AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಖಿ ಮಲತಂದೆಯ ಬಗ್ಗೆ ನಿಮಗೆಷ್ಟು ಗೊತ್ತು? ವಿವಾದಗಳ ಕ್ವೀನ್ ಬಗ್ಗೆ ಇಲ್ಲಿದೆ ಮಾಹಿತಿ

ಪತಿಯ ಮರಣದ ನಂತರ ರಾಖಿ ಸಾವಂತ್ ತಾಯಿ ಜಯಾಗೆ ಒಂಟಿತನ ಕಾಡಿತು. ಹೀಗಾಗಿ, ಅವರು ಮರುಮದುವೆಯಾಗಲು ನಿರ್ಧರಿಸಿದರು. ಜಯಾ ಅವರು ಪೊಲೀಸ್ ಪೇದೆ ಆನಂದ್ ಸಾವಂತ್ ಅವರನ್ನು ವಿವಾಹವಾದರು.

ರಾಖಿ ಮಲತಂದೆಯ ಬಗ್ಗೆ ನಿಮಗೆಷ್ಟು ಗೊತ್ತು? ವಿವಾದಗಳ ಕ್ವೀನ್ ಬಗ್ಗೆ ಇಲ್ಲಿದೆ ಮಾಹಿತಿ
ರಾಖಿ ಸಾವಂತ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 25, 2023 | 12:58 PM

Share

ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿದ್ದಾರೆ. ಅವರು ಮಾಡುವ ಎಡವಟ್ಟುಗಳು, ವಿವಾದಗಳು ಒಂದೆರಡಲ್ಲ. ಇದರಿಂದಾಗಿ ರಾಖಿ ಹಲವು ಬಾರಿ ಟ್ರೋಲ್​​ಗೆ ಒಳಗಾಗಿದ್ದಾರೆ. ರಾಖಿ ಅವರ ಹಲವು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತವೆ. ಕೆಲವು ತಿಂಗಳ ಹಿಂದೆ ರಾಖಿಯ ತಾಯಿ ಜಯಾ ತೀರಿಕೊಂಡರು. ರಾಖಿ ಸಾವಂತ್ ಮಲತಂದೆಯ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಆ ಬಗ್ಗೆ ಇಲ್ಲಿದೆ ವಿವರ.

ರಾಖಿ ಸಾವಂತ್ ತಂದೆ ಮೃತಪಟ್ಟರು. ಇದಾದ ಬಳಿಕ ಜಯಾ ಮರು ಮದುವೆಯಾದರು. ಒಂದು ಮಾಹಿತಿಯ ಪ್ರಕಾರ ರಾಖಿ ಸಾವಂತ್ ಅವರ ತಂದೆ ಸುಮಾರು 15 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಪತಿಯ ಮರಣದ ನಂತರ ಜಯಾಗೆ ಒಂಟಿತನ ಕಾಡಿತು. ಹೀಗಾಗಿ, ಅವರು ಮರುಮದುವೆಯಾಗಲು ನಿರ್ಧರಿಸಿದರು. ಜಯಾ ಅವರು ಪೊಲೀಸ್ ಪೇದೆ ಆನಂದ್ ಸಾವಂತ್ ಅವರನ್ನು ವಿವಾಹವಾದರು.

ರಾಖಿ ತಾಯಿಯ ಎರಡನೇ ಮದುವೆಗೆ ಮೊದಲು, ರಾಖಿಯ ಹೆಸರು ನೀರೂ ಭೇದ ಎಂದಿತ್ತು. ತಾಯಿ ಮರುಮದುವೆಯಾದ ನಂತರ ತಮ್ಮ ಹೆಸರನ್ನು ರಾಖಿ ಬದಲಾಯಿಸಿಕೊಂಡರು. ರಾಖಿಯ ಮಲ ತಂದೆ ಕೂಡ ಹೃದಯಾಘಾತದಿಂದ ನಿಧನರಾದರು. ರಾಖಿ ಸಾವಂತ್ ಅವರ ತಾಯಿ ಜಯಾ ಭೇದಾ ಅವರು 28 ಜನವರಿ 2023ರಂದು ಜುಹುವಿನ ಕ್ರಿಟಿಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ರಾಖಿ ಸಾವಂತ್ ಅವರ ಒಡಹುಟ್ಟಿದವರ ಬಗ್ಗೆಯೂ ಕೆಲವೇ ಜನರಿಗೆ ತಿಳಿದಿದೆ. ರಾಖಿ ಸಾವಂತ್‌ಗೆ ಒಬ್ಬ ಸಹೋದರ ಮತ್ತು ಒಬ್ಬ ಸಹೋದರಿ ಇದ್ದಾರೆ. ರಾಖಿ ಸಾವಂತ್ ಅವರ ಸಹೋದರನ ಹೆಸರು ರಾಕೇಶ್ ಸಾವಂತ್ ಮತ್ತು ಅವರು ನಿರ್ದೇಶಕರಾಗಿದ್ದಾರೆ. ರಾಖಿಯ ತಂಗಿಯ ಹೆಸರು ಉಷಾ ಸಾವಂತ್. ಅವರು ಕೂಡ ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಉಷಾ ಸಾವಂತ್ ಅವರು ಎಂದಿಗೂ ರಾಖಿ ಜೊತೆ ಕಾಣಿಸಿಕೊಂಡಿಲ್ಲ.

ಇದನ್ನೂ ಓದಿ: ‘ಗಂಡಸರ ಜೊತೆಗೂ ಆದಿಲ್​ ಖಾನ್​ ಲೈಂಗಿಕ ಕ್ರಿಯೆ ನಡೆಸುತ್ತಿದ್ದ’: ಗಂಡನ ಬಗ್ಗೆ ರಾಖಿ ಸಾವಂತ್ ಆರೋಪ

ರಾಖಿ ಸಾವಂತ್ ಮುಂಬೈನಲ್ಲಿ ಎರಡು ಅಪಾರ್ಟ್‌ಮೆಂಟ್‌ಗಳನ್ನು ಹೊಂದಿದ್ದಾರೆ. ಇದರ ಬೆಲೆ ಕೋಟ್ಯಂತರ ರೂಪಾಯಿ ಇದೆ. ರಾಖಿ ಸಾವಂತ್ ಅವರ ಒಟ್ಟು ಆಸ್ತಿ 37 ಕೋಟಿ ರೂಪಾಯಿ ಎನ್ನಲಾಗಿದೆ. ರಾಖಿ ಸಾವಂತ್ ಬಳಿ ಒಳ್ಳೆಯ ಕಾರ್ ಕಲೆಕ್ಷನ್ ಕೂಡ ಇದೆ. ವಿವಾದಗಳ ನಡುವೆಯೂ ರಾಖಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ರಾಖಿ ಯಾವಾಗಲೂ ತನ್ನ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರಲು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:53 pm, Sat, 25 November 23

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ