತ್ತು. ಆಸ್ಟ್ರೇಲಿಯಾದಲ್ಲಿ ಫುಡ್​ ಟ್ರಕ್​ ಆರಂಭಿಸುವ ಆಲೋಚನೆಯನ್ನು ಜಸ್ಟಿನ್​ ಹೊಂದಿದ್ದಾರೆ. ಇದರಲ್ಲಿ ಭಾರತೀಯ ಶೈಲಿಯ ಅಡುಗೆಯೂ ಇರಲಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ಹಿರಿಯ ನಟಿ ವಿರುದ್ಧ ಗಂಭೀರ ಆರೋಪ ಮಾಡಿದ ಬಿಗ್​ ಬಾಸ್​ ಸ್ಪರ್ಧಿ; ರಿಯಾಲಿಟಿ ಶೋದಿಂದ ಹೊರ ಬರುವ ನಿರ್ಧಾರ

ಕರಾವಳಿ ಸ್ಪೆಷಲ್ ಪತ್ರೊಡೆ; ಹೊಸ ತರಹದ ಅಡುಗೆಯನ್ನೊಮ್ಮೆ ಮಾಡಿ ಸವಿಯಿರಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್