AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​ ಫ್ಲಾಪ್​ ಹೀರೋ ಎಂದು ನಾಯಕಿಯರು ದೂರ ಸರಿದಾಗ ಮುಂದೆ ಬಂದಿದ್ದು ಜಯಾ ಬಚ್ಚನ್​; ಅಲ್ಲಿಂದ ಶುರುವಾಯ್ತು ಪ್ರೇಮ ಕಹಾನಿ

ಮಾಡರ್ನ್​ ಹಾಗೂ ಟ್ರೆಡಿಷನಲ್​ ಅವತಾರ ತಾಳುವ ಹುಡುಗಿ ಎಂದರೆ ಅಮಿತಾಭ್​ಗೆ ಇಷ್ಟವಾಗಿತ್ತಂತೆ. ಮ್ಯಾಗಜಿನ್​ ಕವರ್​ ಫೋಟೋದಲ್ಲಿ ಜಯಾ ಅವರನ್ನು ನೋಡಿದಾಗ ‘ಇವಳು ನಾನು ಅಂದುಕೊಂಡ ರೀತಿಯಲ್ಲೇ ಇದ್ದಾಳೆ’ ಎಂದುಕೊಂಡಿದ್ದರಂತೆ.

ಅಮಿತಾಭ್​ ಫ್ಲಾಪ್​ ಹೀರೋ ಎಂದು ನಾಯಕಿಯರು ದೂರ ಸರಿದಾಗ ಮುಂದೆ ಬಂದಿದ್ದು ಜಯಾ ಬಚ್ಚನ್​; ಅಲ್ಲಿಂದ ಶುರುವಾಯ್ತು ಪ್ರೇಮ ಕಹಾನಿ
ಅಮಿತಾಭ್​ ಬಚ್ಚನ್​ -ಜಯಾ ಬಚ್ಚನ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 03, 2021 | 7:22 AM

Share

ಅಮಿತಾಭ್​ ಬಚ್ಚನ್​ ಹಾಗೂ ಪತ್ನಿ ಜಯಾ ಬಚ್ಚನ್​ ಜೋಡಿಗೆ ಇಂದು 48ನೇ ವರ್ಷದ ಮದುವೆ ವಾರ್ಷಿಕೋತ್ಸವದ ಸಂಭ್ರಮ. ಅನೇಕರಿಗೆ ಇವರ ದಾಂಪತ್ಯ ಮಾದರಿಯಾಗಿದೆ. ಇವರ ಹೊಂದಾಣಿಕೆ ನೋಡಿ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಿದೆ. ವಿಶೇಷ ಎಂದರೆ ಅಮಿತಾಭ್​ ಹಾಗೂ ಜಯಾ ಅವರದ್ದು ಪ್ರೇಮ ವಿವಾಹ. ಇಬ್ಬರೂ ಪರಸ್ಪರ ಪ್ರೀತಿಸಿ, ಕುಟುಂಬದವರ ಒಪ್ಪಿಗೆ ಪಡೆದು 1973ರ ಜೂನ್​ 3ರಂದು ಮದುವೆ ಆಗಿದ್ದರು.

ಮಾಡರ್ನ್​ ಹಾಗೂ ಟ್ರೆಡಿಷನಲ್​ ಅವತಾರ ತಾಳುವ ಹುಡುಗಿ ಎಂದರೆ ಅಮಿತಾಭ್​ಗೆ ಇಷ್ಟವಾಗಿತ್ತಂತೆ. ಮ್ಯಾಗಜಿನ್​ ಕವರ್​ ಫೋಟೋದಲ್ಲಿ ಜಯಾ ಅವರನ್ನು ನೋಡಿದಾಗ ‘ಇವಳು ನಾನು ಅಂದುಕೊಂಡ ರೀತಿಯಲ್ಲೇ ಇದ್ದಾಳೆ’ ಎಂದುಕೊಂಡಿದ್ದರಂತೆ. ಜಯಾ ಅವರ ಕಣ್ಣುಗಳು ಅಮಿತಾಭ್​ಗೆ ತುಂಬಾನೇ ಇಷ್ಟವಾಗಿದ್ದವಂತೆ. ಅವರ ಜತೆಯೇ ನಟಿಸೋಕೆ ಅವಕಾಶ ಸಿಕ್ಕಾಗ ಅಮಿತಾಭ್​ ಸಾಕಷ್ಟು ಖುಷಿಪಟ್ಟಿದ್ದರು.

ಆರಂಭದಲ್ಲಿ, ಅಮಿತಾಭ್​ ಓರ್ವ ಫ್ಲಾಪ್​ ಹೀರೋ ಎನ್ನುವ ಕಾರಣಕ್ಕೆ ಅವರ ಜತೆ ನಟಿಸೋಕೆ ನಾಯಕಿಯರು ಹಿಂದೇಟು ಹಾಕುತ್ತಿದ್ದರು. ಆ ಸಮಯದಲ್ಲೂ ಅಮಿತಾಭ್​ ಜತೆ ನಟಿಸೋಕೆ ಜಯಾ ಒಪ್ಪಿದ್ದರು. ಈ ಮೂಲಕ ಜಯಾ ಹಾಗೂ ಅಮಿತಾಭ್ ಪ್ರಯಾಣ ಆರಂಭವಾಯಿತು. ಅಮಿತಾಭ್​ ಹಾಗೂ ಜಯಾ ಮೊದಲ ಬಾರಿಗೆ ಭೇಟಿ ಮಾಡಿದ್ದು ಬನ್ಸಿ ಬಿರ್ಜು (1972) ಚಿತ್ರದ ಸೆಟ್​ನಲ್ಲಿ. ಈ ಸಿನಿಮಾದಲ್ಲಿ ಇಬ್ಬರೂ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ತೆರೆಕಂಡ ಮರುವರ್ಷವೆ ‘ಜಂಜೀರ್’​ ಚಿತ್ರದಲ್ಲೂ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದರು.

ಜಂಜೀರ್​ ಸಿನಿಮಾದಲ್ಲಿ ಅಮಿತಾಭ್​ ಹಾಗೂ ಜಯಾ ಹತ್ತಿರವಾದರು. ಈ ಚಿತ್ರ ಹಿಟ್​ ಆದರೆ ಜಯಾ ಅವರನ್ನು ಲಂಡನ್​ಗೆ ಕರೆದುಕೊಂಡು ಹೋಗಿ ಸೆಲೆಬ್ರೇಟ್​ ಮಾಡಬೇಕು ಎನ್ನುವ ಕನಸನ್ನು ಅಮಿತಾಭ್​ ಕಂಡಿದ್ದರು. ಈ ವಿಚಾರ ಅಮಿತಾಭ್​ ತಂದೆ ಹರಿವಂಶ್​ ರೈ ಬಚನ್​ಗೆ ತಿಳಿಯಿತು. ಆಗ ಅವರು ಹೇಳಿದ್ದು ಒಂದೇ ಮಾತು. ‘ನೀವು ವಿದೇಶಕ್ಕೆ ಹೋಗುವುದಾದರೆ ಮೊದಲು ಮದುವೆ ಆಗಿ. ಆ ನಂತರ ವಿದೇಶಕ್ಕೆ ಹೋಗೋಕೆ ನನ್ನ ಅಭ್ಯಂತರವಿಲ್ಲ’ ಎಂದಿದ್ದರು.

ಅಂತೆಯೇ 1973ರಲ್ಲಿ ಅಮಿತಾಭ್​-ಜಯಾ ಮದುವೆ ಆದರು. ನಂತರ ಜಯಾ ಹಾಗೂ ಅಮಿತಾಭ್​ ಅಭಿಮಾನ್​, ಚುಪ್​ಚುಪ್​ಕೆ, ಶೋಲೆ, ಕಭಿ ಖುಷಿ ಕಭಿ ಗಂ ಸಿನಿಮಾಗಳಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು.

ಇದನ್ನೂ ಓದಿ: 2 ಕೋಟಿ ರೂ. ದೇಣಿಗೆ ನೀಡಿ, ಮಕ್ಕಳ ದತ್ತು ಪಡೆದು, ನೂರಾರು ರೈತರ ಸಾಲ ತೀರಿಸಿದ ಅಮಿತಾಭ್​ಗೆ ಯಾಕಿಷ್ಟು ಕೆಟ್ಟ ಕಮೆಂಟ್​?

‘ನಾನು ದೇಣಿಗೆ ಕೇಳಲ್ಲ, ಕೊಡ್ತೀನಿ’; ಬೇರೆ ಸ್ಟಾರ್​ಗಳಿಗಿಂತ ಭಿನ್ನ ಹೆಜ್ಜೆ ಇಟ್ಟ ಅಮಿತಾಭ್​

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ